Home / ಲೇಖನ / ವಿಜ್ಞಾನ / ಸೂರ್ಯನ ಕಿರಣಗಳಿಂದ ಚಲಿಸುವ ಸ್ಕೂಟರ್

ಸೂರ್ಯನ ಕಿರಣಗಳಿಂದ ಚಲಿಸುವ ಸ್ಕೂಟರ್

ಬೀದಿ ಬೀದಿಯಲ್ಲಿ ವಾಹನಗಳ ಸಂಚಾರದಿಂದಾಗಿ ಮಲಿನ ಹೊಗೆಯಿಂದಾಗಿ ಮೂಗು ಮುಚ್ಚಿಕೊಂಡು ತಿರುಗುವ ಸ್ಥಿತಿ ನಿರ್ಮಾಣವಾಗಿದೆ. ಪರಿಸರಮಾಲಿನ್ಯದಿಂದಾಗಿ ಜನ ನಿಧಾನವಿಷದಿಂದ ತತ್ತರಿಸುತ್ತಿರುವುದು ಸರ್‍ವಸಾಮಾನ್ಯ. ಅದರಲ್ಲೂ ಪೆಟ್ರೋಲ್‌ ಬಳಸುವುದೆಂದರೆ ದುಬಾರಿ ಬೆಲೆ ಬೇರೆ. ಇಂಥದನ್ನೆಲ್ಲ ಹೋಗಲಾಡಿಸಲೆಂದು ವಿದ್ಯುತ್ ಚಾಲಿತ ತಂತ್ರಗಳನ್ನು ತಯಾರಿಸಿದರೆ ವಿದ್ಯುತ್‌ಗೂ ಬರ. ಪದೆಪದೆ ಕೈಕೊಡುವ ವಿದ್ಯುತ್‌ನಿಂದಾಗಿ ಈ ವಿದ್ಯುತ್‌ಚಾಲಿತ ಯಂತ್ರಗಳು ಯಶಸ್ವಿಯಾಗುತ್ತಿಲ್ಲ. ಆದರೀಗ ವಿದ್ಯುತ್ ಇಲ್ಲದ ದುಬಾರಿ ಬೆಲೆಯೂ ಇಲ್ಲದ ಕೇವಲ ಸೂರ್ಯನ ಕಿರಣದಿಂದಲೇ ಗಂಟೆಗೆ ೩೦ ಕಿ.ಮೀ. ವೇಗದಲ್ಲಿ ಚಲಿಸುವ ಸೌರಶಕ್ತಿಯ ಸ್ಕೂಟರ್‌ಗಳು ಮುಂದೆ ಭಾರತೀಯರಿಗೆ ವರದಾನವಾಗಲಿವೆ.

ಲಂಡನ್ನಿನ ಸೌತ್‌ಬ್ಯಾಂಕ್ ವಿಶ್ವವಿದ್ಯಾಲಯದ ಎಂಜಿನಿಯರಿಂಗ್ ವಿದ್ಯಾರ್ಥಿ ಪಾಲ್‌ಶಾಪಲ್ ಅವರು ಸೌರಶಕ್ತಿಯಿಂದ ಓಡುವ ಸ್ಕೂಟರನ್ನು ತಯಾರಿಸಿದ್ದಾರೆ. ಇಟಲಿಯ ‘ಪಿಯಾಜಿಯೊ’ ಕಂಪನಿಯ ಸಹಯೋಗದಿಂದ ಈ ಸ್ಕೂಟರ್ ತಯಾರಿಸಿರುವ ಶಾಪಲ್ ೧೯೯೬ ನೇ ಸಾಲಿನ “ಪ್ರುಡೆನ್ಸಿಯಲ್ ಬಿಸಿನೆಸ್ ಇನ್ ಪ್ರಾಕ್ಟೀಸ್” ಪ್ರಶಸ್ತಿಯನ್ನು ಸಹ ಗಳಿಸಿದ್ದಾರೆ. ಕೈಗಾರಿಕೆಗಳು ಹಾಗೂ ವಿನ್ಯಾಸಕಾರರ ಸಲಹಾ ಕೇಂದ್ರದಲ್ಲಿ ಉದ್ಯೋಗ ಬಯಸಿ ಬರುವ ಪಧವೀಧರರಾಗಿ ಲಂಡನ್ನಿನಲ್ಲಿ ಏರ್ಪಡಿಸಲಾಗಿದ್ದ ಎಂಜನಿಯರಿಂಗ್ ಪ್ರಾಡಕ್ಟ್-ಡಿಜೈನ್ ಶೋ ನಲ್ಲಿ ಈ ಸೌರಶಕ್ತಿಯ ಸ್ಕೂಟರನ್ನು ಪ್ರದರ್ಶನಕ್ಕಿಡಲಾಗಿತ್ತು.

ಇದಕ್ಕೂ ಮೊದಲು ಶಾಪಲ್ ಸೌರಶಕ್ತಿಯ ಕುಕ್ಕರ್ ಅನ್ನು ವಿನ್ಯಾಸಗೊಳಿಸಿದ್ದರು. ಸ್ಪೇನ್ ಕಂಪನಿಯೊಂದರಲ್ಲಿ ಒಂದು ವರ್ಷಗಳ ಕಾಲ ಈ ಸ್ಕೂಟರ್ ನಿರ್ಮಾಣದ ಕುರಿತು (ಯೋಜನೆ) ಪೂರ್ವಸಿದ್ಧತೆ ಮತ್ತು ಪೂರ್ವ ಕೆಲಸಗಳನ್ನು ಮಾಡುತ್ತಿದ್ದರು. ಸ್ಕೂಟರ್‌ನಲ್ಲಿ ೧೨ ವೊಲ್ಟೇಜ್ ಸಾಮರ್ಥ್ಯದ ಬ್ಯಾಟರಿಯನ್ನು ಅಳವಡಿಸಲಾಗಿದ್ದು ಸೂರ್ಯನ ಕಿರಣಗಳಿಂದ ಈ ಬ್ಯಾಟರಿಯ ಶಾಖವನ್ನು ಸಂಗ್ರಹಿಸಿ ಸ್ಕೂಟರ್ ಚಾಲು ಮಾಡಿದಾಗ ಬೇಕಿದ್ದಷ್ಟು ಬಿಡುಗಡೆ ಮಾಡುತ್ತ ಹೋಗುತ್ತದೆ ಮತ್ತು ಗಂಟೆಗೆ ೩೦ ಕಿ.ಮೀ. ವೇಗದಲ್ಲಿ ಚಲಿಸುತ್ತದೆ. ವಾಹನಗಳಿಂದ ಹೊರಬರುವ ಮಲೀನ ಹೊಗೆ ಪರಿಸರವನ್ನು ನಾಶಮಾಡುತ್ತಿರುವ ಈ ಸಂದರ್ಭದಲ್ಲಿ ಪರಿಸರವಾದಿಗಳಿಗೆ ಹಾಗೂ ಪೆಟ್ರೋಲ್ ಬೆಲೆ ಏರಿಕೆಯಿಂದ ತತ್ತರಿಸಿದ ಮಧ್ಯಮ ವರ್ಗದ ಜನಕ್ಕೆ ಇದೊಂದು ವಿಶೇಷವಾದ ಸಂತಸ ತರುವ ಸುದ್ದಿಯಾಗಿದೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...