Home / ಲೇಖನ / ವಿಜ್ಞಾನ / ಒಂದು ಮನೋವೈಜ್ಞಾನಿಕ ವಿಶ್ಲೇಷಣೆ : ಹಿಂಸಾತ್ಮಕ ಕ್ರಿಯೆಗೆ ಸಿರೋಟೋನಿನ್ ಅಭಾವವೇ ಕಾರಣ

ಒಂದು ಮನೋವೈಜ್ಞಾನಿಕ ವಿಶ್ಲೇಷಣೆ : ಹಿಂಸಾತ್ಮಕ ಕ್ರಿಯೆಗೆ ಸಿರೋಟೋನಿನ್ ಅಭಾವವೇ ಕಾರಣ

ಜಗತ್ತಿನಲ್ಲಿ ದಿನನಿತ್ಯ ಹಿಂಸಾತ್ಮಕ ಕ್ರಿಯೆಗಳು ನಡೆಯುತ್ತಲೇ ಇರುತ್ತವೆ. ಒಬ್ಬ ವ್ಯಕ್ತಿ ನಿರ್ಧಯಿಯಾಗಿ ಅನೇಕ ವ್ಯಕ್ತಿಗಳನ್ನು ಕೊಲೆಗೈದು, ಅತ್ಯಾಚಾರವೆಸಗಿ, ರಕ್ತ ಪಿಪಾಸಿಯಾಗಿ ನಿರಂತರವಾಗಿ ನಡೆದುಕೊಳ್ಳುತ್ತಲೇ ಇರುತ್ತಾನೆ. ಇವನಲ್ಲಿ ಕರುಣೆ, ವಾತ್ಸಲ್ಯ, ಮಾನವತಾವಾದಗಳೆಲ್ಲ ಬತ್ತಿ ಕೇವಲ ಕ್ರೌರ್ಯ, ಹಿಂಸೆ, ನಿಷ್ಕರುಣೆಗಳು ಮಡುಗಟ್ಟಿರುತ್ತವೆ. ಏಕೆ ಹೀಗೆ ಈ ವ್ಯಕ್ತಿಗಳು ಮೆದುಳಿನ ಸಂದೇಶಗಳಲ್ಲಿ ಏನಾದರೂ ತಪ್ಪಾಗಿ ಹೀಗೆ ವರ್ತಿಸುತ್ತಿರಬಹುದೇ? ಎಂದು ಸಂಶೋಧನೆಗಳು ನಡೆದವು.

ಹಿಂಸಾತ್ಮಕ ಅಪರಾಧಗಳನ್ನು ಮಾಡುವವರ ಮೆದುಳಿನಲ್ಲಿ ಕೆಲವೊಂದು ಅಪಾಯಕಾರಿ ಲೋಹಗಳಿರುವುದನ್ನು ಇಬ್ಬರು ವಿಜ್ಞಾನಿಗಳು ಪತ್ತೆ ಮಾಡಿದ್ದಾರೆ. ಲೋಹಮಾಲಿನ್ಯವುಳ್ಳ ರಾಷ್ಟ್ರಗಳಲ್ಲಿ ಹೆಚ್ಚಿನ ಪ್ರಮಾಣದ ಹಿಂಸಾಚಾರಗಳು ನಡೆದಿರುವ ನಿದರ್ಶನಗಳಿವೆ. ಕ್ಯಾಲಿಪೋರ್ನಿಯಾದಲ್ಲಿ ಜೇಮ್ಸ್ ಆಲಿವರ್ ಹಬರ್ಟ್ ಎಂಬಾತ ೧೯೮೪ ರಲ್ಲಿ ೨೧ ಜನರ ಸಮೂಹವನ್ನು ಕೊಲೆಮಾಡಿದ. ಆತನ ಕೂದಲಿನ ರಾಸಾಯನಿಕ ರಚನೆಯನ್ನು ಪರೀಕ್ಷಿಸಿದಾಗ ಅದರಲ್ಲಿ ಹೆಚ್ಚಿನ ಪ್ರಮಾಣದ ‘ಕ್ಯಾಡ್ಮಿಯಂ’ ಇದ್ದದ್ದು ಕಂಡು ಬಂದಿತು. ಕ್ಯಾಡ್ಮಿಯಂ ಲೋಹವು ಮೂತ್ರ ಜನಕಾಂಗವನ್ನು ನಾಶಮಾಡುತ್ತದೆ. ಹಬರ್ಟಿಯ ಮೂತ್ರ ಜನಕಾಂಗವನ್ನು ಪರೀಕ್ಷಿಸಿದಾಗ ಅದು ಮೊದಲೇ ಸಾಕಷ್ಟು ನಾಶವಾಗಿದ್ದುದು ಕಂಡು ಬಂದಿತು. ಇಲನೋಯಿಸ್‌ನ ಪಿಫೀಫರ್ ಚಿಕಿತ್ಸಾ ಕೇಂದ್ರ ಅಧ್ಯಕ್ಷರಾದ ವಿಲಿಯಂ.ಜೆ. ವಾಲ್ಫ್ ಅವರು ಇಂಥಹ ಅನೇಕ ನಿದರ್ಶನಗಳನ್ನು ಕಂಡಿದ್ದಾರೆ. ಶರೀರವು ಕೆಲವೊಂದು ಅಪಾಯಕಾರಿ ಲೋಹಗಳನ್ನು ನಿಭಾಯಿಸಲು ಸಾಧ್ಯವಾಗದೇ ಇದ್ದಾಗ ಮನುಷ್ಯನಿಗೆ ಸರಿ, ತಪ್ಪುಗಳ ಪರಿಕಲ್ಪನೆ ಇಲ್ಲದಂತಾಗುತ್ತದೆ ಎಂದು ಅವರು ಹೇಳುತ್ತಾರೆ. ೧೯೮೯ ರಲ್ಲಿ ಪಿಫೀಫರ್‌ನಲ್ಲಿ ಅನೇಕ ಹಿಂಸಾಚಾರಿ ಮಕ್ಕಳನ್ನು ಗಮನಿಸಲಾಯಿತು. ಇವರೆಲ್ಲ ತಮ್ಮ ೨ ವರ್ಷದ ವಯಸ್ಸಿನಿಂದಲೇ ಬೆಕ್ಕುಗಳಿಗೆ ಅತೀವ ಹಿಂಸೆ ಕೊಡುತ್ತಿದ್ದುದನ್ನು ಗಮನಿಸಿ ಅವರಿಗೆ ಕೊಡುತ್ತಿದ್ದ ಆಹಾರವನ್ನು ನಿಯಂತ್ರಿಸಿ ಅವರ ವರ್ತನೆಗಳನ್ನು ಹಿಡಿತಗೊಳಿಸಲಾಯಿತು.

