Home / ಲೇಖನ / ವಿಜ್ಞಾನ / ವಿಟ್ಯಾಮಿನ್ ಭರಿತ ಚಹಾ!

ವಿಟ್ಯಾಮಿನ್ ಭರಿತ ಚಹಾ!

ದಿನನಿತ್ಯ ಸೇವಿಸುವ ಪಾನಿಯಗಳಲ್ಲಿ ವಿಟ್ಯಾಮಿನ್‌ಗಳು ಸಮೃದ್ಧವಾಗಿ ಸಿಗುತ್ತವೆ ಎಂದರೆ ಬೇಡವೆನ್ನುವರಾರು? ಕೋಟ್ಯಾಂತರ ಜನರಿಗೆ ಅಗತ್ಯವಿರುವ ಪೌಷ್ಟಿಕತೆಯನ್ನು ಒದಗಿಸುವ ಅತ್ಯಾಧುನಿಕ ತಾಂತ್ರಿಕ ಶೋಧನೆಯೊಂದು ಈ ರೀತಿ ‘ಚಹಾಪೇಯ’ವನ್ನು ತಯಾರಿಸುತ್ತಲಿದೆ.

ದೇಶದ ಅತಿದೊಡ್ಡ ಪ್ಯಾಕೆಟ್ ಟೀ ಕಂಪನಿ ಹಿಂದುಸ್ಥಾನ್ ಲಿವರ್ ಲಿಮಿಟೆಡ್ (H.L.L.) ಇದೀಗ ವಿಟಮಿನ್ ಎ, ಬಿ2 ಮತ್ತು ನಿಯಾಸಿನ್‌ಗಳನ್ನು ಸೇರಿಸಿ ಸಮೃಧಿಗೊಳಿಸಿದ (ಫೋರ್ಟಿಫೈಡ್) ಬ್ರೂಕ್‌ಬಾಂಡ್, ಎ1, ಪವರ್ ಎಂಬ ವಿಟಮಿನ್ ಭರಿತ ಟೀಯನ್ನು ಭಾರತಕ್ಕೆ ಪರಿಚಯಿಸಿದೆ.

ಈ ಟೀ ಅಪಾರವಾದ ನೈಸರ್ಗಿಕ ಆರೋಗ್ಯವನ್ನು ಹೊಂದಿದ್ದು ಬೇರೆ ಯಾವುದೇ ರುಚಿಯನ್ನೂ ನೀಡದೇ ಸಹಜವಾದ ರುಚಿಯನ್ನು ಹೊಂದಿದೆ. ಬ್ರೂಕ್‌ಬಾಂಡ್ ಎ1 ಪವರ್ ಟೀಯನ್ನು ದಿನಕ್ಕೆ ಐದು ಕಪ್ಪನ್ನು ಕುಡಿದರೆ ಶೇ. ೫೦ ರಷ್ಟು ವಿಟ್ಯಾಮಿನ್ ದೊರೆಯುತ್ತದೆ. ಭಾರತದ ಜನಸಂಖ್ಯೆಯಲ್ಲಿ ಶೇ.೫೦ ಕ್ಕೂ ಹೆಚ್ಚು ಜನರಲ್ಲಿ ವಿಟಾಮಿನ್ ಕೊರತೆ ಎದ್ದು ಕಾಣುತ್ತದೆ. ಪ್ರಾಯಶಃ ೧೦ ಜನ ಭಾರತೀಯರಲ್ಲಿ ಕನಿಷ್ಟ ೮ ಜನರಾದರೂ ಟೀ ಕುಡಿಯುವದರಿಂದ ಇವರಿಗೆ ಪೌಷ್ಟಿಕತೆ ಒದಗಿಸಲು ಇರುವ ಅತ್ಯುತ್ತಮ ಮಾರ್ಗವೆಂದರೆ ಈ ಪಾನಿಯವನ್ನು ಸಮೃದ್ಧಗೊಳಿಸುವುದಾಗಿದೆ. ಯಾವುದೇ ಮಾಲ್ವೆಡ್ ಪಾನೀಯದ ಒಂದು ಬಟ್ಟಲಿಗೆ ೬ ರೂ. ಆದರೆ ಎ1 ಪವರ್ ಟೀ ಬೆಲೆ ಸು.M 1.30 ರೂ. ಆಗಿರುವುದರಿಂದ ಎಲ್ಲರ ಕೈಗೆ ಎಟಕುತ್ತದೆ.

