Home / ಲೇಖನ / ವಿಜ್ಞಾನ / ಸಕ್ಕರೆ ಕಾಯಿಲೆಗೆ ಸಿದ್ದೌಷಧಿ

ಸಕ್ಕರೆ ಕಾಯಿಲೆಗೆ ಸಿದ್ದೌಷಧಿ

ನಾವು ದಿನನಿತ್ಯದಲ್ಲಿ ಸಕ್ಕರೆ ಕಾಯಿಲೆ ಉಳ್ಳವರ ಸ್ಥಿತಿಯನ್ನು ನೋಡಿ ‘ಅಯ್ಯೋಪಾಪ’ ಎನ್ನುತ್ತೇವೆ. ಹೋಳಿಗೆ ತಿನ್ನುವಂತಿಲ್ಲ. ಸಿಹಿಪದಾರ್ಥಗಳನ್ನು ತಿನ್ನುವಂತಿಲ್ಲ. ಸಕ್ಕರೆರಹಿತ ಟೀ ಕಾಫಿಯನ್ನು ಗುಟುಕರಿಸುತ್ತ ಸಿಹಿಯನ್ನೇ ಉಪಯೋಗಿಸದ ಜನರಿದ್ದಾರೆ. ಮುಂದೊಂದು ದಿನ ಸಕ್ಕರೆ ಕಾಯಿಲೆ ಬರಬಾರದೆಂಬ ಭೀತಿಯಿಂದ ಮೊದಲೆ ಸಿಹಿಯನ್ನು ವರ್ಜಿಸುವರೂ ಇದ್ದಾರೆ. ಇದೊಂದು ತರಹ ನಿಸಾರ ಜೀವನ. ಈ ಕಾಯಿಲೆಗೆ ಕಹಿಯಾದ ಹಾಗಲಕಾಯಿ ಪಲ್ಯ, ಗೊಜ್ಜನ್ನೂ ಪ್ರತಿದಿನ ಬಳೆಸಿದರೆ ಈ ಕಾಯಿಲೆಗುಣ ಮುಖವಾಗುವುದೆಂದು ಕ್ರಿ.ಶ. ೬೫೦ ರಲ್ಲಿಯೇ ಪುರಾತನ ವೈದ್ಯ ಶುಶ್ರೂತ ಹೇಳಿದ್ದರು. ಆದರೆ ವರ್ಷಕ್ಕೆ ಒಂದೋ ಎರಡೋ ಬಾರಿ ಹಾಗಲ ಕಾಯಿಯನ್ನು ಉಪಯೋಗಿಸುವುದೇ ದುಸ್ತರ. ಕಹಿ ಕಹಿ. ವರ್ಷವಿಡೀ ದಿನದ ಪ್ರತಿ ಊಟ, ತಿಂಡಿಯಲ್ಲಿ ಹಾಗಲಕಾಯಿಯನ್ನು ಬಳೆಸಲು ಸುತಾರಾಂ ಸಾಧ್ಯವಿಲ್ಲ.

ಯುರೋಪಿನ ಸೊಜಿವಿಟ್ S.L..ಕಂಪನಿಯ ಆಹಾರ ತಜ್ಞರು ಹಾಗಲಕಾಯಿಯಲ್ಲಿ ಯಾವ ಔಷಧಿಗಳು ರಕ್ತದಲ್ಲಿನ ಮಿತಿಮೀರಿದ ಗ್ಲುಕೋಸ್ ಮಟ್ಟವನ್ನು ನಿಯಂತ್ರಿಸುತ್ತದೆ ಎಂಬ ಬಗ್ಗೆ ತೀವ್ರ ಸಂಶೋಧನೆ ನಡೆಯಿಸಿ ಕಡೆಗೆ “ಪಾಲಿಪೆಪ್ಟೈಡ್ಸ್”ಗಳನ್ನು ಪೌಡರ್ ಮಾಡಿ ಕಾಪ್ಯೂಲ್ಸ್ (ಗುಳಿಗೆಗಳು) ಗಳನ್ನು ಹೊರತಂದರು. ಇಂಥಹ ಗುಳಿಗೆಗಳನ್ನು ಮಧುಮೇಹಿಗಳು ಯಾವ ಕಹಿ ಇಲ್ಲದೇ ಮುಖ ಕಿವಿಚಿಕೊಳ್ಳದೇ ಈ ಮಾತ್ರೆಗಳನ್ನು ನುಂಗಿ ಕಾಯಿಲೆಯನ್ನು ಗುಣಪಡಿಸಿಕೊಳ್ಳಬಹುದು. ಈ ಮಾತ್ರೆಗಳಲ್ಲಿ ಹಾಗಲಕಾಯಿ ಜೀವಸತ್ವ ಅಂತರ್ಗತವಾಗಿರುತ್ತದೆ. ಈ ಔಷಧಿಯ ಅಂಶಗಳು ನಮ್ಮ ದೇಹದಲ್ಲಿ Insulin ಉತ್ಪತ್ತಿ ಹೆಚ್ಚಿಸುವುದಲ್ಲದೇ ದೇಹದ ಪ್ರತಿಯೊಂದು ಜೀವಕೋಶಗಳಲ್ಲಿ ಗ್ಲೂಕೋಸ್ Metabolisms ಕ್ರಿಯೆಯನ್ನು ಹೆಚ್ಚಿಸುತ್ತವೆ. ಇನ್ನೊಂದು ಔಷಧಿ ಎಂದರೆ “ಮಧುನಾಶಿನಿ” ಎಲೆಯಲ್ಲಿನ ಔಷಧೀಯ ಅಂಶ. ನಾಲಿಗೆ ಹಾಗೂ ಕರುಳಗಳ ಗ್ಲೂಕೋಸ್ Receptor ಗಳನ್ನೂ ತಡೆ ಹಿಡಿದು ತದನಂತರ ಆಹಾರದಲ್ಲಿನ ಗ್ಲೂಕೋಸನ್ನು ದೇಹಕ್ಕೆ ಸೇರದಂತೆ ಮಾಡಿ ರಕ್ತದ ಗ್ಲೂಕೊಸ್ ಮಟ್ಟವು ನಿಯಂತ್ರಿಸುವುದು. ಈ ಔಷಧಿಯೂ ಕೂಡ ಕ್ಯಾಪ್ಸೂಲ್‌ರೂಪದಲ್ಲಿ Sweet A way ಹೆಸರಿನಲ್ಲಿ ದೊರೆಯುತ್ತದೆ.

ಮೇಲಿನ ಎರಡು ತರದ ಮಾತ್ರೆಗಳು ಭಾರತದಲ್ಲಿ ಸಿಗುತ್ತದೆ. ಸಕ್ಕರೆ ಕಾಯಿಲೆಯನ್ನು ಆರಂಭದಲ್ಲಿಯೇ ಮುಂದೂಡಲು, ನಿಯಂತ್ರಿಸಲು ಒಳ್ಳೆಯ ಅವಕಾಶಕ್ಕಾಗಿ ಈ ಮಾತ್ರೆಗಳನ್ನು ಬಳಸಿದರೆ ದಿವ್ಯೌಷಧವಾಗಿ ಕಾಯಿಲೆ ಗುಣವಾಗುತ್ತದೆ.
*****

Tagged:

Leave a Reply

Your email address will not be published. Required fields are marked *

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...