Home / ಲೇಖನ / ವಿಜ್ಞಾನ / ಎರಡು ಹೊಸ ಭೂಗ್ರಹಗಳ ಶೋಧ

ಎರಡು ಹೊಸ ಭೂಗ್ರಹಗಳ ಶೋಧ

ಈಗಿರುವ ಗ್ರಹಗಳಲ್ಲಿ ಜೀವಸಂಕುಲದ ಅನ್ವೇಶಣೆ ಒಂದೆಡೆ ಸಾಗಿದರೆ ಇದರ ಜೊತೆಗೆ ಹೊಸ ಭೂಗ್ರಹಗಳ ಹುಡುಕಾಟವೂ ನಡೆಯುತ್ತಿದ್ದು ಎರಡು ಹೊಸ ಭೂಗ್ರಹಗಳನ್ನು ಸ್ವಿಡ್ಜರ್ ಲ್ಯಾಂಡಿನ ಜಿನಿವಾ ವೇದಶಾಲೆ, ಮತ್ತು ಅಮೇರಿಕನ್ ಖಗೋಳ ವೇದ ಶಾಲೆಗಳು ಕಂಡು ಹಿಡಿದಿವೆ.

ಈ ಎರಡು ಭೂಗ್ರಹಗಳು ನಮ್ಮಿಂದ ೩೫ ಜ್ಯೋತಿವರ್‍ಷಗಳ ಅಂತರದಲ್ಲಿವೆ, ಎಂದು ವಿಜ್ಞಾನಿಗಳು ಅಭಿಪ್ರಾಯ. ಇದರಂತೆ ೭೦ ವರ್ಜಿನಿಸ್, ಮತ್ತು “೪೭ ಉರ್ಸೆ ಮೆಜೋರಿಸ್” ಎಂದು ಹೆಸರಿಸಲಾಗಿದ್ದು ಒಂದು ಕನ್ಯಾರಾಶಿಯಲ್ಲಿಯೂ ಇನ್ನೊಂದು ಸಪ್ತರ್ಷಿ ಮಂಡಲದಲ್ಲಿಯೂ ಇವೆ, ಎಂದು ಖಚಿತಪಡಿಸಿಕೊಳ್ಳಲಾಗಿದೆ. ರೇಡಿಯೋ ತರಂಗಗಳ ಮೂಲಕ ನಾವು ಸಂದೇಶ ಕಳಿಸಿದರೆ ೩೫ ವರ್ಷಗಳು ಬೇಕು. ನಕ್ಷತ್ರವಾಗಿದ್ದು ಸೂರ್ಯನಂತೆ ಇವೆ. ಇದನ್ನು ಸುತ್ತುವ ವರ್ಜಿನಿಯಸ್ – ೭೦, ನಮ್ಮ ಗುರುಗ್ರಹದ ಗಾತ್ರಕ್ಕಿಂತ ೮ ಪಟ್ಟು ದೊಡ್ಡದಿದೆ. ಪ್ರತಿ ೧,೧೦೦ ದಿನಗಳಿಗೊಮ್ಮೆ ತನ್ನ ಸೂರ್ಯನನ್ನು ಪ್ರದಕ್ಷಣೆ ಇವು ಹಾಕುತ್ತಿವೆ. ಇದರ ತಾಪಮಾನ ೮೦ ಸೆಲ್ಸಿಯಸ್‌ನಷ್ಟು ಇದೆ.

ಇವೆರೆಡೂ ಗ್ರಹಗಳಲ್ಲಿ ನೀರು ಇದ್ದು ಮತ್ತು ಜೀವಿ ವಿಕಾಸ ಉಂಟಾಗಿರುವ ಸಾಧ್ಯತೆ ಇದೆ, ಎಂಬುವುದು ವಿಜ್ಞಾನಿಗಳ ಅಭಿಪ್ರಾಯ. ಜೀವಿಗಳು ಅಥವಾ ಮಾನವ ವಾಸಯೋಗ್ಯ ವಾತಾವರಣ ಬಗ್ಗೆ ಯೋಚಿಸುತ್ತಿರುವ ಖಗೋಳಜ್ಞರಿಗೆ ಆಶಾದಾಯಕ ಅಂಶವೆಂದರೆ ಈ ಗ್ರಹಗಳಿಗಿರುವ ಚಂದ್ರರು. ಈ ಚಂದ್ರರ ಮೇಲೆ ವಾಸಯೋಗ್ಯವಾದ ಭೂಮಿ ಇದೆ ಎಂಬ ಆಶಾಭಾವನೆಯನ್ನು ಹೊಂದಿದ್ದಾರೆ. ಈ ಗ್ರಹಗಳ ಚಂದ್ರದಲ್ಲಿ ಸಾಗರ ಮತ್ತು ಮಳೆಯ ವಾತಾವರಣವಿದ್ದುದರಿಂದ ಮಾನವರಿಗೆ ವಸತಿಯೋಗ್ಯವೆಂದು ನಿರೀಕ್ಷಿಸಿದ್ದಾರೆ. ಈಗಾಗಲೇ ಇಂಥಹ ನಕ್ಷತ್ರಗಳನ್ನು ಮತ್ತು ಅಲ್ಲಿನ ಗ್ರಹಗಳ ಬೇಟಿಯಲ್ಲಿ ನಿರತವಾಗಿರುವ ಖಗೋಳ ಶಾಸ್ರಜ್ಞರಿಗೆ ಇದು ಹೊಸತಲ್ಲವಾದರೂ ಏನನ್ನೊ ನಿರೀಕ್ಷಿಸಿದಾರೆ. ಇನೂ ೬೦ ಗ್ರಹಗಳನ್ನು ಈ ತಂಡವು ವೀಕ್ಷಿಸತೊಡಗಿದೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...