Home / ಲೇಖನ / ವಿಜ್ಞಾನ / ಶುದ್ಧ ರಕ್ತಕ್ಕೂ ಬರ ಬರಬಹುದೆ?

ಶುದ್ಧ ರಕ್ತಕ್ಕೂ ಬರ ಬರಬಹುದೆ?

ಜಾಗತಿಕ ಹತೋಟಿಗೆ ಯಾವುದೇ ವ್ಯಾಪಾರಿ ನಿರ್ಬಂಧಗಳಿಲ್ಲದಿರುವುದರಿಂದ ಕೀಟನಾಶಕಗಳು ಪರಸ್ಪರ ದೇಶ- ವಿದೇಶಗಳಿಗೆ ರಫ್ತಾಗುತ್ತಲೇ ಇರುತ್ತವೆ. ಇದರ ದುಷ್ಪರಿಣಾಮ ಮೊದಲಿಗೆ ಅಷ್ಟೇನೂ ಕಂಡು ಬಂದಿಲ್ಲವಾದರೂ ಈದೀಗ ವಿಶ್ವಸಂಸ್ಥೆಯ ಆರೋಗ್ಯ ಘಟಕವು ಈ ಕೀಟನಾಶಕಗಳಿಂದ ಜೀವರಾಶಿಗಳ ಮೇಲೆ ಆಗುವ ಅಪಾಯವನ್ನು ಮನಗಂಡಿದೆ. ಬಂಡವಾಳಶಾಹಿ ನಾಡುಗಳು ಕೀಟನಾಶಕ ನಂಜನ್ನು ಅಭಿವೃದ್ಧಿ ಶೀಲನಾಡುಗಳಿಗೆ ಅಗತ್ಯಕ್ಕಿಂತ ಹೆಚ್ಚಿಗೆ ಕಳಿಸುತ್ತಿರುವುದು ಅಪಾಯಕಾರಿಯಾಗಿದೆ. ಇದನ್ನು ವಿಶ್ವಸಂಸ್ಥೆಯ ಆರೋಗ್ಯ ಘಟಕ ತಡೆಯುವಲ್ಲಿ ವಿಫಲವಾಗಿದೆ.

