Home / ಲೇಖನ / ಹಾಸ್ಯ / ದೇವರ ಪೂಜೆ

ದೇವರ ಪೂಜೆ

(ಮನೆಯ ಯಜಮಾನರಿಗೆ ದೇವರಲ್ಲಿ ತುಂಬಾ ಶ್ರದ್ಧೆ. ಸ್ವತಃ ಪೂಜೆ ಮಾಡಿ ನೈವೇದ್ಯ ತೋರಿಸದಿದ್ದರೆ ಮನಸ್ಸಿಗೆ ಹೇಗೊ ಹೇಗೊ ಎನಿಸುವದೆಂದು ಯಾವಾಗಲೂ ಅವರು ಹೇಳುವರು. ಇಂದು ಸ್ನಾನಮಾಡಿ ದಿನದಂತೆಯೇ ಯಜಮಾನರು ದೇವರ ಕಟ್ಟೆಯ ಮೇಲೆ ಪೂಜೆಗೆ ಕುಳಿತಿರುವರು. ದೇವರ ಕಟ್ಟೆಯ ಎಡಪಕ್ಕದಲ್ಲಿಯೇ ಅಡಿಗೆಯ ತಗ್ಗಿನಕಟ್ಟೆ. ಹೆಣ್ಣು ಮಗಳೊಬ್ಬಳು ಅಡಿಗೆ ಮಾಡುತ್ತಿರುವಳು. ರಾಯರ ಪೂಜೆಗೆ ಆರಂಭವಾಗುವದು.)

