Home / ಕವನ / ಕವಿತೆ / ಕತ್ತಲ ರಾಣಿ

ಕತ್ತಲ ರಾಣಿ

ನಟ್ಟ ನಡು ಇರುಳಲ್ಲಿ ಅರಳಿದ ಹೂವು
ನೆಟ್ಟ ಬಾವುಟದಲ್ಲಿ ಹೆಪ್ಪೊಡೆದ ನೋವು
ನಡುವೆ ಉರಳುವ ಚಕ್ರ ಚಲನೆ
ಸಾವಯವ ಮೈಮಾಟದಲ್ಲಿ
ಭಾವ ಬುದ್ಧಿಗಳ ಕೂಟದಲ್ಲಿ
ಕತ್ತಲ ರಾಣಿಯ ಮಿಂಚಿನ ಪ್ರತಿಮೆ!

ಕುಶಲವೆ ನನ್ನ ಕತ್ತಲ ರಾಣಿ?
ವಸಾಹತುವಿನ ಹುತ್ತದಲ್ಲಿ
ವಿಷವಿಲ್ಲದ ಚಿತ್ತದಲ್ಲಿ
ಚಿತ್ತಾರ ಬಿಡಿಸಿದ್ದು ಹೇಗೆ ನೀನು!
ಅವರು ಕೊಟ್ಟ ಅಂಗಿ ಎಸೆದು
ಹೊಸ ಹುಟ್ಟಿನ ಪುಂಗಿ ಮಿಡಿದು
ಕಾಯುತ್ತಿದ್ದೆ ನಿನಗಾಗಿ ನಾನು.

ಕತ್ತಲ ಕೋಣೆಯಲ್ಲಿ ಕತ್ತಲದವಳೆ
ಪರಂಗಿಯ ರಂಗಿನಾಟದಿಂದ ಹೊರಬಂದವಳೆ
ಮಿಂಚಲ್ಲಿ ಮಿಂದು ನಗೆಯಲ್ಲಿ ನಿಂದವಳೆ
ನೀ ನಕ್ಕ ಚುಕ್ಕಿ ಚಂದ್ರಮ ನಿನ್ನದೆ?
ನಡು ಬಳಸುವ ಸ್ವಾತಂತ್ರ ನನ್ನದೆ?

ಹೇಳು ಕತ್ತಲ ರಾಣಿ ಹೇಳು
ಸ್ವಾತಂತ್ರ್ಯವೆನ್ನುವುದು ಹುಸಿನಗೆಯ ವಯಾರವೆ?
ನಡುರಾತ್ರಿಯ ಕೃತಕ ಸಂಚಾರವೆ?

ಕಟ್ಟು ಕಳಚಿದ ಕತ್ತಲ ರಾಣಿಗೆ
ಈ ನಾಡ ಒಡೆಯರು ಕಟ್ಟಿದ ಅರಮನೆ
ಕಂಗೊಳಿಸುವ ಕೆಳಮನೆ-ಮೇಲ್ಮನೆ!
ಬೇಡವೆ ನಿನಗೆ ಬೆಳಕಿನ ಬಡ-
ವರ ಮನೆ; ಸಂಕಟದ ಸುಳಿಯಲ್ಲಿ
ಉಕ್ಕುವ ಹಕ್ಕಿನ ಮನ.

ವಸಾಹತು ಹುತ್ತಕ್ಕಿದು ಹೊಸರೂಪವೇ ಗೆಳತಿ?
ನಡುರಾತ್ರಿಯ ಹುಟ್ಟಿಗೆ ಯಾರು ಪತಿ, ಯಾರು ಸತಿ!
ಬೆವರು ಬುಸುಗುಡುತ್ತಿದೆ ಕತ್ತಲಲ್ಲಿ
ನಿನ್ನಂತೆಯೇ ವಿಷವಿಲ್ಲದ ಚಿತ್ತದಲ್ಲಿ.

ಇಂದು ನೆನ್ನೆಗಳ ನಡುವಿನ ಈ ಮುಗಿಲು
ಹಗಲಲ್ಲಿ ಬೆಳಕು ಹುಡುಕುವ ಬದಲು
ನಿನ್ನೊಡಲ ಕಡೆದಾಗ ಕಳೆದೀತು ಬೇಗೆ
ಕತ್ತಲು ಬೆತ್ತಲಾಗದೆ ಬೆಳಕು ಬಂದೀತು ಹೇಗೆ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...