Home / ಕವನ / ಕವಿತೆ / ಭೂಮಿಗೆ ಆಕಳಿಕೆ ಸಮಯ

ಭೂಮಿಗೆ ಆಕಳಿಕೆ ಸಮಯ

ಸೀರೆ ಸೆರಗ ತಾಗಿದ ಗಾಳಿ
ಪ್ರೇಮದ ನವಿರು ಹೊತ್ತುತಂತು
ಆಡಿದ ಆಡದೇ ಉಳಿದ ಮಾತು
ಮೌನಗಳ ಸಂಕಲನ ಮೋಡಗಳಲ್ಲಿ
ಚಿತ್ರ ಬಿಡಿಸಿತು
ನೀನಿಡುವ ಪ್ರತಿ ಹೆಜ್ಜೆಯಲಿ
ಕನಸು ಇಣುಕುತ್ತಿದೆ ಗೆಳತಿ
ಮನಸುಗಳ ಅಗಣಿತ ತರಂಗಗಳು
ಎದೆತಾಕುತ್ತಲೇ ಇರುವ ಸೋಜಿಗಕ್ಕೆ ಏನೆನ್ನಲಿ ?
***

ನಿನ್ನ ದನಿ ಕೇಳದ ಭೂಮಿಗೆ
ಆಕಳಿಕೆ ಸಮಯ
ಅದಕ್ಕೆ ಮಗ್ಗಲು ಬದಲಿಸುತ್ತಿದೆ
ಮುಗಿಲಿಗೆ ದಿಗಿಲು ಬಡಿದಿದೆ
ಎಲ್ಲಿ ಹೋದೆ ?
ಗೆಜ್ಜೆ ಸದ್ದಿಗೆ ಅರಳುತ್ತಿದ್ದ ಹೂ ಸಹ ಮೌನವಾಗಿದೆ
***

ನಾನು ಸುಳಿದಾಡುವೆ
ಒಬ್ಬಳೇ ಇರುವೆ ಎಂದು ಭಾವಿಸಬೇಡ
ಸುಳಿಯುವ ಗಾಳಿಯಲ್ಲಿ
ಎರಡು ನಿಟ್ಟುಸಿರುಗಳಿವೆ
ಅವು ಪ್ರೇಮದ ಪಲ್ಲವಿಗಳಾಗಿ
ಬದಲಾಗಿ ಬಿಡಲಿ
ಕಣ್ಣಲ್ಲಿ ನಕ್ಷತ್ರಗಳು ಹಾಡಲಿ
ಕಾಲ್ಗೆಜ್ಜೆಗಳಲ್ಲಿ
ಏಳು ಸುತ್ತಿನ ಮಲ್ಲಿಗೆ ಅರಳಲಿ
****

ರುತುಗಳಿಗೆ ತಕ್ಕಂತೆ
ಬಣ್ಣ ರೂಪ ಪಡೆಯುವ ಭೂಮಿ
ಮನಸ್ಸಿನ ಏರಿಳಿತಕ್ಕೆ ತಕ್ಕಂತೆ
ಬಣ್ಣಗಳ ಸೀರೆ ತೊಡುವ ಆಕೆ
ಎಲ್ಲವೂ ಪ್ರಕೃತಿ ಕಲಿಸಿದ ಪಾಠಕ್ಕೆ
ನಿಬ್ಬೆರಗಾಗುವುದು ಮಾತ್ರ ………
****

ನೀನು ನಡೆದರೆ
ಭೂಮಿ ಪಿಸುಗುಡುತ್ತದೆ
ಮಣ್ಣ ಕಣ ಕಣವೂ
ಜೀವಸೆಲೆಯಿಂದ ಪುಟಿದೇಳುತ್ತದೆ
ದಾರಿ ಪಕ್ಕದ ಗಿಡ ಮರಗಳು
ಕಣ್ಣು ಮಿಟುಕಿಸುತ್ತವೆ
ಮುಂಗುರುಳ ಲಾಸ್ಯಕ್ಕೆ
ಗಾಳಿ ರೋಮಾಂಚನಗೊಳ್ಳುತ್ತದೆ
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...