Home / ಲೇಖನ / ಹಾಸ್ಯ / ದೇವರ ಪೂಜೆ

ದೇವರ ಪೂಜೆ

(ಮನೆಯ ಯಜಮಾನರಿಗೆ ದೇವರಲ್ಲಿ ತುಂಬಾ ಶ್ರದ್ಧೆ. ಸ್ವತಃ ಪೂಜೆ ಮಾಡಿ ನೈವೇದ್ಯ ತೋರಿಸದಿದ್ದರೆ ಮನಸ್ಸಿಗೆ ಹೇಗೊ ಹೇಗೊ ಎನಿಸುವದೆಂದು ಯಾವಾಗಲೂ ಅವರು ಹೇಳುವರು. ಇಂದು ಸ್ನಾನಮಾಡಿ ದಿನದಂತೆಯೇ ಯಜಮಾನರು ದೇವರ ಕಟ್ಟೆಯ ಮೇಲೆ ಪೂಜೆಗೆ ಕುಳಿತಿರುವರು. ದೇವರ ಕಟ್ಟೆಯ ಎಡಪಕ್ಕದಲ್ಲಿಯೇ ಅಡಿಗೆಯ ತಗ್ಗಿನಕಟ್ಟೆ. ಹೆಣ್ಣು ಮಗಳೊಬ್ಬಳು ಅಡಿಗೆ ಮಾಡುತ್ತಿರುವಳು. ರಾಯರ ಪೂಜೆಗೆ ಆರಂಭವಾಗುವದು.)

