Home / ಲೇಖನ / ವಿಜ್ಞಾನ / ರಕ್ತವನ್ನು ಶುದ್ಧಿಕರಿಸುವ ಡೈಯಾಲೈಸರ್

ರಕ್ತವನ್ನು ಶುದ್ಧಿಕರಿಸುವ ಡೈಯಾಲೈಸರ್

(Dialyser!)

ನಮ್ಮ ದೇಹದಲ್ಲಿರುವ ಕೋಶಗಳಲ್ಲಿ ಪ್ರತಿದಿನವೂ ರಕ್ತ ಅಶುದ್ಧಿಯಾಗುತ್ತಲೇ ಇರುತ್ತದೆ. ಏಕಂದರೆ ನಮ್ಮ ದೇಹದ ಕೋಶಗಳಲ್ಲಿ ಮಲೀನ ಪದಾರ್ಥಗಳು ಪ್ರತಿದಿನ ಉತ್ಪತ್ತಿಯಾಗುತ್ತಲೇ ಇರುತ್ತವೆ. ನಮ್ಮ ಮೂತ್ರ ಪಿಂಡಗಳು ಇಂತಹ ಮಲಿನರಕ್ತವನ್ನು ಶುದ್ಧೀಕರಿಸುತ್ತ ಚಲನಶೀಲಗೊಂಡಿರುತ್ತವೆ. ಮುಷ್ಟಿ ಗಾತ್ರದಲ್ಲಿರುವ ಮೂತ್ರ ಪಿಂಡಗಳಲ್ಲಿ ರಕ್ತವು ಹಾಯ್ದು ಹೋಗುತ್ತದೆ. ಮತ್ತು ಅಲ್ಲಿ ರಕ್ತ ಶುದ್ಧಿಗೊಂಡು ದೇಹದಲ್ಲಿ ಪ್ರವಹಿಸುತ್ತಾ ಹೋಗುತ್ತದೆ. ಅಶುದ್ಧ ಅಥವಾ ಮಲಿನ ಪದಾರ್ಥಗಳನ್ನು ಮೂತ್ರಪಿಂಡವು ಮೂತ್ರದ ಮೂಲಕ ಹೊರಗೆಡುತ್ತದೆ. ಈ ಕಾರ್ಯಕ್ಕೆ ‘ಡೈಯಾಲೈಸರ್’ ಎಂದು ಕರೆಯುತ್ತಾರೆ. ಯಾವುದೋ ಕಾರಣದಿಂದ ಈ ಮೂತ್ರ ಪಿಂಡಗಳು ತಮ್ಮ ಕಾರ್ಯವನ್ನು ಸೂಕ್ತ ರೀತಿಯಲ್ಲಿ ಮಾಡದಿದ್ದಾಗ ದೇಹದಲ್ಲಿರುವ ಮಲಿನ ಪದಾರ್ಥಗಳು ರಕ್ತದಲ್ಲಿಯೇ ಸಂಗ್ರಹವಾಗಿ ರಕ್ತವು ವಿಷವಾಗಿ ಸಾವು ಸಂಭವಿಸಬಹುದು.

ಇಂಥಹ ಅಪಾಯಕಾರಿ ಸನ್ನಿವೇಶದಲ್ಲಿ ವಿಜ್ಞಾನವು ಒಂದು ಪ್ರಗತಿದಾಯಕ ಯಂತ್ರವನ್ನು ಕಂಡುಹಿಡಿದಿದೆ. ಮೂತ್ರ ಪಿಂಡಗಳು ತಮ್ಮ ಕಾರ್ಯವನ್ನು ನಿರ್ವಹಿಸದಿದ್ದಾಗ ಆ ಕಾರ್ಯವನ್ನು ಈ ಯಂತ್ರವೇ ನೆರವೇರಿಸುತ್ತದೆ, ಇದರ ಹೆಸರು ಡೈಯಾಲೈಸರ್. ರಕ್ತನಾಳದಿಂದ ರಕ್ತವು ಈ ಉಪಕರಣಕ್ಕೆ ಬರುವಂತೆ ಮಾಡಿ ರಕ್ತವನ್ನು ಪರಿಶುದ್ದಗೊಳಿಸಿ ಅದನ್ನು ಅಭಿದಮನಿಗೆ (Vein) ರವಾನಿಸಲಾಗುವುದು. ಈ ಯಂತ್ರ ಮೂತ್ರ ಪಿಂಡದಿಂದ ಕಾರ್ಯ ಮಾಡಿದರೂ ಮೂತ್ರ ಪಿಂಡಕ್ಕೆ ಸಾಟಿಯಾಗಲಾರದು. ಆದರೂ ನೋವಿನಿಂದ ಬಳಲುತ್ತಿರುವ ರೋಗಿಗೆ ತಾತ್ಕಾಲಿಕ ಪರಿಹಾರ ಒದಗಿಸಿ ಅವನ ಸಾವನ್ನು ಮುಂದೂಡುತ್ತದೆ. ಇಂಥಹ ರೋಗಿಗೆ ಪ್ರತಿವಾರ ಎರಡು ಸಲವಾದರೂ ಡಯಾಲಿಸಿಸ್ ಅಗತ್ಯವಾಗಿದೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...