Home / ಕವನ / ಕವಿತೆ / ಬಸವ ಶರಣವರೇಣ್ಯ

ಬಸವ ಶರಣವರೇಣ್ಯ

ಬಸವ ನಾಮ ಸ್ಮರಣೆಯೆ ಪುಣ್ಯ
ಬಸವನ ನೆನೆಯುವ ಜನುಮವೆ ಧನ್ಯ || ಪ ||
ಬಸವೇಶ್ಚರ ಬಸವಣ್ಣನೆ ಮಾನ್ಯ
ಗುರುಬಸವೇಶನೆ ಶರಣವರೇಣ್ಯ || ಅ.ಪ.||

ಎಲ್ಲ ಧರ್ಮಗಳ ಸಾರವ ಹೀರುತ
ವೀರಶೈವವನು ರೂಪಿಸಿದೆ
ಜ್ಞಾನ ಭಕ್ತಿ ವೈರಾಗ್ಯ ಕರ್ಮಗಳ
ಸಮಗ್ರ ಧರ್ಮವ ತೋರಿಸಿದೆ || ೧ ||

ಅಂತರಂಗ ಶಿವಧ್ಯಾನವು ತುಂಬಿ
ಬಹಿರಂಗದಿ ಜಗಕಲ್ಯಾಣ
ಇಹಪರ ಎರಡರ ಸೇತುವೆ ಜೋಡಿಸಿ
ಮಾನವ ಜನ್ಮಕೆ ಸನ್ಮಾನ || ೨ ||

ಸಕಲ ಜೀವರಿಗೆ ಲೇಸನ್ನೆಣಿಸಿದೆ
ದೀನ ದಲಿತರಿಗೆ ಮಾನ್ಯತೆಯು
ಗಂಡು ಹೆಣ್ಣುಗಳ ಜಾತಿ ಭೇದಗಳ
ಅಳಿಸಿದೆ ಸಮತೆಯ ಸಾಧನೆಯು || ೩ ||

ಲೌಕಿಕ ಸಂಪದ ಭೋಗ ಭಾಗ್ಯಗಳ
ಶಿವನ ಪ್ರಸಾದವು ಎನ್ನುತ ತಿಳಿದೆ
ಸಮಾಜ ಸೇವೆಗೆ ಎಲ್ಲವು ಮೀಸಲು
ಎನ್ನುತ ಸ್ವಾರ್ಥದ ಬೇರನು ಅಳಿದೆ || ೪ ||

ದುಡಿಯದೆ ಏನೂ ಸಾಗದು ಜಗದಲಿ
ದುಡಿಯದೆ ತಿನ್ನಲು ಅದು ದ್ರೋಹ
ದುಡಿಯುವ ಕಾಯಕ ತತ್ವವ ತೋರಿದೆ
ದುಡಿಮೆಯೆ ಶರಣರ ನಿಜದಾಹ || ೫ ||

ಸತ್ಯದಾಚರಣೆಯು ನಿತ್ಯ ಕಾಯಕವು
ಶಿವನಿಗಿಷ್ಟವೆಂದೆ
ಸರಳ ಸನ್ನಡತೆ ಶಿವನ ಅನುಭಾವ
ಸಾರ್ಥಕವು ಬದುಕಿಗೆಂದೆ || ೬ ||

ಹೇಗೆ ನುಡಿಯುವುದು ಹೇಗೆ ನಡೆಯುವುದು
ಎಂಬ ರೀತಿಗಳ ಜನರಿಗೆ ಕಲಿಸಿದೆ
ನುಡಿದಂತೆ ನಡೆವ ಧೈರ್ಯ ಶ್ರದ್ಧೆಗಳ
ತುಂಬಿದೆ ಕೈಲಾಸವನ್ನಿಲ್ಲಿಳಿಸಿದೆ || ೭ ||

ಸುಳ್ಳು ಕಳವು ಕೊಲೆ ಕೋಪ ಹೇವರಿಕೆ
ಹೊಗಳು ತೆಗಳುಗಳು ಪಾಪ
ನೀತಿ ಸೂತ್ರಗಳ ಜನಕೆ ನೀಡಿದೆಯೊ
ಇದುವೆ ಧರ್ಮ ಕಲಾಪ || ೮ ||
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...