Home / ಲೇಖನ / ವಿಜ್ಞಾನ / ಮಾಲಿನ್ಯ ರಹಿತ ಹೊಗೆಯುಗಳದ ರಿಕ್ಷಾಗಳು

ಮಾಲಿನ್ಯ ರಹಿತ ಹೊಗೆಯುಗಳದ ರಿಕ್ಷಾಗಳು

ಪೆಟ್ರೋಲ್ ಬಳೆಸುವ ದ್ವಿಚಕ್ರವಾಹನಗಳು ಅದರಲ್ಲೂ ಎರಡು ಸ್ಟ್ರೋಕ್‌ಗಳ ಯಂತ್ರಗಳು ಅತಿ ಹೆಚ್ಚು ಹೈಡ್ರೋ ಇಂಗಾಲದ ಮಲೀನ ಹೊಗೆಯನ್ನು ಹೊರಗೆಡವುತ್ತವೆ. ಇದರಿಂದ ಜೀವಕುಲದ ಉಸಿರಾಟಕ್ಕೆ ತೊಂದರೆ ಎಂಬ ಸತ್ಯ ಎಲ್ಲರಿಗೂ ಗೊತ್ತು. ಅದರಲ್ಲೂ ಕೆಲವರು ಪೆಟ್ರೋಲ್‌ನಲ್ಲಿ ಡೀಸೆಲ್ ಎಣ್ಣೆಯನ್ನು ಬೆರೆಯಿಸಿದಾಗ ಶಬ್ದವೂ ಕೂಡ ಕರ್ಕಶವಾಗುವುದಲ್ಲದೇ ಇನ್ನಷ್ಟು ಮಲೀನಯುಕ್ತ ವಾಯುಮಾಲಿನ್ಯವಾಗುತ್ತದೆ.

ಈ ವಾಯುಮಾಲಿನ್ಯವನ್ನು ಕಡಿಮೆಗೊಳಿಸಲು “ಜಿ ಮತ್ತು ಟಿ ಯುಗೋಟೆಕ್” ಎಂಬ ಕಂಪನಿಯೊಂದು ಒಂದು ಉಪಕರಣವೊಂದನ್ನು ತಯಾರಿಸಿದೆ. ಇದನ್ನು ಬಿಡಿಭಾಗದಂತೆ ರಿಕ್ಷಾಗಳಿಗೆ ಜೋಡಿಸಬಹುದು. ಇದು ಪೆಟ್ರೋಲನ್ನು ಪ್ರೊಪೇನ್ ಆಗಿ ಪರಿವರ್ತಿಸುತ್ತದೆ. ಪ್ರತಿಭಾಗದಲ್ಲಿ ೧೨ ಲೀಟರ್ ಸಾಮರ್ಥ್ಯದ ಟ್ಯಾಂಕ್ ಮತ್ತು ಮೈಕ್ರೋ ಪ್ರೊಸೆಸಲ್ ನಿಯಂತ್ರಣವಿರುತ್ತದೆ. ಇದು ವಾಹನ ಬಳಸುವ ಪೆಟ್ರೋಲನ್ನು ನಿಯಂತ್ರಿಸುತ್ತದೆ. ದೇಶದಲ್ಲಿ ಇದರ ಪ್ರಯೋಗ ಈಗಾಗಲೇ ನಡೆದಿದೆ. ಜಗತ್ತಿನಲ್ಲಿ ಇದೊಂದು ಪ್ರಥಮ ಪ್ರಯೋಗವೆಂದು ಹೇಳಲಾಗುತ್ತದೆ. ಜಿ ಮತ್ತು ಟಿ ಯುಗೋಟೆಕ್ ಕಂಪನಿಯ ನಿರ್ವಾಹಕ ನಿರ್ದೇಶಕರಾದ ರಾಜೀವ ಸವಾರಾ ಅವರ ಪ್ರಕಾರ ಪ್ರೋಪೇನ್ನಿಂದ ಚಲಿಸುವ ರಿಕ್ಷಾಗಳು ಹೈಡ್ರೋಕಾರ್ಬನ್, ಕಾರ್ಬನ್ ಮೊನಾಕ್ಸೈಡ್ ಮತ್ತು ನೈಟ್ರೋಜನ್ ಆಕ್ಸೈಡ್‌ಗಳಂತಹ ವಿಷಾನಿಲಗಳ ಕ್ಷಮತೆಯೇನೂ ಕಡಿಮೆಯಾಗಲಾರದು. ಬದಲಾಗಿ ಸುರಕ್ಷೆಗೂಳ್ಳುತ್ತದೆ. ಪ್ರೋಪೇನನ್ನು ಬದಲಿ ಇಂಧನವಾಗಿ ಭಾರತದಲ್ಲಿ ನಿಷೇಧಿಸಲಾಗಿದೆ. ಏಕೆಂದರೆ ಅದು ವಿರಳವಾಗಿ ದೊರೆಯುವ ರಾಸಾಯನಿಕ ವಸ್ತು, ಆದರೆ ಜಿ ಮತ್ತು ಟಿ ಕಂಪನಿಯು ಪ್ರಾಯೋಗಿಕವಾಗಿ ದೆಹಲಿಯಲ್ಲಿ ಈ ಉಪಕರಣವನ್ನು ಬಳಸಲು ನ್ಯಾಯಾಲಯದ ಅನುಮತಿ ಪಡೆದಿದೆ.

