Home / ಲೇಖನ / ವಿಜ್ಞಾನ / ಮರೆವಿನ ರೋಗಕ್ಕೆ ಒಂದು ದೇಶಿ ಔಷಧಿ

ಮರೆವಿನ ರೋಗಕ್ಕೆ ಒಂದು ದೇಶಿ ಔಷಧಿ

ಬೆಳಿಗ್ಗೆಲ್ಲಾ ರಾಮಾಯಣ ಕೇಳಿ ‘ಸೀತೆಗೂ ರಾವಣನಿಗೂ’, ಏನು ಸಂಬಂಧ ಎಂಬ ಪ್ರಶ್ನೆಗೆ ಮಾವ, ಸೊಸೆ ಎಂಬ ಉತ್ತರ ಕೊಟ್ಟನಂತೆ ಅಂದರೆ ರಾಮಾಯಣದ ಪಾತ್ರಗಳ ಸಂಬಂಧವನ್ನೇ ಮರೆತು ಬಿಡುವ ಪ್ರಸಂಗವು ಬಹಳ ಜನಕ್ಕೆ ಇದೆ. ಇದೀಗ ಇಟ್ಟ ವಸ್ತು ಎಲ್ಲಿ ಅಂತ ಗೂತ್ತಾಗಿಲ್ಲ, ಎಂಬ ಮರವು. ಇಡೀ ರಾತ್ರಿ ಓದಿದ ವಿದ್ಯಾರ್ಥಿ ಬೆಳಗಿನ ಪರೀಕ್ಷೆಗೆ ಮರೆತು ಹೋಗಿ ಉತ್ತರಿಸಲಾರದೆ ಹಿಂದಿರುಗುತ್ತಾನೆ. ಇದಕ್ಕೆ ಕಾರಣ ಮರೆವು. ಇಂಥವರಿಗೆ ಮರೆವಿನ ಮಹಾಪುರುಷರೆಂದು ಕರೆಯುತ್ತಾರೆ. ಈ ಮರೆವು ಪ್ರತಿಯೊಬ್ಬರಲ್ಲೂ ಚರಿತ್ರೆ ಕಾಲದಿಂದಲೂ ಅಂಟು ರೋಗದಂತೆ ಬಂದಿದೆ, ಇದರಿಂದಾಗಿ ಏನೆಲ್ಲ ಅನಾಹುತಗಳಾದ ನಿದರ್ಶಗಳು ನಮ್ಮ ಮುಂದಿವೆ.

ಇಂಥಹ ಮರೆವಿಗೆ ದೇಶಿ ಔಷಧಿಯ ಮದ್ದನ್ನು ಇದೀಗ ಕಂಡು ಹಿಡಿಯಲಾಗಿದೆ. ಕೆಲವು ವರ್ಷಗಳಿಂದ ರಾಜ್ಯದಲ್ಲಿ ಆರಂಭಗೊಂಡ ಪ್ರಕೃತಿ ಆಯುರ್ವೇದಿಕ್ ಮತ್ತು ಆರ್ಗಾನಿಕ್ ಪೌಂಡೇಶನ್ ಸಂಸ್ಥೆಯು ಬಿಳಿಗಿರಿ ರಂಗನ ಬೆಟ್ಟದ ಡಾ|| ಸುದರ್ಶನ ಅವರ ಸಂಸ್ಥೆಯ ಪ್ರಕೃತಿಯಾಧಾರಿತ ಗಿಡಮೂಲಿಕೆ ಉತ್ಪನ್ನಗಳನ್ನು ಜನತೆಗೆ ತಲುಪಿಸುತ್ತಿದೆ. ತಜ್ಞವೈದ್ಯರುಗಳಿಂದ ಆಯುರ್‍ವೇದಿಕ್ ಚಿಕಿತ್ಸಾ ವ್ಯವಸ್ಥೆ ಗಿಡಮೂಲಿಕೆಗಳ ಬಗೆಗೆ ಜಾಗೃತಿ ಮೂಡಿಸಲಾಗುತ್ತದೆ. ಇದೀಗ ಈ ಸಂಸ್ಥೆಯು ಮರೆವಿನ ಸಮಸ್ಯೆಯಿಂದ ಬಳಲುತ್ತಿರವವರಿಗೆ ‘ಮೆಮೊಲಿಕ್ಸ್’ ಎಂಬ ಸಂಪೂರ್ಣ ಗಿಡಮೂಲಿಕಾ ಆಹಾರವನ್ನು ಬಿಡುಗಡೆ ಮಾಡಿದೆ. ಬ್ರಾಹ್ಮಿ, ಶಂಖಪುಷ್ಪಿಯಂತಹ ಉತ್ತಮ ಗಿಡಮೂಲಿಕೆಗಳನ್ನು ಹಲವಾರು ಔಷಧಿಯುಕ್ತ ಮೂಲಿಕೆಗಳ ಮಿಶ್ರಣದಿಂದ ಇದನ್ನು ತಯಾರಿಸಿದೆ. ‘ಮೆಮೊಲಿಕ್ಸ್’ ವಿಶೇಷವಾಗಿ ನೆನಪಿನ ಶಕ್ತಿಯ ಕೊರತೆಯಿಂದ ಬಳಲುತ್ತಿರುವವರಿಗೆ ವರದಾನದಾಗಿದೆ. ಮುಂಬರುವ ಪರೀಕ್ಷೆಗಳನ್ನು ಎದುರಿಸಲು ಮರೆವಿನ ಒತ್ತಡದಿಂದ ಬಳಲುತ್ತಿರುವ ವಿದ್ಯಾರ್ಥಿಗಳಿಗೆ ವಿಶೇಷ ಕೊಡುಗೆಯಾಗಿದೆ. ಯಾವುದೇ ದುಷ್ಪರಿಣಾಮವಿಲ್ಲದ ಈ ಉತ್ಪನ್ನ ಸ್ಮರಣಶಕ್ತಿ ಅಭಿವೃದ್ದಿಯೊಂದಿಗೆ ಅವಶ್ಯಕ ದೇಹ ಪೋಷಕಾಂಶಗಳನ್ನು ಹೂಂದಿದೆ ಮತ್ತು ಇದು ಸ್ವದೇಶಿ ಔಷಧಿಯಾಗಿದೆ.
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...