Home / ಕವನ / ಕವಿತೆ / ನವೋದಯದ ನಲವು : ಜಿ ಎಸ್ ಎಸ್

ನವೋದಯದ ನಲವು : ಜಿ ಎಸ್ ಎಸ್

ನವಿರಾದ ಭಾವದಲೆಗಳ
ಸೀಳುತ್ತಾ ಮುನ್ನುಗ್ಗುತ್ತಿತ್ತು
ನವ್ಯದ ಹಡಗು

ಆಹಾ! ಏನು ಬಿಂಕ, ಬೆಡಗು, ಬಿನ್ನಾಣ
ಕೋಡುಗಲ್ಲಿನ ಮೇಲೆ
ಕಡಲ ಹಕ್ಕಿಗಳಂತೆ ಕೂತು ನೋಡಿದೆವು.

ಕಾರಿರುಳು-
‘ಕರಿಯ ನಭದ ಕಣ್ಗಳಂತೆ
ಅಭಯದೊಂದು ರೂಹಿನಂತೆ
ತೇಲಿಬಿಟ್ಟ ದೀಪದಂತೆ’
ನೂರು ತಾರೆ ಬೆಳಕ ಬೀರಲು
ಪುಟ್ಟ ದೋಣಿಯಲಿ ಕೂತು
ರಾತ್ರಿ-ಹಗಲು ರಾಕ್ಷಸ ಅಲೆಗಳನ್ನು ತಳ್ಳುತ್ತಾ
ಹರಸಾಹಸದಿಂದ ದಡ ಸೇರಿದೆವು.

ಮುಸ್ಸಂಜೆ-
ಆಗಸದಲ್ಲಿ ಬೆಳ್ಳಕ್ಕಿಗಳ ಸಾಲು
‘ದೇವರ ರುಜು’
ಪರವಶತೆಯಿಂದ ನೋಡಿದೆವು.
ಕಣಿವೆಯ ಮುದುಕ
ಕೈ ಮರವಾದ; ಮುನ್ನಡೆದೆವು.
‘ಮೂಡಲ ಮನೆಯಲ್ಲಿ ಮುತ್ತಿನ ನೀರು
ಗಿಡಗಂಟೆಗಳ ಕೊರಳಲ್ಲಿ ಹಕ್ಕಿಗಳ ಹಾಡು’
ತಲೆದೂಗಿದೆವು.

ಶಾನುಭೋಗರ ಮಗಳು
ಕಾಲಿಗೆ ನೀರಿತ್ತು ಕೈತುತ್ತು ನೀಡಿದಳು;
‘ಎನಿತು ಜನ್ಮದಲಿ ಎನಿತು ಜೀವರಿಗೆ
ಎನಿತು ನಾವು ಋಣಿಯೋ’ ತಲೆಬಾಗಿದೆವು.

ಹಾದಿಯ ತುಂಬಾ
ನಗುತ್ತಿತ್ತು ಏಳುಸುತ್ತಿನ ಮಲ್ಲಿಗೆ
‘ಹಚ್ಚನೆ ಹಸುರ ಗಿಡದಿಂದೆಂತು
ಮೂಡಿತ್ತೋ ಬೆಳ್ಳಗೆ’
-ಅನತಿ ದೂರದಲ್ಲೇ ಕಲ್ಲು ಬಂಡೆಯನ್ನೇರಿ
ಅದಾರೋ… ಯಾರವರು, ಯಾರು?
ಎದೆತುಂಬಿ ಹಾಡುತ್ತಿದ್ದರು.

ಹಮ್ಮು-ಬಿಮ್ಮು ಸೋಕದ ಹಾಡು
ನೊಂದ ಜೀವರಿಗೆ ತಂಪನೀಯುವ ಹಾಡು
ಪ್ರೀತಿ-ಸ್ನೇಹಗಳ ಪಸರಿಸುವ ಹಾಡು
ಎಲ್ಲೋ ಅಳುವ ಮಗುವನೂ ಸಂತೈಸುವ ಹಾಡು
ನವ-ನವೀನ ಭಾವದ ಹಾಡು.

ಹಾಡಿನ ಹಾಡಿಯಲ್ಲಿ ಬೀಡುಬಿಟ್ಟು
ಹಾಡಿಗೆ ನಮ್ಮನ್ನೇ ನಾವು ಕೊಟ್ಟು ಕೊಂಡೆವು
ನೂರು ಭಾವದ ಬಾವಿ ಮೊಗೆ ಮೊಗದು
ಸಿಹಿನೀರ ಕುಡಿದೆವು

ಕಡಲನೀಜುವೆನೆಂಬ ಮರುಳ ಹಡಗು
ತನಗೆ ತಾ ಹೊರೆಯಾಗಿ ತಾನೆ ಮುಳುಗುತ್ತಿತ್ತು…
ಅಲೆಯ ಮೇಲೊಂದು ತಾವರೆಯ ಎಲೆ
ಎಲೆಯ ಮೇಲೊಂದು ಪುಟ್ಟ ಹಣತೆ
ತೇಲುತ್ತಿತ್ತು ತನ್ನ ಪಾಡಿಗೆ ತಾನೇ
ನೀಲ ಮೌನದಲ್ಲಿ…
*****

Tagged:

Leave a Reply

Your email address will not be published. Required fields are marked *

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...