ಸ್ಥಳೀಯ ಸರಕಾರಕ್ಕೆ ಈ ಪ್ರಯೋಗದ ಫಲಿತಾಂಶಗಳನ್ನು ಮೇಲ್ವಿಚಾರಣೆ ಮಾಡಲೂ ಕೋರ್ಟ್ ಆದೇಶಿಸಿದೆ. ಪ್ರತಿ ರಿಕ್ಷಾಗೆ ಪ್ರೊಪೇನ್ ಟ್ಯಾಂಕ್ ಜೋಡಿಸಲು ೧೨,೦೦೦ ರೂಪಾಯಿಗಳಷ್ಟು ಖರ್ಚಾಗುತ್ತದೆ. ಈ ಪ್ರಯೋಗವು ಯಶಸ್ವಿಯಾದರೆ ಸರಕಾರವೇ ಪ್ರೋಪೇನ್ ಪರಿವರ್ತನೆಯ ಯಂತ್ರಗಳನ್ನು ಕೊಂಡುಕೊಂಡು ರಿಕ್ಷಾ ಮಾಲೀಕರಿಗೆ ಸರಬರಾಜು ಮಾಡುವ ಯೋಜನೆ ಇದೆ. ಇದಕ್ಕೆ ತಗಲುವ ಅಧಿಕ ಖರ್ಚನ್ನು ಹೆಚ್ಚಿನ ಪ್ರಮಾಣದ ಇಂಧನಕರದಿಂದ ಪಡೆಯಲಾಗುವುದು. ಪೆಟ್ರೋಲಿಗಿಂತ ಪ್ರೊಫೇನ್ ಸುಮಾರು ಅರ್ಧದಷ್ಟು ಅಗ್ಗವಾಗಿರುವುದರಿಂದ ಇದನ್ನು ಮುಂದೊಂದು ದಿನ ಎಲ್ಲ ಕಡೆ ಲಾಭದಾಯಕವಾಗಿ ಬಳಸಬಹುದು. ಇಂತಹ ರಿಕ್ಷಾಗಳು ಎಲ್ಲೆಡೆ ಚಲಾವಣೆಗೊಂಡರೆ ಒಂದಿಷ್ಟು ಪರಿಸರಕ್ಕೆ ಒಳ್ಳೆಯದಾಗಬಹುದೇನೋ?
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...