Home / ಲೇಖನ / ವಿಜ್ಞಾನ / ಗಾಳಿಯಲ್ಲಿಯ ವಿಷದಿಂದ ಜೀವರಾಶಿಗೆ ಆಪತ್ತು

ಗಾಳಿಯಲ್ಲಿಯ ವಿಷದಿಂದ ಜೀವರಾಶಿಗೆ ಆಪತ್ತು

ಶುದ್ಧವಾದ ಗಾಳಿ ಇದ್ದರೆ ಎಷ್ಟು ವರ್ಷಗಳಾದರೂ ಜೀವರಾಶಿಗಳು ಬದುಕಬಹುದು. ಅದೇ ವಿಷಯುಕ್ತವಾದ ಇಂಗಾಲದ ಡೈ‌ಆಕ್ಸೈಡ್ ಗಾಳಿಯು ಪಸರಿಸಿದರೆ ಇಂಥಹ ಗಾಳಿಯನ್ನು ಸೇವಿಸುವ ಜೀವಿಗಳು ಆತಂಕಕ್ಕೀಡಾಗುತ್ತವೆ. ಇನ್ನೊಂದು ವಿಶೇಷವೆಂದರೆ ಒಂದು ನೆಲೆಯಲ್ಲಿ ವಿಶಯುಕ್ತಗಾಳಿ ಇದ್ದರೆ ಅದು ಬೀಸುತ್ತ ಖಂಡಾಂತರಗೊಂಡು ಬೇರೆ ರಾಷ್ಟ್ರ, ರಾಜ್ಯದ ಜೀವರಾಶಿಗಳಿಗೂ ಆಪತ್ತು ತರಬಲ್ಲದು.

ಸಾಮಾನ್ಯವಾಗಿ ಉಷ್ಣವಲಯದ ನಾಡುಗಳಲ್ಲಿ ಭಾರತವು ಸೇರಿ ಬಳಸುವ ಭಾರಿ ಮಟ್ಟದ ಕೀಟನಾಶಕಗಳು ಗಾಳಿಯೊಡನೆ ಲೀನವಾಗಿ, ಗಾಳಿಯನ್ನು ವಿಷಗೊಳಿಸಿ ಉತ್ತರ ಧೃವ ಪ್ರದೇಶವನ್ನು ಸೇರಿ ನೀರಿನಲ್ಲಿ ಬೆರೆಯುತ್ತವೆ. ಇಂಥಹ ಪರಿಸರದಲ್ಲಿರುವ ಜೀವಿಗಳು ನೀರು, ಮತ್ತು ಗಾಳಿಯ ಸೇವನೆಯಿಂದ ವೇದನೆಯನ್ನು ಪಡಬೇಕಿದೆ. ಕೆನಡಾದ ಉತ್ತರ ಬದಿಯ ಯುಕೋನೀಯ ಲೇಬರ್ಸ್ ಸರೋವರದಲ್ಲಿ ಕೀಟನಾಶಕ ಮತ್ತು ವಿಷದ ಅಂಶ ಸೇರಿ ಕಳವಳಕಾರಿ ಮಟ್ಟವನ್ನು ತಲುಪಿದೆ, ಎಂದು ಇತ್ತೀಚೆಗೆ ಪತ್ತೆಮಾಡಲಾಗಿದೆ. ಈ ಪ್ರದೇಶದಲ್ಲಿ ಕೀಟನಾಶಕ ಅಂಶವನ್ನು ಹಾಕದಿದ್ದರೂ ಆಫ್ರಿಕಾ, ಭಾರತದಂತಹ ದೇಶಗಳ ಕಡೆಯಿಂದ ಉತ್ತರ ಧೃವದತ್ತ ಬೀಸಿದ ಗಾಳಿಯೊಂದಿಗೆ ಸೇರಿಕೊಂಡು ಇಲ್ಲಿ ತನ್ನ ಪರಿಣಾಮವನ್ನು ಬೀರುತ್ತಲಿದೆ.

ಕೆನಡಾದ ಸಂಶೋಧಕರು ಉತ್ತರ ಧೃವ ಪ್ರದೇಶದ ಕಡಲ ನೀರಿನ ಮೇಲ್ಮಟ್ಟದಲಿ ವಿಷಕೀಟನಾಶಕದಂತಹ ಅಂಶಗಳಿರುವುದನ್ನು ಕಂಡು ದಂಗಾಗಿದ್ದಾರೆ. ಈ ಸರೋವರ ಮತ್ತು ಧೃವ ದ ಸುತ್ತ ಮನುಷ್ಯನನ್ನೊಳಗೊಂಡು ೨೦೦ ರಷ್ಟು ಬೇರೆಬೇರೆ ಜೀವರಾಶಿಗಳಿವೆ. ಇಲ್ಲಿಯ ಜೀವರಾಶಿಗಳ ಆಹಾರ ಮೀನು ನೀರು ಮತ್ತು ಮೀನು ಆಹಾರದ ಮೂಲಕ ಈ ಕೀಟನಾಶಕದ ನಂಜು ಸುತ್ತಲ ಪ್ರದೇಶ ಮತ್ತು ಗಾಳಿಬೀಸಿದ ಪ್ರದೇಶಗಳೆಲ್ಲೆಡೆಯಲ್ಲಿ ವಿಷ ನೀಡಿ ಆರೋಗ್ಯವನ್ನು ಹದಗೆಡಿಸುತ್ತಿರುವುದಂತೂ ನಿಜ. ಕೀಟನಾಶಕಗಳಿಂದ ಸಸ್ಯಗಳಿಗೆ ಉಪಕಾರವಾಗಬಹುದೆಂದರೂ ಕೊನೆಗೊಂದು ದಿನ ಆ ಸಸ್ಯವು ಸೇರಿ ಜನ ಸಮುದಾಯಕ್ಕೆ ವಿಷ ಹರಡುತ್ತದೆಂಬುದಂತೂ ಸತ್ಯ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...