ಹಿಂದೂಸ್ಥಾನ್ ಲಿವರ್ ಸಂಶೋಧನಾ ಮತ್ತು ಪ್ರಗತಿಪರ ಕಾರ್ಯವಿಧಾನಗಳ ನಂತರ ಕರ್ನಾಟಕದಲಿ ಬಿಡುಗಡೆ ಮಾಡಲಾಗಿದೆ. ಆರೋಗ್ಯ ಮತು ಪೌಷ್ಟಿಕತೆ (ಹೆಲ್ತ್ ಅಂಡ್ ನ್ಯೂಟ್ರಿನ್)ಯ ಕ್ಷೇತ್ರದಲ್ಲಿ ಸ್ವತಂತ್ರ ಸಂಸ್ಥೆಯಾಗಿರುವ ನ್ಯೂಟ್ರಿಷನ್ ಸಿಂಡಿಕೇಟ್ ಈ ಟೀ ಬ್ರಾಂಡನ್ನು ದೃಢೀಕರಿಸಿದೆ. ಈ ಸಂಸ್ಥೆಯ ಅಧ್ಯಕ್ಷರಾದ ಡಾ|| ಕಲ್ಯಾಣ ಬಾಗ್ಯಿಯವರು ಎ1 ಪವರ್ ಪರೀಕ್ಷೆಗೆ ಒಳಪಡಿಸಿದ ವರದಿಗಳನ್ನು ನೋಡಿ ಎ1 ಪವರ್‌ನ ೫ ಬಟ್ಟಲುಗಳು ದಿನಕ್ಕೆ ಅಗತ್ಯವಿರುವ ವಿಟಾಮಿನ್‌ಗಳಲ್ಲಿ ಶೇ. ೫೦ ರಷ್ಟು ಪೂರೈಸುತ್ತದೆಂದು ಹೇಳುತ್ತಾರೆ. ಭಾರತ ದಂತಹ ಜನನಿಬಿಡ ದೇಶದಲ್ಲಿ ಸೂಕ್ಷ್ಮ ಪೋಷಣೆಯ ಕೊರತೆಯನ್ನು ನೀಗಿಸುವ ಪರಿಹಾರೋಪಾಯವೆಂದರೆ ಸಮೃದ್ಧಗೊಳಿಸಿದ ಆಹಾರಗಳು, ಪಾನಿಯಗಳು ಎನ್ನಬಹುದು. ೧೯೯೫ರಲ್ಲಿಭಾರತವು ಅಂಗೀಕರಿಸಿದ ದಿ ನ್ಯಾಶನಲ್ ನ್ಯೂಟ್ರೀಷನ್ ಪ್ಲಾನ್ ಆಪ್ ಆಯಕ್ಷನ್‌ನಲಿ ಪೌಷ್ಟಿಕತೆಯ ಕೊರತೆ ವಿಶೇಷವಾಗಿ ಸೂಕ್ಷ್ಮಪೌಷ್ಟಿಕತೆಯನ್ನು ನಿರ್ಮೂಲನ ಮಾಡಿ ಪೌಷ್ಟಿಕ ಆಹಾರವನ್ನು ಉತ್ತೇಜಿಸಲು ಆಹಾರಗಳನ್ನು ಸಮೃದ್ಧಿಗೊಳಿಸಬೇಕೆಂದು ಹೇಳಿದೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...