Home / ಕವನ / ವಚನ / ಲಿಂಗಮ್ಮನ ವಚನಗಳು – ೨೮

ಲಿಂಗಮ್ಮನ ವಚನಗಳು – ೨೮

ಏನೇನು ಇಲ್ಲದಾಗ ನೀವಿಲ್ಲದಿದ್ದರೆ,
ನಾನಾಗಬಲ್ಲೆನೇ ಅಯ್ಯ?
ಆದಿಅನಾದಿ ಇಲ್ಲದಂದು ನೀವಿಲ್ಲದಿದ್ದರೆ,
ನಾನಾಗಬಲ್ಲೆನೇ ಅಯ್ಯ?
ಮುಳುಗಿ ಹೋದವರ ತೆಗೆದುಕೊಂಡು ನಿಮ್ಮ
ತೊತ್ತಿನ ತೊತ್ತಿನ ಪಡಿದೊತ್ತಿನ ಮಗಳೆಂದು,
ರಕ್ಷಣೆಯ ಮಾಡಿದ ಶಿಸುವಾದ ಕಾರಣ
ಹಡಪದಪ್ಪಣ್ಣನೆ ಎನ್ನ ಕರಸ್ಥಲಕ್ಕೆ
ಲಿಂಗವಾಗಿ ಬಂದು ನೆಲೆಗೊಂಡರು.
ಚನ್ನಮಲ್ಲೇಶ್ವರನೆ ಎನ್ನ ಮನಸ್ಥಲಕೆ
ಪ್ರಾಣವಾಗಿ ಮೂರ್ತಗೊಂಡರು
ಆ ಕರಸ್ಥಲದ ಲಿಂಗವನರ್ಚಿಸಿ ಪೂಜಿಸಿ,
ವರವ ಬೇಡಿದರೆ, ತನುವ ತೋರಿದರು.
ಆ ತನುವಿಡಿದು ಮಹಾಘನವ ಕಂಡೆ.
ಆ ಘನವಿಡಿದು ಮನವ ನಿಲಿಸಿದೆ.
ಮನವ ನಿಲಿಸಿ ನೋಡುವನ್ನಕ್ಕ
ಪ್ರಾಣದ ನೆಲೆಯನರಿದೆ.  ಪ್ರಾಣವನೊಂದುಗೂಡಿದೆ.
ಕಾಣಬಾರದ ಕದಳಿಯನೆ ಹೊಕ್ಕು
ನೂನ ಕದಳಿಯ ದಾಂಟಿದೆ.
ಜ್ಞಾನಜ್ಯೋತಿಯ ಕಂಡೆ.
ತಾನುತಾನಾಗಿಪ್ಪ, ಮಹಾಬೆಳೆಗಿನಲ್ಲಿ
ಓಲಾಡಿ ಸುಖಿಯಾದೆನಯ್ಯ
ಚನ್ನಬಸವಣ್ಣನ ಕರುಣದ ಶಿಸುವಾದ ಕಾರಣದಿಂದ
ಅಪ್ಪಣಪ್ರಿಯ ಚನ್ನಬಸವಣ್ಣಾ.
*****

ಸಂಗ್ರಹ: ರಾ|| ಸಾ|| ಫ. ಗು. ಹಳಕಟ್ಟಿ

Tagged:

Leave a Reply

Your email address will not be published. Required fields are marked *

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...