Home / ಕವನ / ಕವಿತೆ / ಹೇಗೆ ಪ್ರೀತಿಸದೆ ಇರಲಿ ಚಂದ್ರನನ್ನು

ಹೇಗೆ ಪ್ರೀತಿಸದೆ ಇರಲಿ ಚಂದ್ರನನ್ನು

‘ಹೇಗೆ ಪ್ರೀತಿಸದೆ ಇರಲಿ ಚಂದ್ರನನ್ನು
ಮಗುವಾಗಿದ್ದಾಗಿನಿಂದಲೂ ಬಲ್ಲ ಅವನನ್ನು

‘ಬಾ’ ‘ಬಾ’ ಎಂದವನ ಎಷ್ಟು ಸಲ ಕರೆದಿದ್ದೆನು
ಬರುವನೊ, ಬಾರನೊ, ತಿಳಿಯದೆ
ಇಂದಿಗೂ ಕಾಯುತ್ತಲೇ ಇರುವೆನು
ಹೇಳಿ ಹೇಗೆ ಪ್ರೀತಿಸದೆ ಇರಲಿ ಚಂದ್ರನನ್ನು

ಯಾವ ಕಾಲದಲ್ಲಿ, ಯಾವ ಕೊಳದಲ್ಲಿ
ನೈದಿಲೆಯಾಗಿದ್ದೆನೋ ಏನೋ…
ಯಾವ ಬೆಟ್ಟದಲ್ಲಿ, ಯಾವ ಘಟ್ಟದಲ್ಲಿ
ಮೊಡವಾಗಿದ್ದೆನೋ ಏನೋ…
ಈಗಲೂ ಅದೇ ನೆನಪ್ಪಲ್ಲಿ ಅದೇ ತಪದಲ್ಲಿ
ಅನುದಿನವೂ ನೆನೆಯುವೆನು
ಹೇಳಿ ಹೇಗೆ ಪ್ರಿಯದೆ ಇರಲಿ ಚಂದ್ರನನ್ನು

ಕಣ್ಣು, ಮೂಗು, ಬಾಯಿ, ಏನಿಲ್ಲದಿದ್ದರೂ
ಇದ್ದ ಹಾಗೆಯೆ ಕಾಣುವನು ಅವನು
ರೊಟ್ಟಿಯ ಚೂರಿನಂತೆ, ಹಣ್ಣಿನ ಹೋಳಿನಂತೆ
ಬೆಣ್ಣೆಯ ಮುದ್ದೆಯಂತೆ, ಬೆಳ್ಳಿಯ ತಟ್ಟೆಯಂತೆ
ಬಹುರೂಪಿ ಅಡಿಗಡಿಗೂ ಬೆರಗಾಗುವೆನು
ಹೇಳಿ ಹೇಗೆ ಪ್ರೀತಿಸದೆ ಇರಲಿ ಚಂದ್ರನನ್ನು

ಯಾವ ಲೋಕದಲ್ಲಿ, ಯಾವ ಎರಕದಲ್ಲಿ
ರೂಪುಗೊಂಡವನೋ ಏನೋ…
ಯಾವ ಕಾಲದವನೋ ಏನವನ ಜಾತಿ?
ಮಾತಿನ ಹಂಗಿಲ್ಲದೇ ನನ್ನನ್ನು ಮುಟ್ಟಿಹನು
ಹೇಳಿ ಹೇಗೆ ಪ್ರೀತಿಸದೆ ಇರಲಿ ಚಂದ್ರನನ್ನು

ಉಪ್ಪರಿಗೆಯನೇರಿ ಕಾದವನ ದಾರಿ ಎದುರುಗೊಳ್ಳುವೆನು
ಬೆಟ್ಟದಾಚೆಗೆ ಬೆಳದಿಂಗಳ ತೋಳು ಚಾಚಿ
ಬೆಳ್ಳಿಕಿರಣಗಳ ಮಾಲೆ ತಂದೇ ತರುವನು
ಸಿದ್ದಾರ್ಥನ ಪ್ರಿಯಮಿತ್ರ, ಮೈತ್ರಿಯೇ ಮಹಾಸೂತ್ರ
ಪ್ರೀತಿಸದೆ ಇರಲಾರೆ ಚಂದ್ರನನ್ನು.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...