Home / ಲೇಖನ / ವಿಜ್ಞಾನ / ಸಕ್ಕರೆ ಕಾಯಿಲೆಗೆ ಸಿದ್ದೌಷಧಿ

ಸಕ್ಕರೆ ಕಾಯಿಲೆಗೆ ಸಿದ್ದೌಷಧಿ

ನಾವು ದಿನನಿತ್ಯದಲ್ಲಿ ಸಕ್ಕರೆ ಕಾಯಿಲೆ ಉಳ್ಳವರ ಸ್ಥಿತಿಯನ್ನು ನೋಡಿ ‘ಅಯ್ಯೋಪಾಪ’ ಎನ್ನುತ್ತೇವೆ. ಹೋಳಿಗೆ ತಿನ್ನುವಂತಿಲ್ಲ. ಸಿಹಿಪದಾರ್ಥಗಳನ್ನು ತಿನ್ನುವಂತಿಲ್ಲ. ಸಕ್ಕರೆರಹಿತ ಟೀ ಕಾಫಿಯನ್ನು ಗುಟುಕರಿಸುತ್ತ ಸಿಹಿಯನ್ನೇ ಉಪಯೋಗಿಸದ ಜನರಿದ್ದಾರೆ. ಮುಂದೊಂದು ದಿನ ಸಕ್ಕರೆ ಕಾಯಿಲೆ ಬರಬಾರದೆಂಬ ಭೀತಿಯಿಂದ ಮೊದಲೆ ಸಿಹಿಯನ್ನು ವರ್ಜಿಸುವರೂ ಇದ್ದಾರೆ. ಇದೊಂದು ತರಹ ನಿಸಾರ ಜೀವನ. ಈ ಕಾಯಿಲೆಗೆ ಕಹಿಯಾದ ಹಾಗಲಕಾಯಿ ಪಲ್ಯ, ಗೊಜ್ಜನ್ನೂ ಪ್ರತಿದಿನ ಬಳೆಸಿದರೆ ಈ ಕಾಯಿಲೆಗುಣ ಮುಖವಾಗುವುದೆಂದು ಕ್ರಿ.ಶ. ೬೫೦ ರಲ್ಲಿಯೇ ಪುರಾತನ ವೈದ್ಯ ಶುಶ್ರೂತ ಹೇಳಿದ್ದರು. ಆದರೆ ವರ್ಷಕ್ಕೆ ಒಂದೋ ಎರಡೋ ಬಾರಿ ಹಾಗಲ ಕಾಯಿಯನ್ನು ಉಪಯೋಗಿಸುವುದೇ ದುಸ್ತರ. ಕಹಿ ಕಹಿ. ವರ್ಷವಿಡೀ ದಿನದ ಪ್ರತಿ ಊಟ, ತಿಂಡಿಯಲ್ಲಿ ಹಾಗಲಕಾಯಿಯನ್ನು ಬಳೆಸಲು ಸುತಾರಾಂ ಸಾಧ್ಯವಿಲ್ಲ.

ಯುರೋಪಿನ ಸೊಜಿವಿಟ್ S.L..ಕಂಪನಿಯ ಆಹಾರ ತಜ್ಞರು ಹಾಗಲಕಾಯಿಯಲ್ಲಿ ಯಾವ ಔಷಧಿಗಳು ರಕ್ತದಲ್ಲಿನ ಮಿತಿಮೀರಿದ ಗ್ಲುಕೋಸ್ ಮಟ್ಟವನ್ನು ನಿಯಂತ್ರಿಸುತ್ತದೆ ಎಂಬ ಬಗ್ಗೆ ತೀವ್ರ ಸಂಶೋಧನೆ ನಡೆಯಿಸಿ ಕಡೆಗೆ “ಪಾಲಿಪೆಪ್ಟೈಡ್ಸ್”ಗಳನ್ನು ಪೌಡರ್ ಮಾಡಿ ಕಾಪ್ಯೂಲ್ಸ್ (ಗುಳಿಗೆಗಳು) ಗಳನ್ನು ಹೊರತಂದರು. ಇಂಥಹ ಗುಳಿಗೆಗಳನ್ನು ಮಧುಮೇಹಿಗಳು ಯಾವ ಕಹಿ ಇಲ್ಲದೇ ಮುಖ ಕಿವಿಚಿಕೊಳ್ಳದೇ ಈ ಮಾತ್ರೆಗಳನ್ನು ನುಂಗಿ ಕಾಯಿಲೆಯನ್ನು ಗುಣಪಡಿಸಿಕೊಳ್ಳಬಹುದು. ಈ ಮಾತ್ರೆಗಳಲ್ಲಿ ಹಾಗಲಕಾಯಿ ಜೀವಸತ್ವ ಅಂತರ್ಗತವಾಗಿರುತ್ತದೆ. ಈ ಔಷಧಿಯ ಅಂಶಗಳು ನಮ್ಮ ದೇಹದಲ್ಲಿ Insulin ಉತ್ಪತ್ತಿ ಹೆಚ್ಚಿಸುವುದಲ್ಲದೇ ದೇಹದ ಪ್ರತಿಯೊಂದು ಜೀವಕೋಶಗಳಲ್ಲಿ ಗ್ಲೂಕೋಸ್ Metabolisms ಕ್ರಿಯೆಯನ್ನು ಹೆಚ್ಚಿಸುತ್ತವೆ. ಇನ್ನೊಂದು ಔಷಧಿ ಎಂದರೆ “ಮಧುನಾಶಿನಿ” ಎಲೆಯಲ್ಲಿನ ಔಷಧೀಯ ಅಂಶ. ನಾಲಿಗೆ ಹಾಗೂ ಕರುಳಗಳ ಗ್ಲೂಕೋಸ್ Receptor ಗಳನ್ನೂ ತಡೆ ಹಿಡಿದು ತದನಂತರ ಆಹಾರದಲ್ಲಿನ ಗ್ಲೂಕೋಸನ್ನು ದೇಹಕ್ಕೆ ಸೇರದಂತೆ ಮಾಡಿ ರಕ್ತದ ಗ್ಲೂಕೊಸ್ ಮಟ್ಟವು ನಿಯಂತ್ರಿಸುವುದು. ಈ ಔಷಧಿಯೂ ಕೂಡ ಕ್ಯಾಪ್ಸೂಲ್‌ರೂಪದಲ್ಲಿ Sweet A way ಹೆಸರಿನಲ್ಲಿ ದೊರೆಯುತ್ತದೆ.

ಮೇಲಿನ ಎರಡು ತರದ ಮಾತ್ರೆಗಳು ಭಾರತದಲ್ಲಿ ಸಿಗುತ್ತದೆ. ಸಕ್ಕರೆ ಕಾಯಿಲೆಯನ್ನು ಆರಂಭದಲ್ಲಿಯೇ ಮುಂದೂಡಲು, ನಿಯಂತ್ರಿಸಲು ಒಳ್ಳೆಯ ಅವಕಾಶಕ್ಕಾಗಿ ಈ ಮಾತ್ರೆಗಳನ್ನು ಬಳಸಿದರೆ ದಿವ್ಯೌಷಧವಾಗಿ ಕಾಯಿಲೆ ಗುಣವಾಗುತ್ತದೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...