Home / ಕವನ / ಕವಿತೆ / ಕಾಯುತ್ತೇವೆ ನೀ ಬರುವ ತನಕ

ಕಾಯುತ್ತೇವೆ ನೀ ಬರುವ ತನಕ

ನೀ ಹುಟ್ಟಿದ್ದು ಇನ್ನೂ ಮೊನ್ನೆ ಎನ್ನುವಂತಿದೆ.
ಪಿಳ ಪಿಳ ಕಣ್ಣು ಬಿಟ್ಟಿದ್ದು
ಬುಳ ಬುಳ ಮೂತ್ರ ಬಿಟ್ಟಿದ್ದು
ತಿಂಗಳು ಮುಂಚೆ ಹುಟ್ಟಿದ್ದೆಂದು ನಿನ್ನನ್ನ
ನಾಲ್ಕು ದಿನ ದಪ್ಪ ಹತ್ತಿಯಲ್ಲಿ ಸುತ್ತಿಟ್ಟಿದ್ದು
ಇನ್ನೂ ಕಣ್ಣಲ್ಲಿದೆ,
ಪುಟ್ಟ ಕಂಠದಿಂದ ಹೊರಟ
ಮರಿ ಬೆಕ್ಕಿನದಂಬಂಥ ದನಿ ಕಿವಿಯಿರಿದರೂ
ಎಷ್ಟು ಮಧುರ ಎಂದು ಕೊಂಡಾಡಿದ್ದು
ಸ್ಮೃತಿಯಲ್ಲಿದೆ!
ಹಣ್ಣಲ್ಲಿದೆ ಹಲ್ಲಿನ ಗುರುತು,
ಮಣ್ಣಲ್ಲಿದೆ ತಟ್ಟರಿಯುತ್ತ ನೀನಿಟ್ಟ ಹಜ್ಜೆಯದು,
ಗೇಟನ್ನು ಕುರಿತು.
* * *

ಏನು ಸಡಗರ ಎಂಥ ಗೆಲವು, ನಿನ್ನ
ಬಿಡುಗಡೆಗೆ ಕೇಕೆ, ಮುಖ ನಗೆಪತಾಕೆ,
ಮಾತೆಲ್ಲ ಬಾನಿನಲಿ ಮೈಲಿಯೆತ್ತರ ಜಿಗಿದು
ಕಿಡಿ ಹೂವ ಚಿಮ್ಮಿ ಮುಗಿಯುವ ಗದ್ದಲ.
ಮಾತು ಮಾತಿಗೆ ಹರಕೆ
ಕೆಂದ ಬಾಳಲಿ ಎಂದು,
ಹೆಜ್ಜೆ ಹೆಜ್ಜೆಗೆ ಹಾಡು ತಾಳ ತಬಲ,
ನೀಲಿ ನೀರಿನ ಗಡಿಗೆ ಬಾನು. ಬದಿಗೆ
ತೇಲಿ ಬಂದನು ಚಂದ್ರ ಚಿಕ್ಕಿ ಜೊತಗೆ;
ಜೂಟಾಟದಲ್ಲಿದ್ದ ತುಂಡುಮೋಡದ ತಂಡ
ಸಿಗದೆ ಓಡುತ್ತಿತ್ತು ಗಾಳಿ ಕೈಗೆ;
ಮನೆಯ ಅಂಗಳದಲ್ಲಿ ಕವನ ಹಾಡುತ್ತಿತ್ತು
ಗಜದಗಲ ಹಬ್ಬಿದ್ದ ಹಸಿರು ದವನ;
ಮುಟ್ಟಿದ್ದೆ ಸಾಕಾಗಿ
ಮೈಯೆಲ್ಲ ಕಂಪಾಗಿ
ಬೀಗಿ ನಡೆಯುತ್ತಿತ್ತು ಮಂದಪವನ.
ನಿತ್ಯಮಲ್ಲಿಗೆಬಳ್ಳಿ ತೃಪ್ತಿಯಿಂದ
ಬಿಳಿಸೆರಗ ಹೊದ್ದಿದ್ದು ಕತ್ತುತುಂಬ.
ಹೆಚ್ಚಿದರೆ ಇನ್ನಿಷ್ಟು ಹುಚ್ಚೆನ್ನಬಹುದಿತ್ತು
ನಮ್ಮ ನಡಿಗೆಯಲಿತ್ತು ಅಷ್ಟು ಜಂಭ.
* * *

ಅದೆಲ್ಲ ನೋಯಿಸುವ ನೆನಪು
ಸದ್ಯದ ಬದುಕು ಉರಿದ ಬತ್ತಿಯ ಕರಕು,
ಸುಳ್ಳೇನಲ್ಲ, ಬೆಟ್ಟದಷ್ಟು ಬಡತನ ನಮಗೆ,
ಆದರೂ ನೀ ಬಿಟ್ಟು ಹೋಗುವಷ್ಟಿತ್ತೆ
ಎಂದು ನೋಯುತ್ತೇನೆ.
ಎಳೆ ಬಾಲನ ಬಾಯಿಗೆ
ಬೇಕಾಗುವ ಹಾಲಿಗೆ
ಸಾಕಾಗುತ್ತಿತ್ತು ಹಾಗೂ ಹೀಗೂ
ಒಪ್ಪೊತ್ತಿನ ಕೂಳಿಗೆ.
ಇಷ್ಟರ ನಡುವೆ ನೀ ಬೆಳೆದೀಯೆಂದು
ದುಃಖ ಕಳೆದೀಯೆಂದು
ಹತ್ತು ಜನರ ನಡುವೆ ಕತ್ತತ್ತಿ ನಿಲ್ಲುವ ದಿನವ
ತಂದೀಯೆಂದು
ಬಯಸಿದ್ದಕ್ಕೆ
ಕಾಲಿಡಲು ಕಲಿತ ಹುಡುಗ
ಎಲ್ಲರ ಕಣ್ಣು ತಪ್ಪಿಸಿ
ಕಾಲಿಟ್ಟೆ ಕಡೆಗೆ
ಮನೆ ಹೊರಗೆ
* * *

ಸುತ್ತಿಕೊಂಡಂತೆ ಕಡೆಗು ನಮ್ಮ ಬದುಕನ್ನ
ಆಕ್ರಂದನ ?
ಇದ್ದಲ್ಲೆ ಬಂಧನ.
ಅತ್ತಿದ್ದೆಷ್ಟೊ
ಅಳಲಿದ್ದೆಷ್ಟೊ
ದೂರು ಸಲ್ಲಿಸಿ ಎಲ್ಲ ಕಡೆಗೆ
ಸುತ್ತಿದ್ದೆಷ್ಟೋ ಬೀದಿ ಬೀದಿ.
ಹೊತ್ತಿ ಉರಿಯುವ ದುಃಖ ಶಮಿಸಲೆಂದು
ನೋಡುತ್ತೇವೆ ಸದಾ ನಿನ್ನ ಚಿತ್ರದ ಕಡೆಗೆ.
ನೀ ಬಂದೇ ಬರುವಿಯೆಂಬ ಭವಿಷ್ಯನಂಬಿ
ಹಾಯುತ್ತೇವೆ ಈ ಹರಾಮೀ ಬದುಕ
ನೀ ಬರುವ ತನಕ
ಕಾಯುತ್ತೇವೆ ತೆಗೆದು ಮನೆ ಬಾಗಿಲ ಚಿಲಕ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...