Home / ಲೇಖನ / ವಿಜ್ಞಾನ / ಅಂತರೀಕ್ಷಲ್ಲೊಂದು ನಗರ

ಅಂತರೀಕ್ಷಲ್ಲೊಂದು ನಗರ

ನೆಲದಾಳದಲ್ಲಿ, ಸಾಗರದಾಳದಲ್ಲಿ ನಗರಗಳನ್ನು ನಿರ್ಮಿಸಿ ಯಾವ ಸಮೆಸ್ಯೆಗಳೂ ಇಲ್ಲದಂತೆ ಬದುಕುವ ವ್ಯವಸ್ಥೆಯನ್ನು ಅಮೇರಿಕ, ಜಪಾನಗಳಂತಹ ಮುಂದುವರೆದ ರಾಷ್ಟ್ರಗಳು ಮಾಡುತ್ತಲಿವೆ. ಜನಸಾಂದ್ರತೆ ಪರಿಸರ ನೈರ್ಮಲ್ಯತೆಗಳನ್ನು ಈ ಪ್ರದೇಶಗಳಲ್ಲಿ ಕಾಪಾಡಿ ಕೊಳ್ಳುಬಹುದೆಂಬ ಆಶಯ ಇವರದು. ಇದೀಗ ಅಂತರೀಕ್ಷದಲ್ಲಿ ನಿಸರ್ಗ ಸಹಜವಾದ ವಾತಾನುಕೂಲ ವ್ಯವಸ್ಥೆ ಹೊಂದಿ ನಗರಗಳನ್ನು ನಿರ್ಮಾಣಗೊಳಿಸಲಾಗುತ್ತಿದೆ. ಈ ನಗರದ ಸುತ್ತಲೂ ಗಾಜಿನಗೊಳವನ್ನು ಮಾಡಲಾಗಿದ್ದು ಸೂರ್ಯನ ಚಲನೆಯನ್ನು ಅನುಸರಿಸಿ ಬೆಳಕನ್ನು ಪ್ರತಿಫಲಿಸುವ ಕನ್ನಡಿಗಳು ಪ್ರಾಕೃತಿಕ ಬೆಳಕನ್ನು ಅವಶ್ಯಕತೆಗೆ ತಕ್ಕಂತೆ ಬಳಸಿಕೊಳ್ಳುತ್ತವೆ. ಎರಡು ಗಾಜಿನ ಪದರುಗಳಿಂದಾವೃತ್ತವಾದ ಈ ನಗರ ಸಂಕೀರ್ಣದಲ್ಲಿ ಹೊರಪದರವು ಪರಿಸರದ ಮಾಲಿನ್ಯ, ಶಬ್ಧ ಮಾಲಿನ್ಯವನ್ನು ತಡೆಯುತ್ತದೆ. ಒಳಪದರ ಗಾಜಿನ ಪದರವನ್ನು ಗಾಳಿ ಒಳಬರಲು ಅನುಕೂಲಕ್ಕೆ ತೆರೆಯುವ ಕಿಟಕಿಯಂತೆ ಬಳಸಬಹುದು. ಸೂರ್ಯನ ತಾಪ, ಗಾಳಿಯ ಚಲನೆಯನ್ನು ಈ ನಗರದಲ್ಲಿ ಕಾಯ್ದುಕೊಳುತ್ತದೆ. ಹೆಚ್ಚು ಬಿಸಿಗಾಳಿಯನ್ನು ನಗರದ ಮೇಲಿನ ಮುಚ್ಚಳದಿಂದ ಹೊರಹಾಕಲು ಸಾಧ್ಯವಿದೆ. ಚಳಿಗಾಲದಲ್ಲಿ ಗಾಳಿಯ ಉಷ್ಣತೆಯನ್ನು ಬಳಸಿ ನಗರವನ್ನು ಬೆಚ್ಚಗಿಡಬಹುದು.

ನೆಲಮಟ್ಟದಲ್ಲಿ ಸಾಂದ್ರವಾಗಿರುವ ಹೊರ ಪ್ರಪಂಚದೊಳಗೆ ಸೇರದಂತಿರಲು ಗಾಳಿಯನ್ನು ೧೭ ಮೀ ನೆಲಮಟ್ಟದ ಎತ್ತರದಿಂದ ಒಳಸೇರಿಕೊಳ್ಳುವ ವ್ಯವಸ್ಥೆ ಇದೆ. ಟೊಳ್ಳಾದ ಪೆಟ್ಟಿಗೆಯಾಕಾರದ ನೆಲವನ್ನು ಮಾಡಲಾಗಿದ್ದು ತೂಗು ಸೇತುವೆಯಂತೆ ನೆಲವನ್ನು ತೂಗುಹಾಕಲಾಗಿದೆ. ನಿರ್ದಿಷ್ಟವಾದ ಆಕಾರವನ್ನು ಹೊಂದಿರುವ ಈ ನಗರವಿನ್ಯಾಸ ಗಾಳಿಗೆ ತಡೆಯೊಡ್ಡದಂತೆ ರೂಪುಗೊಂಡಿದೆ. ವೇಗದ ಗಾಳಿಯನ್ನು ತಡೆದು ನೆಲದಲ್ಲಿ ಮಂದವಾಗಿ ಹರಡುವಂತಹ ವ್ಯವಸ್ಥೆಯನ್ನು ಮಾಡಲಾಗಿದೆ. ಕಟ್ಟಡದ ಹೊರಭಾಗದಲ್ಲಿನ ಉದ್ಯಾನದಲ್ಲಿ ಈಗಾಗಲೇ ಒಳ್ಳೆಯ ಸೂಕ್ತ ಸಸ್ಯ ಸಂಕುಲದ ಬೆಳವಣಿಗೆಯನ್ನು ಸಹ ಮಾಡಲಾಗುತ್ತದೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...