ಡಾರ್ಟ್‌ಮೌಲ್ ಕಾಲೇಜಿನ ಪ್ರಾಧ್ಯಾಪಕರಾದ ರೆವೀಗರ್ ಡಿ- ಮಾಸ್ಟರ್‍ಸ್ ಎಂಬುವವರು ಇದೇ ರೀತಿಯಾದ ಸಂಶೋಧನೆಗಳನ್ನು ಮಾಡಿ ದೃಡೀಕರಿಸಿದ್ದಾರೆ. ಸೀಸ ಮತ್ತು ಮ್ಯಾಂಗನೀಸ್‌ಗಳು ಸಹ ಮೆದುಳಿನ ರಾಸಾಯನಿಕ ರಚನೆಯಲ್ಲಿ ಬದಲಾವಣೆಗಳನ್ನು ಮಾಡಿ ಕಲಿಕೆಯ ಸಮಸ್ಯೆಗಳು, ವರಟು ವರ್ತನೆ, ಹಿಂಸೆ ಇತ್ಯಾದಿಗಳಿಗೆ ಕಾರಣವಾಗುವವು ಎಂದು ಕಂಡು ಹಿಡಿಯಲಾಯಿತು. ಕೆಲವೊಂದು ಗ್ರಾಮೀಣ ಬಾಲಕರಲ್ಲಿ ಬುದ್ಧಮಾಂದ್ಯತೆಗೂ ಇದು ಕಾರಣವಾಗಿದೆ, ಎಂದು ತಿಳಿದು ಬರುತ್ತದೆ. ಮ್ಯಾಂಗನೀಜ್‌ನಿಂದ ಮಾನಸಿಕ ಪ್ರತಿಕ್ರಿಯೆಗಳ ನಿಯಂತ್ರಣವು ಕ್ಷೀಣಿಸಿ ಹಿಂಸಾತ್ಮಕ ವರ್ತನೆ ತೋರುವುದೆಂದು ತಿಳಿದು ಬಂದಿದೆ. ಸೀಸ ಮತ್ತು ಮ್ಯಾಂಗನೀಸ್‌ಗಳು ಎಲ್ಲ ಕಡೆ ಹರಡುತ್ತಲಿವೆ. ನರವಿಜ್ಞಾನಿಗಳ ಪ್ರಕಾರ ಮ್ಯಾಂಗನೀಸ್ ವಸ್ತುವು ಮೆದುಳಿನಲ್ಲಿರುವ ‘ಸಿರೋಟೋನಿನ್’ ಎಂಬ ಪದಾರ್ಥದ ಪ್ರಮಾಣವನ್ನು ಕಡಿಮೆ ಮಾಡುತ್ತದೆ. ಇದೊಂದು ನರಪ್ರಸರಣ ದ್ರವ (Neurotransmitter) ಮೆದುಳಿನ ಸಂದೇಶಗಳು ಪ್ರಸಾರವಾಗಲು ಈ ದ್ರವವೇ ಕಾರಣವಾಗುತ್ತದೆ. ಮಾಸ್ಟರ್ಸ್ ಅವರ ಪ್ರಕಾರ ಎಲ್ಲ ಹಿಂಸಾತ್ಮಕ (ಒರಟುತನ, ಅಪತ್ಕಾರಿತನ) ಮತ್ತು ಇತರ ಮನೋವೈಜ್ಞಾನಿಕ ತೊಂದರೆಗಳಿಗೆ ಸಿರೋಟೋನಿನ್‌ನ ಕೊರತೆಯೇ ಕಾರಣವಾಗಿದೆ. ಸರಿಯಾದ ವಿಟಾಮಿನ್‌ಗಳ ಪೂರೈಕೆಗಳಿಂದ ಈ ವೈಪರೀತ್ಯವನ್ನು ಸರಿಪಡಿಸಿಬಹುದೆಂದು ಅವರು ಹೇಳುತ್ತಾರೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...