Home / ಲೇಖನ / ವಿಜ್ಞಾನ / ಹೊಸ ತಳಿಯ ಜಾಮ್! ಜೆಲ್ಲಿ!!

ಹೊಸ ತಳಿಯ ಜಾಮ್! ಜೆಲ್ಲಿ!!

ಹಸಿರು ಸೂರ್ಯಕಾಂತಿ ಹೂಗಳು ಸಂತೃಪ್ತವಾಗಿ ಮತ್ತಷ್ಟು ಪೋಶಕಾಂಶಗಳಿಂದ ಕಂಗೊಳಿಸಲು ಹಸುವಿನ ಹಾಲು, ರಂಗುರಂಗಿನ ಹೂವಿನ ಪಕಳೆಗಳು ನಿಮಗೆ ದೊರೆಯಲು ಇನ್ನೂ ೫೦ ವರ್ಷಗಳಷ್ಟೇ ಸಾಕು. ಆಹಾರ ಸತ್ವ ಸಮೃದ್ಧ ಟೊಮ್ಯಾಟೊ ಹೊಸ ತಳಿ ಈಗಾಗಲೇ ಅಮೇರಿಕಾದ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಲಿವೆ. ಕೃಷಿ ಉತ್ಪಾದನೆಯ ಶೇ. ೫೦ ರಷ್ಟು ಪದಾರ್ಥಗಳು ಮಾರುಕಟ್ಟೆಯನ್ನು ತಲುಪಲು ಹಾದಿಯಲ್ಲಿಯೇ ಕೊಳೆತು ರೈತರಿಗೆ ನಷ್ಟವನ್ನುಂಟುಮಾಡುತ್ತವೆ. ಕಿರಿದಾಗುತ್ತಿರುವ ಇಂದಿನ ವಿಶ್ವದಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೇಡಿಕೆ ಇರುವ ದೂರದೇಶದ ಹಣ್ಣು, ತರಕಾರಿ, ಹಾಲು, ಮೀನುಗಳನ್ನು ಸಾಗಿಸಲು ಇರುವ ಸಮಸ್ಯೆಯನ್ನು ಆ ವಸ್ತು ಕೆಡದಂತೆ ಬಹುಕಾಲ ತಾಳಿಕೆ ಗುಣಗಳನ್ನು ಬೆಳೆಯಲ್ಲಿಯೇ ಸೇರಿಸುವ ಪ್ರಯತ್ನ ನಡೆಯುತ್ತಲಿದೆ. ಮಾರುಕಟ್ಟೆಯಲ್ಲಿಯ ಬೇಡಿಕೆಯನ್ನು ಗಮನಿಸಿ ಹಣ್ಣಾಗಿಸಲು ಇಥಲೀನ್‌ನಂತಹ ಅನಿಲವನ್ನು ಹಾಯಿಸಿ (ಹೂವಿನ ಕಾಯಿ, ಬಾಳೆಕಾಯಿ, ಕಿತ್ತಳೆ) ಕೆಲವು ಬಲಿತ/ ಬಲಿಯದ ಕಾಯಿಗಳನ್ನು ಹಣ್ಣುಮಾಡಲಾಗುತ್ತದೆ. ಇದರ ಪರಿಣಾಮವಾಗಿ ಸಂಪೂರ್ಣ ರುಚಿಯನ್ನು ಬದಲಿಸುವ ಕಾಯಿಗಳು ನೀಡವು. ಈ ಹಣ್ಣುಗಳ ತಳಿಯನ್ನು ಸೂಕ್ತವಾಗಿ ಅಭಿವೃದ್ಧಿಪಡಿಸಲು ವಂಶಾಣುಗಳನ್ನು ಬಳಿಸಿ ಸುದೀರ್ಘಕಾಲ ಇಡಬಹುದು. ಕೊಳೆಯದ ಟೊಮ್ಯಾಟೋ ತಳಿಯನ್ನು ಈಗಾಗಲೇ ಅಮೇರಿಕೆಯ “ಪ್ಲಾದ್ರ್ ಸಾದ್ರ್” ಜೈವಿಕ ತಂತ್ರಜ್ಞಾನ ಸಂಸ್ಥೆ ಅಭಿವೃದ್ಧಿಪಡಿಸಿದೆ. ಈ ಟೊಮ್ಯಾಟೋ ಇತರ ತಳಿಗಳಿಗಿಂತ ಹೆಚ್ಚು ತಾಳಿಕೆ ಮತ್ತು ರುಚಿಯನ್ನು ನಿಧಾನಗೊಳಿಸುತ್ತವೆ. ಯುರೋಪಿನ ಮಾರುಕಟ್ಟೆಯಲ್ಲಿ ಸಾಸ್, ಜಾಮ್ ಜೆಲ್ಲಿ ಮತ್ತು ಕೆಚಪ್‌ಗಳು ಅಟ್ಲಾಂಟಿಕ್ ಸಾಗರವನ್ನು ದಾಟಿ ನೀಡುತ್ತವೆ. ಎಣ್ಣೆಯಲ್ಲಿ ಕರಿದ ‘ಆಲೂ ಚಿಪ್ಸ್‌’ಗಳನ್ನು ನೆನಪಿಸಿಕೊಂಡರೆ ಬಾಯಲ್ಲಿ ನೀರೂರುತ್ತದೆ. ಇವುಗಳನ್ನು ಬಹುಕಾಲ ಕೆಡದಂತೆ ಇಡಬಹುದು.
*****

Tagged:

Leave a Reply

Your email address will not be published. Required fields are marked *

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...