ಅಮೇರಿಕಾ ದೇಶದಲ್ಲಿ D.D.T ಯ ಮೇಲೆ ನಿರ್ಬಂಧ ಇರುವುದರಿಂದ ಇಲ್ಲಿಯ ಜನ ನಂಜಿನ ಅಂಶದಿಂದ ಸ್ವಲ್ಪ ಮುಕ್ತರೆನ್ನಬಹುದು. ಭಾರತದ ಮುಂಬೈ ನಗರ ವಾಸಿಗಳ ರಕ್ತದಲಿ ಅತಿಹೆಚ್ಚು ಕೀಟನಾಶಕ ನಂಜು ಪತ್ತೆಯಾಗಿದೆ, ರಕ್ತವನ್ನು ಸೇರುವ P.E.B.ಕೀಟನಾಶಕ ನಂಜು, ಹುಟ್ಟುವ ಸಂತಾನದ ಮೇಲೂ ಪರಿಣಾಮ ಬೀರುತ್ತದೆಂಬುವುದು ಕಳವಳಕಾರಿ ಅಂಶವಾಗಿದೆ. ಈ ಬಗೆಗೆ ಸಾವಿರಾರು ದಂಪತಿಗಳನ್ನು ಅಧ್ಯಯನಕ್ಕೆ ಒಳಪಡಿಸಿದಾಗ ಗಂಡಸರು ತಮ್ಮ ವಿರ್ಯಾಣು ಶಕ್ತಿಯನ್ನು ಕುಂದಿಸಿಕೊಂಡಿರುವುದೂ ಹೆಂಗಸರಲ್ಲಿ ಗರ್ಭಪಾತ ಪ್ರಮಾಣ ಹೆಚ್ಚಿರುವುದೂ ಪತ್ತೆಯಾಗಿದೆ. ರಕ್ತಸೇರಿದ ಈ ಕೀಟನಾಶಕದ ಈ ನಂಜು ದೈಹಿಕ ಬೆಳವಣಿಗೆಗೆ, ಉಸಿರಾಟಕ್ಕೆ ದುಷ್ಪರಿಣಾಮ ಬೀರುತ್ತದೆ. ಕೀಟನಾಶಕ ಬಳಕೆಯ ನಾಡುಗಳ ಜನರನ್ನು ಪರೀಕ್ಷಿಸಿದಾಗ ಶೇ.೮೦ ರಷ್ಟು ನೇರವಾಗಿ ಈ ನಂಜಿನಿಂದ ಆರೋಗ್ಯವಂಚಿತರಾಗಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ D.D.T ಯ ನಂಜು ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಕಡಿಮೆಯಾದರೂ ಫ್ಲೋಲಿಕ್ಲೋರಿನೆಟೆಡ್ ಬೈಡೆನೆಲ್ಸ್‌ ನಂಜಿನ ಪ್ರಮಾಣ ಕಡಿಮೆಯಾಗಿಲ್ಲ. ಅಮೇರಿಕಾದಲ್ಲಿಯ ಸಂಶೋಧನೆಯಂತೆ ೧೯೮೫ ರ ಸಂದರ್ಭದಲ್ಲಿ ೨.೦ ಯಿಂದ ೧೯.೩ ಮಿಲಿ ಲೀಟರ್ D.D.T. ಅಂಶ ಜನರ ನೆತ್ತರು ಸೇರಿ ವಿವಿಧ ತೊಂದರೆಗಳಿಗೆ ಕಾರಣವಾಗಿದೆ. ಭಾರತದ ದೆಹಲಿ, ಅಹಮದಾಬಾದ್ ವಾಸಿಗಳಲ್ಲಿ ೩೭.೩ ಮಿ.ಲೀಟರ್ ಹಳ್ಳಿಗಾಡು ಜನರಲ್ಲಿ ೮.೬ ಮಿಲಿ ಲೀಟರ್ D.D.T. ಅಂಶ ರಕ್ತದಲ್ಲಿಸೇರಿಕೊಂಡಿದೆ. ಪಾಕಿಸ್ತಾನ, ಆಫ್ಘಾನಿಸ್ತಾನ, ಬಾಂಗ್ಲಾದೇಶಗಳಲ್ಲಿಯೂ ಸಹ ಮೇಲಿನ ಸ್ಥಿತಿಯೇ ಇದೆ. ಉಷ್ಣಪ್ರದೇಶದಲ್ಲಿನ ಕೀಟನಾಶಕ ನಂಜು ಬಿಸಿಗಾಳಿ ಈ ಪ್ರದೇಶಕ್ಕೆ ಸಹಜವಾಗಿ ದಾಳಿ ಮಾಡುತ್ತಿರುವುದೇ ಇಂದಿನ ಎತ್ತರ ಧೃವ ಪ್ರದೇಶದ ಆತಂಕಕ್ಕೆ ಕಾರಣವಾಗಿದೆ. ಉತ್ತರ ದೃವದ ನೀರಿನಲ್ಲಿ ಈಗಾಗಲೇ ೮,೪೦೦ ಟನ್‌ಗಳಷ್ಟು, B.H.E. ಕೀಟನಾಶಕ ನಂಜು ಸೇರಿದೆ. ಭಾರತ ಉತ್ತರ ಗಡಿಪ್ರದೇಶದಲ್ಲಿರುವ ಹಿಮಾಲಯವು ತಂಪು ಪ್ರದೇಶವಾದುದರಿಂದ ಹಿಮಾಲಯದ ತಪ್ಪಲು ಇಂದು ಕೀಟನಾಶಕ ರೋಗ ನಿರೋಧಕದ ನಂಜಿನಿಂದ ಬಸವಳಿದೆ. ಹೀಗೆ ಈ ಕೀಟನಾಶಕಗಳ ಹಾವಳಿಯಿಂದ ಮುಂದೊಂದು ದಿನ ಮನುಷ್ಯನ ರಕ್ತ ಮಲಿನಗೊಂಡು ಶುದ್ದವಾದ ರಕ್ತ ದೊರೆಯುವ ಸಂಭವವೇ ಇಲ್ಲದಾಗುತ್ತದೇನೋ?
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...