Home / ಲೇಖನ / ವಿಜ್ಞಾನ / ಸಕ್ಕರೆ ಕಾಯಿಲೆಗೆ ಸಿದ್ದೌಷಧಿ

ಸಕ್ಕರೆ ಕಾಯಿಲೆಗೆ ಸಿದ್ದೌಷಧಿ

ನಾವು ದಿನನಿತ್ಯದಲ್ಲಿ ಸಕ್ಕರೆ ಕಾಯಿಲೆ ಉಳ್ಳವರ ಸ್ಥಿತಿಯನ್ನು ನೋಡಿ ‘ಅಯ್ಯೋಪಾಪ’ ಎನ್ನುತ್ತೇವೆ. ಹೋಳಿಗೆ ತಿನ್ನುವಂತಿಲ್ಲ. ಸಿಹಿಪದಾರ್ಥಗಳನ್ನು ತಿನ್ನುವಂತಿಲ್ಲ. ಸಕ್ಕರೆರಹಿತ ಟೀ ಕಾಫಿಯನ್ನು ಗುಟುಕರಿಸುತ್ತ ಸಿಹಿಯನ್ನೇ ಉಪಯೋಗಿಸದ ಜನರಿದ್ದಾರೆ. ಮುಂದೊಂದು ದಿನ ಸಕ್ಕರೆ ಕಾಯಿಲೆ ಬರಬಾರದೆಂಬ ಭೀತಿಯಿಂದ ಮೊದಲೆ ಸಿಹಿಯನ್ನು ವರ್ಜಿಸುವರೂ ಇದ್ದಾರೆ. ಇದೊಂದು ತರಹ ನಿಸಾರ ಜೀವನ. ಈ ಕಾಯಿಲೆಗೆ ಕಹಿಯಾದ ಹಾಗಲಕಾಯಿ ಪಲ್ಯ, ಗೊಜ್ಜನ್ನೂ ಪ್ರತಿದಿನ ಬಳೆಸಿದರೆ ಈ ಕಾಯಿಲೆಗುಣ ಮುಖವಾಗುವುದೆಂದು ಕ್ರಿ.ಶ. ೬೫೦ ರಲ್ಲಿಯೇ ಪುರಾತನ ವೈದ್ಯ ಶುಶ್ರೂತ ಹೇಳಿದ್ದರು. ಆದರೆ ವರ್ಷಕ್ಕೆ ಒಂದೋ ಎರಡೋ ಬಾರಿ ಹಾಗಲ ಕಾಯಿಯನ್ನು ಉಪಯೋಗಿಸುವುದೇ ದುಸ್ತರ. ಕಹಿ ಕಹಿ. ವರ್ಷವಿಡೀ ದಿನದ ಪ್ರತಿ ಊಟ, ತಿಂಡಿಯಲ್ಲಿ ಹಾಗಲಕಾಯಿಯನ್ನು ಬಳೆಸಲು ಸುತಾರಾಂ ಸಾಧ್ಯವಿಲ್ಲ.

ಯುರೋಪಿನ ಸೊಜಿವಿಟ್ S.L..ಕಂಪನಿಯ ಆಹಾರ ತಜ್ಞರು ಹಾಗಲಕಾಯಿಯಲ್ಲಿ ಯಾವ ಔಷಧಿಗಳು ರಕ್ತದಲ್ಲಿನ ಮಿತಿಮೀರಿದ ಗ್ಲುಕೋಸ್ ಮಟ್ಟವನ್ನು ನಿಯಂತ್ರಿಸುತ್ತದೆ ಎಂಬ ಬಗ್ಗೆ ತೀವ್ರ ಸಂಶೋಧನೆ ನಡೆಯಿಸಿ ಕಡೆಗೆ “ಪಾಲಿಪೆಪ್ಟೈಡ್ಸ್”ಗಳನ್ನು ಪೌಡರ್ ಮಾಡಿ ಕಾಪ್ಯೂಲ್ಸ್ (ಗುಳಿಗೆಗಳು) ಗಳನ್ನು ಹೊರತಂದರು. ಇಂಥಹ ಗುಳಿಗೆಗಳನ್ನು ಮಧುಮೇಹಿಗಳು ಯಾವ ಕಹಿ ಇಲ್ಲದೇ ಮುಖ ಕಿವಿಚಿಕೊಳ್ಳದೇ ಈ ಮಾತ್ರೆಗಳನ್ನು ನುಂಗಿ ಕಾಯಿಲೆಯನ್ನು ಗುಣಪಡಿಸಿಕೊಳ್ಳಬಹುದು. ಈ ಮಾತ್ರೆಗಳಲ್ಲಿ ಹಾಗಲಕಾಯಿ ಜೀವಸತ್ವ ಅಂತರ್ಗತವಾಗಿರುತ್ತದೆ. ಈ ಔಷಧಿಯ ಅಂಶಗಳು ನಮ್ಮ ದೇಹದಲ್ಲಿ Insulin ಉತ್ಪತ್ತಿ ಹೆಚ್ಚಿಸುವುದಲ್ಲದೇ ದೇಹದ ಪ್ರತಿಯೊಂದು ಜೀವಕೋಶಗಳಲ್ಲಿ ಗ್ಲೂಕೋಸ್ Metabolisms ಕ್ರಿಯೆಯನ್ನು ಹೆಚ್ಚಿಸುತ್ತವೆ. ಇನ್ನೊಂದು ಔಷಧಿ ಎಂದರೆ “ಮಧುನಾಶಿನಿ” ಎಲೆಯಲ್ಲಿನ ಔಷಧೀಯ ಅಂಶ. ನಾಲಿಗೆ ಹಾಗೂ ಕರುಳಗಳ ಗ್ಲೂಕೋಸ್ Receptor ಗಳನ್ನೂ ತಡೆ ಹಿಡಿದು ತದನಂತರ ಆಹಾರದಲ್ಲಿನ ಗ್ಲೂಕೋಸನ್ನು ದೇಹಕ್ಕೆ ಸೇರದಂತೆ ಮಾಡಿ ರಕ್ತದ ಗ್ಲೂಕೊಸ್ ಮಟ್ಟವು ನಿಯಂತ್ರಿಸುವುದು. ಈ ಔಷಧಿಯೂ ಕೂಡ ಕ್ಯಾಪ್ಸೂಲ್‌ರೂಪದಲ್ಲಿ Sweet A way ಹೆಸರಿನಲ್ಲಿ ದೊರೆಯುತ್ತದೆ.

ಮೇಲಿನ ಎರಡು ತರದ ಮಾತ್ರೆಗಳು ಭಾರತದಲ್ಲಿ ಸಿಗುತ್ತದೆ. ಸಕ್ಕರೆ ಕಾಯಿಲೆಯನ್ನು ಆರಂಭದಲ್ಲಿಯೇ ಮುಂದೂಡಲು, ನಿಯಂತ್ರಿಸಲು ಒಳ್ಳೆಯ ಅವಕಾಶಕ್ಕಾಗಿ ಈ ಮಾತ್ರೆಗಳನ್ನು ಬಳಸಿದರೆ ದಿವ್ಯೌಷಧವಾಗಿ ಕಾಯಿಲೆ ಗುಣವಾಗುತ್ತದೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...