Home / ಲೇಖನ / ವಿಜ್ಞಾನ / ಒಂಟಿ ಮಹಿಳೆಯರ ಭಯ ನಿವಾರಕ ಅಸ್ತ್ರ

ಒಂಟಿ ಮಹಿಳೆಯರ ಭಯ ನಿವಾರಕ ಅಸ್ತ್ರ

ಸಾಮಾನ್ಯವಾಗಿ ಹೊರಗಡೆ ಹೆಣ್ಣುಮಕ್ಕಳು ಸ್ವತಂತ್ರವಾಗಿ ತಿರುಗಾಡುವಾಗ ಪುಂಡಪೋಕರಿಗಳ ಭಯ, ಕಳ್ಳಕಾಕರಭಯ ಇದ್ದೇ ಇರುತ್ತದೆ. ಸ್ವತಂತ್ರ ದೇಶದಲ್ಲಿ ಅತಂತ್ರವಾದ ಈ ಅಬಲೆಯರ ಸ್ಥಿತಿಯನ್ನು ಕಂಡೇ ಅನೇಕ ಕಡೆ ಕರಾಟೆ, ಕುಂಗಫೂಗಳನ್ನು ಕಲಿಸಿ ಇವರಿಂದ ರಕ್ಷಿಸಿಕೊಳ್ಳುವ ವಿಧಾನಗಳನ್ನು ಕಂಡುಕೊಳ್ಳಲಾಯಿತು. ಒಂದಕ್ಕಿಂತಲೂ ಹೆಚ್ಚು ಅಪಾಯಕಾರಿ ಜನ ಒಂಟಿ ಮಹಿಳೆಯ ಮೇಲೆ ಆಕ್ರಮಣ ಮಾಡಿದಾಗ ತನ್ನನ್ನು ರಕ್ಷಿಸಿಕೊಳ್ಳಲು ಒಂದು ಹೊಸ ಅಸ್ತ್ರವನ್ನು ನಮ್ಮ ಬೆಂಗಳೂರಿನವರೇ ಆದ ರಾಣಾಸಿಂಗ್ ಎಂಬುವವರು ಕಂಡು ಹಿಡಿದರು. ತಮ್ಮ ‘ಆಕ್ಸ್‌ಗ್ಲೋಮ್ ’, ಸಂಸ್ಥೆಯಿಂದ ಇಂಥಹ ಅಸ್ತ್ರಗಳು ಈಗಾಗಲೇ ಅಸಂಖ್ಯವಾಗಿ ಸೃಷ್ಟಿಯಾಗುತ್ತವೆ. ಈಗಾಗಲೇ ಅಮೇರಿಕಾದಂತಹ ರಾಷ್ಟ್ರಗಳಲ್ಲಿ ಪ್ರತಿ ಪೋಲಿಸರ ಕೈಯಲ್ಲಿ ಕಳ್ಳರನ್ನು, ವಂಚಕರನ್ನು ಏಕಾಂಗಿಯಾಗಿ ಸದೆಬಡಿಯಲು ಇಂಥಹ ಅಸ್ತ್ರಗಳಿರುತ್ತವೆ. ಇದು ಸೊಂಟಕ್ಕೆ ಸಿಕ್ಕಿಸಿಕೊಳ್ಳಬಹುದಾದಷ್ಟು ಸಣ್ಣದಾದ ಡಬ್ಬಿ, ಕೈಯಲ್ಲಿ ಸುಲಭವಾಗಿ ಹಿಡಿದುಕೊಳ್ಳಬಹುದಾದ ಅಸ್ತ್ರ ಇದಾಗಿದೆ. ಇದನ್ನು ಬಳೆಸಲು ಕಾನೂನು ಸಮ್ಮತಿಯನ್ನು ಕೂಡ ಪಡೆಯಲಾಗಿದೆ. ಹೆಚ್ಚಾಗಿ ಒಂಟಿ ಮಹಿಳೆಯರು, ಕಾಲೇಜು ಹುಡುಗಿಯರಿಗಾಗಿ ಇದನ್ನು ರೂಪಿಸಲಾಗಿದೆ. ಇಂಥಹ ವೈಶಿಷ್ಟ್ಯ ಪೂರ್ಣವಾದ ಅಸ್ತ್ರದ ಹೆಸರು ‘ಕೊಬ್ರಾ’ ಹಾಗಾದರೆ ಈ ಕೊಬ್ರಾದಲ್ಲಿ ಏನಿದೆ? ಇದೊಂದು ಸಣ್ಣಡಬ್ಬಿಯಾಗಿದ್ದು ಖಾರದಪುಡಿಯನ್ನು ಎರಚುವ (ಸ್ಪ್ರೇ ಮಾಡುವ) ಅಸ್ತ್ರ.

ಖಾರದ ಮೆಣಸಿನ ಕಾಯಿಗಾಗಿ ಪ್ರಸಿದ್ಧಿಯಾದ ಆಂಧ್ರಪ್ರದೇಶದಿಂದ ತರಿಸಿದ ಖಾರದಪುಡಿಯನ್ನು ಈ ಉಪಕರಣದಲ್ಲಿ ತುಂಬಲಾಗುತ್ತದೆ. ಅತಿ ಖಾರಕ್ಕೆ ಕಾರಣವಾಗಿರುವ ‘ಓಲಿಯಾರೆಸಿನ್ ಕ್ಯಾಪ್ಲಿಯನಿನ್’, ಎಂಬ ಸಾರವನ್ನು ಇದರಲ್ಲಿ ಸೇರಿಸಲಾಗಿದೆ. ಇಂಥಹ ಸಣ್ಣ ಹಿಡಿದುಕೊಳ್ಳಲು ಅನುವು ಇರುವ ಈ ಸಣ್ಣ ಡಬ್ಬಿಯನ್ನು ಸೊಂಟಕ್ಕೆ ಕಾಣದಂತೆ ಕಟ್ಟಿಕೊಳ್ಳಬಹುದು. ದುಷ್ಟರು ದಾಳಿ ನಡೆಸಿದಾಗ ಅವರ ಮೇಲೆ ಒಂದೇ ಒಂದು ಸಲ ಸ್ಪ್ರೇ ಮಾಡಿದರೆ ಸಾಕು ಆ ದುಷ್ಟರ ಕಣ್ಣುಗಳಲ್ಲಿ ವಿಪರೀತ ಉರಿವುಂಟಾಗುತ್ತದೆ. ಮೂಗು ಮುಖ ಕೂಡ ನೋವಿಗೊಳಗಾಗುತ್ತದೆ. ಆತ ತಕ್ಷಣ ಕುರುಡನಾಗುತ್ತಾನೆ. (ತಾತ್ಕಾಲಿಕವಾಗಿ) ಈ ಉರಿತ ಕನಿಷ್ಟ ಎರಡು ಗಂಟೆಗಳ ಕಾಲ ಈ ಪರಿಣಾಮ ಇರುತ್ತದೆ. ಆಗ ಆ ವ್ಯಕ್ತಿ ನಿಂತನೆಲದಲ್ಲಿಯೆ ಕುಸಿದು ಬೀಳುತ್ತಾನೆ. ಹೇಗಿದೆ ನೋಡಿದಿರಾ ಒಂಟಿ ಮಹಿಳೆಯರ ರಕ್ಷಣೆಯ ಅಸ್ತ್ರ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...