“ಓಂ ಕೇಶವಾಯನಮಃ ನಾರಾಯಣಾಯನಮಃ ಓಂ ದಾಮೋದರಾಯ ನಮಃ ಏ ಗೋದೀ ಸಪ್ಪಗೀನ ತವ್ವಿಗೆ ಬ್ಯಾರೆ ಬ್ಯಾಳಿ ತಗದೀಯೋ ಇಲ್ಲೊ? ಹೂಂ! ಬೇಶ್!…. ‘ಪ್ರಣವಸ್ಯ ಪರಬ್ರಹ್ಮ‌ಋಷಿಃ’…. ಎಲೇ ಕೃಷ್ಟ್ಯಾ ಬಾಳಿ ಎಲೀ ನೆಟ್ಟಗಮಾಡು…. ಸುಮ್ಮನಽ ಅಡ್ಯಾಡಬಾಡ!…. ‘ಪಾಂತ್ವಸ್ಮಾನ್ ಪುರಹೂತ ವೈರಿ ಬಲವಾನ್‌’ ಬದನೀಕಾಯಿ ಎಳೇವವ, ಇಂದ ತುಂಬ ಗಾಯಿ ಪಲ್ಯಾ ಯಾಕ ಮಾಡಲಿಲ್ಲಾ? ಇದನ್ನೂ ಹೇಳಬೇಕಽ? ಗಿಂಜಗಾಯಿ ತುಂಬಗಾಯಿ ಮಾಡತಿರತೀ ಒಮ್ಮೊಮ್ಮೆ! ‘ಲಕ್ಷ್ಮೀಕಾಂತ ಸಮಂತತೊ ವಿಕಲಯನ್‌…’ ಏ ರಾಮಾ, ಕಷ್ಟಾ ಮಾಡಿಸಿಗೊಂಡು ಲಿಸಿಲಿಸೀ ಹೋಗಬ್ಯಾಡಾ-ಊಟಕ್ಕೂಡೂ ಜಾಗಾದಾಗಿಂದಽ! ‘ಉತ್ಕಂಠಾ ಕುಂಠಕೋಲಾ’ ಸಾಲಿಗ್ರಾಮಕ್ಕ ಈ ಬೆಳ್ಳಿ ಸಂಪುಷ್ಟ ಸಣ್ಣದಾಗೇದ! ಡೊಗ್ಗಾಲ ಕೃಷ್ಣಗ ಭಂಗಾರ ನೀರು ಕುಡಿಸಬೇಕು! ಅಣ್ಣಾಚಾರು ಕುಡಿಸ್ಯಾರಽ…. ಛಂದಾಗೇದ! ‘ಜನ್ಮಾದಿವ್ಯಾಧಿಪಾಧಿ’ ಚಟ್ನಿ ಯಾತರದು ಕುಟ್ಟೀರಿ? ಹಸೀ ಖೊಬ್ಬರೀ ಸಿಗಲಿಲ್ಲ? ಬ್ಯಾಸರ, ಪ್ಯಾಟ್ಯಾಗ ಹೋಗಬೇಕು ಯಾರು? ಖಂದಟ ಖೊಬ್ರೀ ಚೆಟ್ನಿ ತಿನಬೇಕಽ ಎಲ್ಲಾರು ಮೈಗಳ್ಳರು!…. ‘ಮಧ್ವಾಂಖ್ಯಂ ಮಂತ್ರಸಿದ್ಧಂ’ ಲಗೂ ಲಗೂ ಆಗಲಿ ಅಡಗಿ, ಕಚೇರಿಗೆ ಹೋಗಬೇಕಾಗೇದ, ಇಂದ ಪೆನಶನ್ ತಗೊಳಿಕ್ಕೆ! ಎಲಾ ರಾಮ್ಯಾ! ಅಗಸರಾಶ ಅರಿವೀ ತಂದನೊ ಇಲ್ಲೊ ನೋಡು! ಇಸ್ತ್ರಿ ಮಾಡ್ಯಾನೊ ಇಲ್ಲೊ ನೋಡು.!…. ಕಣ್ಣ ಮುಚ್ಚಬ್ಯಾಡಾ. ಹುಡಗೋರು ಹ್ಯಾಂಗ ಚಕ್ ಚಕ್ ಇರಬೇಕು! ‘ಸಾಭ್ರೋಷ್ಣಾಭೀ ಶುಶುಭ್ರಾ’ ಗೋದೀ, ಭಕ್ರಿಹಿಟ್ಟು ಮುಗಿಸಿ ಬಿಡಬ್ಯಾಡ! ಒಲಿಮ್ಯಾಲೆ ಹಾಂಗಽ ಸ್ವಲ್ಪ ಹಂಚು ಇಟ್ಟೀರು! ಊಟಕ್ಕ ಕೂತಾಗಽ ಒಂದು ಬಿಸಿ ಬಿಸೀ ದಮಟೀ ಮಾಡಿ ಹಾಕೀ ಅಂತ….! ಹಲ್ಲಿಂದೊಂದು ತ್ರಾಸನಽ ಆಗೇದ… ಪೂರಾ ಅರೆ ಬಿದ್ದು ಹೋಗವೊಲ್ವೂ. ಹೆಡಮಾಸ್ತರ್‍ಹಂಗ ಹೊಸಾ ಹಲ್ಲು ಕೂಡಿಸಬೇಕಂದರಽ! ‘ಆನಂದಾನ್ಮಂದ ಮಂದಾ’ ಹುಳೀಗೆ ತುಪ್ಪದ ಒಗ್ಗರಣೇ ಹಾಕು- ಗಂಟಲ್ಯಾಕೊ ಘುಸೂ ಘುಸೂ ಅಂತದ… ಲುಚ್ಯಾರು ಈಗ ಎಣ್ಣೀ ಒಳಗ ಭಯಿಮಂಗದ ಎಣ್ಣಿ ಕೂಡಸ್ತಾರ! (ಖೇಕರಿಸಿ) ಮರೀಬ್ಯಾಡ…. ತುಪ್ಪದ ಒಗ್ಗರಣೀ ಕೊಡು…! ‘ವಂದೇಹಂತಂ ಹನೂಮಾನ್’ ಅಕ್ಚದಾಸ ಭಟ್ಟ ಕಳಿಸಿದ ಗಂಧಕೊರಡು; ಭಾಳವಾಸ ಅದಽ ಇದು; ಸಾಣೀಕಲ್ಲೊಂದು ಸಂವದು ಹೋಗೇದ….; ಎಷ್ಟು ಹೊಡೀತು ನೋಡು ಕೃಷ್ಣಾ… ಹನ್ನೊಂದಽ? ಅಬ್ಬಾಽ! ಹಾಂ, ಹಾಕು ಎಲಿ, ತಗೀ ನೈವೇದ್ಯ….? ‘ವಂದೇ ವಂದ್ಯಂ ಸದಾನಂದಂ….’ ಸೀತಾಬಾಯಿ, ಮಣೀ ಹಾಕು! ನನ್ನ ಮಣೀ ಎಲ್ಲಿ ಅದಽ? ದಿನಾ ಹೇಳಬೇಕೇನು? ನೋಡು, ಎಲ್ಲಾರದೂ ಸ್ನಾನಾಗೇದೊ ಇಲ್ಲೊ…. ? ‘ಸುಜನೋದಧಿ ಸಂವೃದ್ಧಿ….’ ಹೂಂ ಬಡಿಸಲಿಕ್ಕೆ ಸುರೂ ಮಾಡು. ಈಗ ನೈವೇದ್ಯ ಇಡತೀನಿ! ಲಿಂಬಿಹಣ್ಣು ಹೆಚ್ಚರಿ, ದಿನಾ ಮರೀತೀರಿ. ಸುಳ್ಳೇ ಒಣಗೀ ಹೋಗತಾವ ಅವು! ‘ಮಂಗಲಾನಿ ಭವಂತು ಸಂತತಂ ಶ್ರೀರಸ್ತು….! ಆತು ಮುಗೀತಽ ನನ್ನ ಪೂಜಿ! ಯಾವಾಗ ಒಂಭತ್ತು ಘಂಟೇಕ ಸ್ನಾನಾಮಾಡಿ ಕೂತೀನಿ, ಹನ್ನೊಂದು ಹೊಡೀತೀಗ! ಉಪ್ಪಿನಕಾಯಿ ತಗದಿಲ್ಲಽ? ಉಪ್ಪಿನಕಾಯೀ ಅಂದೆ! ಪ್ರಥಮೊ ಹನುಮನಾಮ…’ ತೀರ್ಥಾ ತಕ್ಕೂಳ್ಳಿರೊ ಹುಡುಗೂರ್‍ಯಾ! ಉಪ್ಪಿನಕಾಯಿ ಇಲ್ಲಿದ್ರೆ ಇಲ್ಲ; ಸ್ವಲ್ಪ ಮೆಂತೇದಹಿಟ್ಟು ಹಾಕು! ಅಕ್ಷಂತೀ ತಗೊ ಕೃಷ್ಣಾ!… ಮುಟ್ಟೀ ಹೋಗಕಡೆ! ಹೂಂ ಕೂಡ್ರಿ ಎಲ್ಲಾರೂ! ಶ್ರೀಮದ್‍ರಮಾರಮಣ ಗೋವಿಂದಾಽಽ ಗೋ…. ಇಂದಾ !”

(ಯಜಮಾನರು ಆಪೋಶನ ತೆಗೆದುಕೊಂಡು ಊಟಕ್ಕೆ ಪ್ರಾರಂಭಿಸುವರು.)
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...