Home / ಕವನ / ಕವಿತೆ / ಅಣ್ಣ ಬಾರೊ

ಅಣ್ಣ ಬಾರೊ

ಅಣ್ಣ ಬಾರೊ ಬಸವಣ್ಣ ಬಾರೊ
ಈ ಜನರ ಕಣ್ಣ ತೆರೆಯೋ
ಬಣ್ಣ ಬಾಳು ಬರಿ ಹಾಳು ಹಾಳು
ಈ ಕಣ್ಣ ಪೊರೆಯ ಹರಿಯೋ || ೧ ||

ಕೊಳೆತು ನಿಂತು ನೀರಾದ ಭೇದ
ನೂರಾರು ತಳೆದ ಜನರ
ಕೆರಳಿ ಗದ್ದರಿಸಿ ತಿಳಿಸಿ ಉದ್ಧರಿಸಿ
ಕಾಯ್ದೆ ಅಂದು ಅವರ || ೨ ||

ಬ್ರಾಹ್ಮಣಾಗಿ ನೀ ಹುಟ್ಟಿ ಬಂದರೂ
ಕುಲದ ಜಡತೆ ನೋಡಿ
ಬ್ರಹ್ಮವನ್ನೆ ಮರೆತಂಥ ಬ್ರಾಹ್ಮಣರ
ಬಣ್ಣ ಬಯಲು ಮಾಡಿ || ೩ ||

ಕಟ್ಟು ಕಥೆಯ ಹೆಣೆಹೆಣೆದು ಸುಳ್ಳೆ
ತಾವ್ ಹೂಟ್ಟೆ ಹೊರೆಯುವವರ
ತಟ್ಟಿ ಬೈದು ಈ ರಟ್ಟೆ ಮುರಿದು
ದುಡಿಯೆಂದು ಪೇಳ್ದ ಧೀರ || ೪ ||

ಸಂಗಮೇಶ್ವರನ ಸಂಗದಲ್ಲಿ
ಲಿಂಗಾಂಗ ಪರಿಯನರಿತು
ಲಿಂಗಧರಿಸಿ ನಿಸ್ಸಂಗಿಯಾದೆ ನೀ
ಭಂಗ ಭವವ ಮರೆತು || ೫ ||

ಮನುಜರೆಲ್ಲ ಒಂದೆಂದು ಸಾರಿ
ಮನುಕುಲವ ಬೆಳಗ ಬಂದೆ
ಹೊಲಸುಗೈವ ಹೊಲೆಯರನು ಹಳಿದೆ
ಕುಲ ಜನಿಸಿದ್ದಲ್ಲವೆಂದೆ || ೬ ||

ಹುಲ್ಲು ದೇವರು ಕಲ್ಲು ದೇವರೆಂದೆಂದು
ಬೇಧವಿರಲು
ಎಲ ದೇವರೂ ಒಂದೆ ತಾನೆ
ಈಶ್ವರನು ಒಡೆಯನಿರಲು ||೭||

ಅಲ್ಲಿ ಇಹನು ಇಲ್ಲಿಹನು ದೇವ
ವಿಶ್ವವನು ತುಂಬಿದವನು
ಇಲ್ಲಿ ಮನದಿ ಇಹನೆಂದು ತನುವಿನಲಿ
ಲಿಂಗ ಮೆರೆಸಿದವನು (ಮಹಲಿಂಗ ಮೆರೆಸಿದವನು) || ೮ ||

ಕಾಮ ಸುಟ್ಟು ಬೂದಿಯನೆ ಧರಿಸಿ
ಕಾಮಾರಿಯಾದ ಶಿವನ
ನೇಮ ನಡೆಸಲ್ಕೆ ಬೂದಿ ತಳೆದೆ
ವಿಭೂತಿ ಎಂದೆ ಅದನ || ೯ ||

ಇಬ್ಬರ್‌ಹೆಂಡಿರೂ ಎರಡು ಕಣ್ಣಿನೊಲು
ಇರಲು ಗಂಗ ನೀಲಾ
ಬಳಸಿ ಬ್ರಹ್ಮಚಾರ್ಯದೆ ಉಂಡು
ಉಪವಾಸಿ ಬಹ್ಮಶೀಲಾ || ೧೦ ||

ಮುಳ್ಳ ಮಕುಟವದು ಮಂತ್ರಿಪದವಿ
ಬಿಜ್ಜಳನ ನೆರಳಿನಲ್ಲಿ
ಹೂವಿನಂತೆ ಕೈಗೊಂಡೆ ಕಂಡೆ
ಪರತತ್ವ ಇಹದಲಿಲ್ಲಿ || ೧೧ ||

ಹಣದ ಕಣಜವೇ ನಿನ್ನದಾಗಿರಲು
ಜನರ ಸೇವೆಗಾಯ್ತು
ಹಣದ ಭಂಡಾರ ಭಕುತಿ ಭಂಡಾರ
ನಿನ್ನ ಕೈಯಲಾಯ್ತು || ೧೨ ||

ಶಿವನ ದೂತನೇ ಬಂದು ಭುವಿಯ
ಕೈಲಾಸವಾಗಿ ಮಾಡೆ
ಶರಣ ಸಂಕುಳಿಯು ಮೂಲೆ
ಮೂಲೆಯಿಂದಿಲ್ಲಿ ಬಂದು ಕೂಡೆ || ೧೩ ||