“ಓಂ ಕೇಶವಾಯನಮಃ ನಾರಾಯಣಾಯನಮಃ ಓಂ ದಾಮೋದರಾಯ ನಮಃ ಏ ಗೋದೀ ಸಪ್ಪಗೀನ ತವ್ವಿಗೆ ಬ್ಯಾರೆ ಬ್ಯಾಳಿ ತಗದೀಯೋ ಇಲ್ಲೊ? ಹೂಂ! ಬೇಶ್!…. ‘ಪ್ರಣವಸ್ಯ ಪರಬ್ರಹ್ಮ‌ಋಷಿಃ’…. ಎಲೇ ಕೃಷ್ಟ್ಯಾ ಬಾಳಿ ಎಲೀ ನೆಟ್ಟಗಮಾಡು…. ಸುಮ್ಮನಽ ಅಡ್ಯಾಡಬಾಡ!…. ‘ಪಾಂತ್ವಸ್ಮಾನ್ ಪುರಹೂತ ವೈರಿ ಬಲವಾನ್‌’ ಬದನೀಕಾಯಿ ಎಳೇವವ, ಇಂದ ತುಂಬ ಗಾಯಿ ಪಲ್ಯಾ ಯಾಕ ಮಾಡಲಿಲ್ಲಾ? ಇದನ್ನೂ ಹೇಳಬೇಕಽ? ಗಿಂಜಗಾಯಿ ತುಂಬಗಾಯಿ ಮಾಡತಿರತೀ ಒಮ್ಮೊಮ್ಮೆ! ‘ಲಕ್ಷ್ಮೀಕಾಂತ ಸಮಂತತೊ ವಿಕಲಯನ್‌…’ ಏ ರಾಮಾ, ಕಷ್ಟಾ ಮಾಡಿಸಿಗೊಂಡು ಲಿಸಿಲಿಸೀ ಹೋಗಬ್ಯಾಡಾ-ಊಟಕ್ಕೂಡೂ ಜಾಗಾದಾಗಿಂದಽ! ‘ಉತ್ಕಂಠಾ ಕುಂಠಕೋಲಾ’ ಸಾಲಿಗ್ರಾಮಕ್ಕ ಈ ಬೆಳ್ಳಿ ಸಂಪುಷ್ಟ ಸಣ್ಣದಾಗೇದ! ಡೊಗ್ಗಾಲ ಕೃಷ್ಣಗ ಭಂಗಾರ ನೀರು ಕುಡಿಸಬೇಕು! ಅಣ್ಣಾಚಾರು ಕುಡಿಸ್ಯಾರಽ…. ಛಂದಾಗೇದ! ‘ಜನ್ಮಾದಿವ್ಯಾಧಿಪಾಧಿ’ ಚಟ್ನಿ ಯಾತರದು ಕುಟ್ಟೀರಿ? ಹಸೀ ಖೊಬ್ಬರೀ ಸಿಗಲಿಲ್ಲ? ಬ್ಯಾಸರ, ಪ್ಯಾಟ್ಯಾಗ ಹೋಗಬೇಕು ಯಾರು? ಖಂದಟ ಖೊಬ್ರೀ ಚೆಟ್ನಿ ತಿನಬೇಕಽ ಎಲ್ಲಾರು ಮೈಗಳ್ಳರು!…. ‘ಮಧ್ವಾಂಖ್ಯಂ ಮಂತ್ರಸಿದ್ಧಂ’ ಲಗೂ ಲಗೂ ಆಗಲಿ ಅಡಗಿ, ಕಚೇರಿಗೆ ಹೋಗಬೇಕಾಗೇದ, ಇಂದ ಪೆನಶನ್ ತಗೊಳಿಕ್ಕೆ! ಎಲಾ ರಾಮ್ಯಾ! ಅಗಸರಾಶ ಅರಿವೀ ತಂದನೊ ಇಲ್ಲೊ ನೋಡು! ಇಸ್ತ್ರಿ ಮಾಡ್ಯಾನೊ ಇಲ್ಲೊ ನೋಡು.!…. ಕಣ್ಣ ಮುಚ್ಚಬ್ಯಾಡಾ. ಹುಡಗೋರು ಹ್ಯಾಂಗ ಚಕ್ ಚಕ್ ಇರಬೇಕು! ‘ಸಾಭ್ರೋಷ್ಣಾಭೀ ಶುಶುಭ್ರಾ’ ಗೋದೀ, ಭಕ್ರಿಹಿಟ್ಟು ಮುಗಿಸಿ ಬಿಡಬ್ಯಾಡ! ಒಲಿಮ್ಯಾಲೆ ಹಾಂಗಽ ಸ್ವಲ್ಪ ಹಂಚು ಇಟ್ಟೀರು! ಊಟಕ್ಕ ಕೂತಾಗಽ ಒಂದು ಬಿಸಿ ಬಿಸೀ ದಮಟೀ ಮಾಡಿ ಹಾಕೀ ಅಂತ….! ಹಲ್ಲಿಂದೊಂದು ತ್ರಾಸನಽ ಆಗೇದ… ಪೂರಾ ಅರೆ ಬಿದ್ದು ಹೋಗವೊಲ್ವೂ. ಹೆಡಮಾಸ್ತರ್‍ಹಂಗ ಹೊಸಾ ಹಲ್ಲು ಕೂಡಿಸಬೇಕಂದರಽ! ‘ಆನಂದಾನ್ಮಂದ ಮಂದಾ’ ಹುಳೀಗೆ ತುಪ್ಪದ ಒಗ್ಗರಣೇ ಹಾಕು- ಗಂಟಲ್ಯಾಕೊ ಘುಸೂ ಘುಸೂ ಅಂತದ… ಲುಚ್ಯಾರು ಈಗ ಎಣ್ಣೀ ಒಳಗ ಭಯಿಮಂಗದ ಎಣ್ಣಿ ಕೂಡಸ್ತಾರ! (ಖೇಕರಿಸಿ) ಮರೀಬ್ಯಾಡ…. ತುಪ್ಪದ ಒಗ್ಗರಣೀ ಕೊಡು…! ‘ವಂದೇಹಂತಂ ಹನೂಮಾನ್’ ಅಕ್ಚದಾಸ ಭಟ್ಟ ಕಳಿಸಿದ ಗಂಧಕೊರಡು; ಭಾಳವಾಸ ಅದಽ ಇದು; ಸಾಣೀಕಲ್ಲೊಂದು ಸಂವದು ಹೋಗೇದ….; ಎಷ್ಟು ಹೊಡೀತು ನೋಡು ಕೃಷ್ಣಾ… ಹನ್ನೊಂದಽ? ಅಬ್ಬಾಽ! ಹಾಂ, ಹಾಕು ಎಲಿ, ತಗೀ ನೈವೇದ್ಯ….? ‘ವಂದೇ ವಂದ್ಯಂ ಸದಾನಂದಂ….’ ಸೀತಾಬಾಯಿ, ಮಣೀ ಹಾಕು! ನನ್ನ ಮಣೀ ಎಲ್ಲಿ ಅದಽ? ದಿನಾ ಹೇಳಬೇಕೇನು? ನೋಡು, ಎಲ್ಲಾರದೂ ಸ್ನಾನಾಗೇದೊ ಇಲ್ಲೊ…. ? ‘ಸುಜನೋದಧಿ ಸಂವೃದ್ಧಿ….’ ಹೂಂ ಬಡಿಸಲಿಕ್ಕೆ ಸುರೂ ಮಾಡು. ಈಗ ನೈವೇದ್ಯ ಇಡತೀನಿ! ಲಿಂಬಿಹಣ್ಣು ಹೆಚ್ಚರಿ, ದಿನಾ ಮರೀತೀರಿ. ಸುಳ್ಳೇ ಒಣಗೀ ಹೋಗತಾವ ಅವು! ‘ಮಂಗಲಾನಿ ಭವಂತು ಸಂತತಂ ಶ್ರೀರಸ್ತು….! ಆತು ಮುಗೀತಽ ನನ್ನ ಪೂಜಿ! ಯಾವಾಗ ಒಂಭತ್ತು ಘಂಟೇಕ ಸ್ನಾನಾಮಾಡಿ ಕೂತೀನಿ, ಹನ್ನೊಂದು ಹೊಡೀತೀಗ! ಉಪ್ಪಿನಕಾಯಿ ತಗದಿಲ್ಲಽ? ಉಪ್ಪಿನಕಾಯೀ ಅಂದೆ! ಪ್ರಥಮೊ ಹನುಮನಾಮ…’ ತೀರ್ಥಾ ತಕ್ಕೂಳ್ಳಿರೊ ಹುಡುಗೂರ್‍ಯಾ! ಉಪ್ಪಿನಕಾಯಿ ಇಲ್ಲಿದ್ರೆ ಇಲ್ಲ; ಸ್ವಲ್ಪ ಮೆಂತೇದಹಿಟ್ಟು ಹಾಕು! ಅಕ್ಷಂತೀ ತಗೊ ಕೃಷ್ಣಾ!… ಮುಟ್ಟೀ ಹೋಗಕಡೆ! ಹೂಂ ಕೂಡ್ರಿ ಎಲ್ಲಾರೂ! ಶ್ರೀಮದ್‍ರಮಾರಮಣ ಗೋವಿಂದಾಽಽ ಗೋ…. ಇಂದಾ !”

(ಯಜಮಾನರು ಆಪೋಶನ ತೆಗೆದುಕೊಂಡು ಊಟಕ್ಕೆ ಪ್ರಾರಂಭಿಸುವರು.)
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...