Home / ಲೇಖನ / ಇತರೆ / ಮನಸಿನಾಳವು ಮಿಗಿಲು

ಮನಸಿನಾಳವು ಮಿಗಿಲು

ಪ್ರಿಯ ಸಖಿ,

ಪ್ರಪಂಚದಲ್ಲೇ ಅತಿ ಶ್ರೇಷ್ಠ ಜೀವಿ ಮಾನವನೆನ್ನುತ್ತಾರೆ. ಏಕೆಂದರೆ ಅವನು ಚಿಂತಿಸಬಲ್ಲ, ಮಾತಾಡಬಲ್ಲ, ವಿವೇಚಿಸಬಲ್ಲ  ಎಲ್ಲಕ್ಕಿಂತಾ ಹೆಚ್ಚಾಗಿ ಎಲ್ಲವನ್ನೂ ಪ್ರೀತಿಸಬಲ್ಲ ಮನಸ್ಸೊಂದು ಅವನಲ್ಲಿದೆ. ಅದೇ ಅವನ ಹಿರಿಮೆಯನ್ನು ಹೆಚ್ಚಿಸಿದೆ. ಕವಿ ಕುವೆಂಪು ಅವರು ತಮ್ಮ ಒಂದು ಕವನದಲ್ಲಿ,

ಕಡಲಿನಾಳವು ಮಿಗಿಲುManasu
ಕಡಲಿಗಿಂತಲು ಮಿಗಿಲು
ಮನಸಿನಾಳ
ಬಾನಿನಗಲವು ಮಿಗಿಲು
ಬಾನಿಗಿಂತಲು ಮಿಗಿಲು
ಮನುಜನೆದೆಯು

ಎಂದಿದ್ದಾರೆ. ಕಡಲಿನ ಆಳವನ್ನು ಬಾನಿನ ಅಗಲವನ್ನು ಯಾರಿಂದಲೂ ಅಳೆಯಲಾಗಲಿಲ್ಲ. ಅದಕ್ಕಿಂತಾ ಆಳ ಹಾಗೂ ಅಗಲವಾದದ್ದು ಮಾನವನ ಮನಸ್ಸು ಎಂದಿದ್ದಾರೆ ಕವಿ. ನಿಜಕ್ಕೂ ಹೀಗಾದರೆ ಎಷ್ಟು ಚೆನ್ನ ಅಲ್ಲವೇ ಸಖೀ? ಈ ಮಟ್ಟಕ್ಕೆ ನಮ್ಮ ಮನಸ್ಸನ್ನು ನಾವು ಉಪಯೋಗಿಸಿಕೊಳ್ಳುತ್ತಿದ್ದೇವೆಯೇ? ಎಂದು ಒಂದು ಪ್ರಶ್ನೆ ಹಾಕಿಕೊಳ್ಳಲೇಬೇಕು. ನಮ್ಮ ಜನ್ಮವನ್ನು ವ್ಯರ್ಥವಾಗಿಸುತ್ತಿರುವುದನ್ನು ಕಂಡೇ ದಾಸರು “ಮನುಜ ಜನ್ಮ ದೊಡ್ಡದು ಅದ ಹಾನಿ ಮಾಡಬೇಡಿರೋ
ಹುಚ್ಚಪ್ಪಗಳಿರಾ” ಎಂದಿರುವುದು.

ಒಳಿತು-ಕೆಡಕುಗಳೆರಡೂ ವ್ಯಕ್ತಿಯೊಬ್ಬನಲ್ಲಿ ಸಮಪ್ರಮಾಣದಲ್ಲಿ ಮಿಳಿತವಾಗಿರುತ್ತದೆ. ಯಾವುದಕ್ಕೆ ನಾವು ಬದುಕಿನಲ್ಲಿ ಹೆಚ್ಚು ಪ್ರಾಶಸ್ತ್ಯ ನೀಡುತ್ತಾ ಹೋಗುತ್ತೇವೋ ಅದು ನಮ್ಮಲ್ಲಿ ಒಂದಾಗುತ್ತಾ ಹೋಗುತ್ತದೆ. ನಮ್ಮ ವ್ಯಕ್ತಿತ್ವವಾಗಿ, ಗುಣವಾಗಿ ನಾವು ಬೆಳೆದಂತೆಲ್ಲಾ ಬೆಳೆಯ ತೊಡಗುತ್ತದೆ. ನಾವು ಮನಃಪೂರ್ವಕವಾಗಿ ತಿರಸ್ಕರಿಸಿದ್ದು ನಮ್ಮಿಂದ ಕಳೆದುಹೋಗುತ್ತಾ ಬರುತ್ತದೆ. ಆದ್ದರಿಂದಲೇ ಇಲ್ಲಿ ಆಯ್ಕೆಗೆ ಹೆಚ್ಚಿನ ಮಹತ್ವವಿದೆ.

ಸಾಫೋಕ್ಲಿಸ್ ಹೀಗೆ ಹೇಳುತ್ತಾನೆ. “ಅದ್ಭುತಗಳು ಅನೇಕ. ಆದರೆ ಮನುಷ್ಯನನ್ನು ಮೀರಿದ ಅದ್ಭುತ ಇಲ್ಲ” ಎಂದು ವ್ಯಕ್ತಿಯೊಬ್ಬನಲ್ಲಿ ಎಷ್ಟೊಂದು ಅದ್ಭುತ ಶಕ್ತಿಗಳು ಇರಬಹುದು. ಅದನ್ನು ಕಂಡುಕೊಳ್ಳುವ ಜವಾಬ್ದಾರಿ ವ್ಯಕ್ತಿಯದೇ ಆಗಿರುತ್ತದೆ. ಅವನು ಮನಸ್ಸು ಮಾಡಿದರೆ ಯಾವುದನ್ನೂ ಸಾಧಿಸಬಲ್ಲ. ತನ್ನಲ್ಲಿರುವ ಒಳಿತನ್ನು, ಪ್ರೀತಿಯನ್ನು ಜಾಗೃತಗೊಳಿಸಿ ಕಡಲಿನ ಆಳಕಿಂತಲೂ ಮಿಗಿಲು, ಬಾನಿನಗಲಕ್ಕಿಂತಲೂ ಮಿಗಿಲಾದ ಮನಸ್ಸನ್ನು ಹೊಂದಿದರೆ ಸಾಮಾನ್ಯ ಮಾನವನೂ ವಿಶ್ವಮಾನವನಾಗುವುದರಲ್ಲಿ ಸಂದೇಹವೇ ಇಲ್ಲ. ನೀನೇನೆನ್ನುತ್ತೀ ಸಖೀ?
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...