ಕರ್ಮ ಮಾಡುವುದೇ ಧರ್ಮವೆಂದೆ
ಕಾಯಕವೆ ಶಿವನ ಕಾರ್ಯ
ತಿಳಿದು ಏಳೆ ಜನ ಮೊಳಗೆ ಎಲ್ಲಿಡೆಗೆ
ಮಹಾಮನೆಯ ತೂರ್ಯ || ೧೪ ||

ತಿಳಿವು ಲಿಂಗ ಮನ ಒಳವು ಲಿಂಗ
ತನು ಮಾಳ್ಪ ಕೆಲಸ ಲಿಂಗ
ಶಾಂತಿ ಶಿವನು ಸಮಬುದ್ಧಿ ಶಿವನು
ಸಹಬಾಳ್ವೆ ಶಿವನ ಸಂಗ || ೧೫ ||

ಜನಮನವು ತೊಳೆದು ತಿಳಿಯಾಯ್ತು ತನುವು
ಕೃತಿಯಲ್ಲಿ ಒಂದೆ ಆಯ್ತು
ಮಾಡಿದ್ದ ಮಡಿಯು ಆಡಿದ್ದ ವಚನ
ಮಹಪೂರ ರಚನೆಗಾಯ್ತು || ೧೬ ||

ಎಲ್ಲ ಜಾತಿಗಳ ಕೂಡಿಸಿಟ್ಟು
ಆದರ್ಶ ಕುಲವ ಮಾಡಿ
ಅನುಭವದ ಕಡೆತ ಅನುಭಾವವಾಗಿ
ಕಲ್ಯಾಣ ನಗರ ನೋಡಿ || ೧೭ ||

ಅಕ್ಕ ಬರಲು ಕಕ್ಕಯ್ಯ ಬಂದ
ಅಲ್ಲಮನು ಒಲಿದು ಬಂದ
ಮಾಚಿದೇವ ಬೌಡಯ್ಯ ಮತ್ತೆ
ಹರಳಯ್ಯರೆಲ್ಲರಿಂದ || ೧೮ ||

ಬೊಮ್ಮಿದೇವನಾ ಚಿಕ್ಕ ದೇವ
ಮಧುವರಸ ಕಿನ್ನರಯ್ಯ
ಮಾರಿದೇವ ಮುಂತಾದ ಮಹಿಮರು
ಎಲ್ಲ ನೆರೆದರಯ್ಯ || ೧೯ ||

ವಚನ ಹಾಡಿದರು ಮಥನ ಮಾಡಿದರು
ಮನದಿ ಶಿವನ ಕಂಡು
ಹೆಣ್ಣು ಮಕ್ಕಳೂ ಸಭೆಯ ಬೆಳಗಿದರು
ಅತ್ಮ ಸಿರಿಯನುಂಡು || ೨೦ ||

ಬೆಳಕು ಹಬ್ಬಿಸಲು ಹೆಣಗುವಂಥ
ದೀಪಕ್ಕೆ ಕಪ್ಪು ಮುಚ್ಚಿ
ಕತ್ತಲಾಯ್ತು ಸಿರಿ ಎತ್ತ ಹೋಯ್ತು
ಬರಿ ಬಯಲ ಭಾವನೆಚ್ಚಿ || ೨೧ ||

ಕಲ್ಯಾಣ ಉರಿದು ಇಲ್ಲಾಣವಾಯ್ತು
ಮತ ಬೇಧ ತೀವ್ರವಾಗಿ
ಕೂಡಲದಿ ನೀನು ಕೂಡಿದೆಯೊ ಶಿವನ
ಹಣ್ಣಾಗಿ ಕೊನೆಗೆ ಮಾಗಿ || ೨೨ ||

ಎಂಟು ನೂರು ವರ್ಷಗಳು ಕಳೆದರು
ಗಂಟಾಗಲಿಲ್ಲ ಬಾಳು
ನಿನ್ನ ಬೋಧ ಬರಿ ಬೂದಿಯಾಗಿ
ಮೈ ಬಳಿಯಲಾಯ್ತು ಧೂಳು || ೨೩ ||

ಮೇಲ್ಮೆ ಸಾಧಿಸುತ ಬಂದ ಪುರೋಹಿತ
ವರ್ಗಗಳ ಒಡೆವ ನೀತಿ
ಹೊಡೆದಾಟಕೊಂದು ನೆಪವಾಗಿ ಲಿಂಗ
ಜನಿವಾರ ಭೇದ ರೀತಿ || ೨೪ ||

ನಿನ್ನ ತತ್ವ ಕೃತಿಗಳನೆ ಮರೆತ
ಬರಿ ಬಾಯಿ ಮಾತಿನಲ್ಲಿ
ಬಣ್ಣಗೆಟ್ಟ ಈ ಜನರನೆತ್ತು ಬಾ
ಜನ್ಮವೆತ್ತಿ ಇಲ್ಲಿ (ನರ ಜನ್ಮವೆತ್ತಿ ಇಲ್ಲಿ) || ೨೫ ||
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...