ಲಿಂಗಮ್ಮನ ವಚನಗಳು – ೧೭

ಅಯ್ಯ, ಏನೇನು ಇಲ್ಲದ ಬಯಲ ದೇಹಕ್ಕೆ,
ತಾಮಸವ ಮುಂದು ಮಾಡಿ,
ಹೀಗೆ ಕಟ್ಟಿತ್ತಲ್ಲ ಜಗವೆಲ್ಲ.
ಅದೇನು ಕಾರಣವೆಂದರೆ,
ಸುಮುಖನ ಕಡೆಗಿತ್ತು ಜಗದ ರಚನೆಯ ನೋಡಿತ್ತು.
ಇಚ್ಛೆಯ ಮಚ್ಚಿತ್ತು.
ಅಂಗಸುಖವ ಬಯಸಿತ್ತು.
ಕಂಗಳ ಕಾಮವನೆ ಮುಂದು ಮಾಡಿತ್ತು.
ಇದರಿಂದ ಲಿಂಗವ ಮರೆಯಿತ್ತು.
ಜಂಗಮವ ತೊರೆಯಿತ್ತು.
ಇದು ಕಾರಣದಿಂದ ಜಗದ
ಮನುಜರು ಭವಬಂಧನಕ್ಕೊಳಗಾದರು.
ಇವೆಲ್ಲವನು ಹಿಂಗಿಸಿ ನಮ್ಮ
ಶಿವಶರಣರು ಲಿಂಗದಲ್ಲಿಯೆ ಬೆರೆದರು.
ಜಂಗಮಪ್ರಾಣವೆಂದು, ಪಾದೋದಕ ಪ್ರಸಾದವ ಕೊಂಡು,
ಆ ಜಂಗಮದ ಪಾದದಲ್ಲಿ ನಿಜಮುಕ್ತರಾದರಯ್ಯ
ನಮ್ಮ ಅಪ್ಪಣಪ್ರಿಯ ಚನ್ನಬಸವಣ್ಣಾ.
*****

ಸಂಗ್ರಹ: ರಾ|| ಸಾ|| ಫ. ಗು. ಹಳಕಟ್ಟಿ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಂತರ
Next post ಜೀವನ ಸಮಸ್ಯೆ

ಸಣ್ಣ ಕತೆ

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…