Home / ಲೇಖನ / ವಿಜ್ಞಾನ / ಎರಡು ಹೊಸ ಭೂಗ್ರಹಗಳ ಶೋಧ

ಎರಡು ಹೊಸ ಭೂಗ್ರಹಗಳ ಶೋಧ

ಈಗಿರುವ ಗ್ರಹಗಳಲ್ಲಿ ಜೀವಸಂಕುಲದ ಅನ್ವೇಶಣೆ ಒಂದೆಡೆ ಸಾಗಿದರೆ ಇದರ ಜೊತೆಗೆ ಹೊಸ ಭೂಗ್ರಹಗಳ ಹುಡುಕಾಟವೂ ನಡೆಯುತ್ತಿದ್ದು ಎರಡು ಹೊಸ ಭೂಗ್ರಹಗಳನ್ನು ಸ್ವಿಡ್ಜರ್ ಲ್ಯಾಂಡಿನ ಜಿನಿವಾ ವೇದಶಾಲೆ, ಮತ್ತು ಅಮೇರಿಕನ್ ಖಗೋಳ ವೇದ ಶಾಲೆಗಳು ಕಂಡು ಹಿಡಿದಿವೆ.

ಈ ಎರಡು ಭೂಗ್ರಹಗಳು ನಮ್ಮಿಂದ ೩೫ ಜ್ಯೋತಿವರ್‍ಷಗಳ ಅಂತರದಲ್ಲಿವೆ, ಎಂದು ವಿಜ್ಞಾನಿಗಳು ಅಭಿಪ್ರಾಯ. ಇದರಂತೆ ೭೦ ವರ್ಜಿನಿಸ್, ಮತ್ತು “೪೭ ಉರ್ಸೆ ಮೆಜೋರಿಸ್” ಎಂದು ಹೆಸರಿಸಲಾಗಿದ್ದು ಒಂದು ಕನ್ಯಾರಾಶಿಯಲ್ಲಿಯೂ ಇನ್ನೊಂದು ಸಪ್ತರ್ಷಿ ಮಂಡಲದಲ್ಲಿಯೂ ಇವೆ, ಎಂದು ಖಚಿತಪಡಿಸಿಕೊಳ್ಳಲಾಗಿದೆ. ರೇಡಿಯೋ ತರಂಗಗಳ ಮೂಲಕ ನಾವು ಸಂದೇಶ ಕಳಿಸಿದರೆ ೩೫ ವರ್ಷಗಳು ಬೇಕು. ನಕ್ಷತ್ರವಾಗಿದ್ದು ಸೂರ್ಯನಂತೆ ಇವೆ. ಇದನ್ನು ಸುತ್ತುವ ವರ್ಜಿನಿಯಸ್ – ೭೦, ನಮ್ಮ ಗುರುಗ್ರಹದ ಗಾತ್ರಕ್ಕಿಂತ ೮ ಪಟ್ಟು ದೊಡ್ಡದಿದೆ. ಪ್ರತಿ ೧,೧೦೦ ದಿನಗಳಿಗೊಮ್ಮೆ ತನ್ನ ಸೂರ್ಯನನ್ನು ಪ್ರದಕ್ಷಣೆ ಇವು ಹಾಕುತ್ತಿವೆ. ಇದರ ತಾಪಮಾನ ೮೦ ಸೆಲ್ಸಿಯಸ್‌ನಷ್ಟು ಇದೆ.

ಇವೆರೆಡೂ ಗ್ರಹಗಳಲ್ಲಿ ನೀರು ಇದ್ದು ಮತ್ತು ಜೀವಿ ವಿಕಾಸ ಉಂಟಾಗಿರುವ ಸಾಧ್ಯತೆ ಇದೆ, ಎಂಬುವುದು ವಿಜ್ಞಾನಿಗಳ ಅಭಿಪ್ರಾಯ. ಜೀವಿಗಳು ಅಥವಾ ಮಾನವ ವಾಸಯೋಗ್ಯ ವಾತಾವರಣ ಬಗ್ಗೆ ಯೋಚಿಸುತ್ತಿರುವ ಖಗೋಳಜ್ಞರಿಗೆ ಆಶಾದಾಯಕ ಅಂಶವೆಂದರೆ ಈ ಗ್ರಹಗಳಿಗಿರುವ ಚಂದ್ರರು. ಈ ಚಂದ್ರರ ಮೇಲೆ ವಾಸಯೋಗ್ಯವಾದ ಭೂಮಿ ಇದೆ ಎಂಬ ಆಶಾಭಾವನೆಯನ್ನು ಹೊಂದಿದ್ದಾರೆ. ಈ ಗ್ರಹಗಳ ಚಂದ್ರದಲ್ಲಿ ಸಾಗರ ಮತ್ತು ಮಳೆಯ ವಾತಾವರಣವಿದ್ದುದರಿಂದ ಮಾನವರಿಗೆ ವಸತಿಯೋಗ್ಯವೆಂದು ನಿರೀಕ್ಷಿಸಿದ್ದಾರೆ. ಈಗಾಗಲೇ ಇಂಥಹ ನಕ್ಷತ್ರಗಳನ್ನು ಮತ್ತು ಅಲ್ಲಿನ ಗ್ರಹಗಳ ಬೇಟಿಯಲ್ಲಿ ನಿರತವಾಗಿರುವ ಖಗೋಳ ಶಾಸ್ರಜ್ಞರಿಗೆ ಇದು ಹೊಸತಲ್ಲವಾದರೂ ಏನನ್ನೊ ನಿರೀಕ್ಷಿಸಿದಾರೆ. ಇನೂ ೬೦ ಗ್ರಹಗಳನ್ನು ಈ ತಂಡವು ವೀಕ್ಷಿಸತೊಡಗಿದೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...