Home / ಕವನ / ಕವಿತೆ / ಗುರು ನಮನ

ಗುರು ನಮನ

ಗುರುವೆ ನಮೋ ಶ್ರೀ ಗುರುವೆ ನಮೋ
ಸದ್ಗುರುವೆ ನಮೋ ವರಗುರುವೆ ನಮೋ || ಪ ||

ಗುರುವೇ ಹರ ನಮೋ ಗುರುವೇ ಹರಿ ನಮೋ
ಗುರುವೆ ಬ್ರಹ್ಮ ಪರಗುರುವೆ ನಮೋ ||ಅ.ಪ.||

ತಾಯಿಯ ಒಲುಮೆ ತಂದೆಯ ಬಲುಮೆ
ಬಂಧು ಬಳಗ ಬಲ ನೀನೆ ಗುರು
ಲೋಕಕ್ಕೆಲ್ಲಾ ಹಿರಿಯನು ನೀನು
ದೇವತೆಗಳಿಗೂ ನೀನೆ ಗುರು || ೧ ||

ಆದಿ ಕಾಲದಲಿ ವೇದಗಳುಸುರಿದೆ
ಪ್ರಕೃತಿಯಲ್ಲಿ ಪರಮಾತ್ಮನ ಕಂಡೆ
ಉಪನಿಷತ್ತುಗಳ ಮರ್ಮವ ತಿಳಿಸಿದೆ
ಆತ್ಮ ವಿದ್ಯೆಯ ಸುಧೆಯೆರೆದೆ || ೨ ||

ಅಕ್ಷರ ಅಕ್ಷರ ಕಲಿಸುತ ಆಕ್ಷರ
ಬ್ರಹ್ಮದ ಶಿಖರಕೆ ಕರೆದೊಯ್ದೆ
ನಶ್ಚರ ಜಗದಲಿ ಶಾಶ್ವತದಿರವನು
ಈಶ್ವರತ್ವವನು ತೋರಿಸಿದೆ || ೩ ||

ಜೀವನ ಬೆಲೆಯನು ತಿಳಿಸಿದ ಗುರುವೇ
ಜೀವನ ಕಲೆಯನು ಕಲಿಸಿದೆ ನೀ
ಪಶುವಿನಿಂದ ಪಶುಪತಿಯ ಹಿರಿಮೆಯನು
ನರಕದಿ ನಾಕವ ತೋರಿದೆ ನೀ || ೪ ||

ನಡೆಯನು ತಿದ್ದಿದೆ ನುಡಿಯನು ತೀಡಿದೆ
ನಡೆನುಡಿ ಬೆರೆಯಲು ಕೈಲಾಸ
ಇಹದಲಿ ಜಯವನು ಪರದ ವಿಜಯವನು
ತೋರಿದೆ ಜೀವನದುಲ್ಲಾಸ || ೫ ||

ಶಾಸ್ತ್ರಪುರಾಣಗಳಾಗಮ ವಿಧಿಗಳು
ಯುದ್ಧ ವೈದ್ಯತಂತ್ರಾದಿಗಳು
ಅರವತ್ ನಾಲಕು ವಿದ್ಯೆಗಳೆಲ್ಲಾ
ನೀನಿತ್ತಿರುವ ದಾನಗಳು || ೬ ||

ಸುಂದರ ಗಿಡಗಳ ಹೂ ತೋಟದೊಲು
ವಿದ್ಯಾರ್ಥಿಗಳನು ಬೆಳೆಯಿಸುವೆ
ಕಲ್ಲಲಿ ಶಿಲ್ಪವ ರೂಪುಗೊಳಿಸುವೊಲು
ಮಹಾಮಾನವರ ಮೂರ್ತಿಸುವೆ || ೭ ||

ನಾಡು ನುಡಿಗಳಭಿಮಾನವ ತುಂಬುತ
ದೇಶಭಕ್ತರನು ನಿರ್ಮಿಸುವೆ
ಶ್ರದ್ದೆ ಶಕ್ತಿಗಳ ನ್ಯಾಯ ನೀತಿಗಳ
ಜನನಾಯಕರನು ರೂಪಿಸುವೆ || ೮ ||

ಜಾತಿ ಭೇದಗಳು ನಿನಗಿಲ್ಲಾ ಮತ
ಪಂಥಮೇರೆಗಳು ನಿನಗಿಲ್ಲ
ಸರ್ವರಲಿ ಸಮ ದೃಷ್ಟಿ ನಿನ್ನದು
ಮೇಲು ಕೀಳುಗಳು ನಿನಗಿಲ್ಲ || ೯ ||

ನ್ಯಾಯ ನಿಷ್ಟುರನು ಸತ್ಯ ಸಾಧಕನು
ಖಂಡಿತವಾದಿಯು ನೀನು ಗುರು
ಧೀರರಲ್ಲಿ ಅತಿಧೀರ ಮಹಾತ್ಮನೆ
ಮರಣವ ಮೀರಿದ ಮಹಾಗುರು || ೧೦ ||

ನೀನಿಲ್ಲದೆ ಜಗ ಪಶುರಕ್ಕಸರಿಂ
ಅಂಧಕಾರದಲಿ ಮುಳುಗುವುದೋ
ನಿನ್ನಿಂದಲೇ ಈ ಲೋಕದ ಸಂಸ್ಕೃತಿ
ಕಲೆ ಸಾಹಿತ್ಯವು ಬೆಳಗುವುದೋ || ೧೧ ||

ಕತ್ತಲೆಯಿಂದ ಬೆಳಕಿನ ಕಡೆಗೆ
ಅಸತ್ಯದಿಂದ ಸತ್ಯದ ಎಡೆಗೆ
ಮರ್ತ್ಯದಿಂದ ಅಮೃತತ್ವದ ಗುರಿಗೆ
ನಮ್ಮನು ಒಯ್ಯುವ ಗುರುವೆ ನಮೋ || ೧೨ ||
*****
(ಶಿಕ್ಷಕರ ದಿನಾಚರಣೆಯಲ್ಲಿ ಸಾದರಪಡಿಸಿದ ಕವನ)

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...