Home / ಲೇಖನ / ಹಾಸ್ಯ / ಅವರ ‘ಸರ್ವಿಸು’

ಅವರ ‘ಸರ್ವಿಸು’

“ಜಿ. ಬಿ.” ಕ್ಲಬ್ಬಿನ ಮೂವತ್ತು ಸದಸ್ಯರಿಗೂ ತಮ್ಮ ಫೋಟೋ ತೆಗೆಸಬೇಕೆಂದು, ಒಂದು ವಸಂತ ಋತುವಿನ ರಾತ್ರೆಯಲ್ಲಿ, ಕ್ಲಬ್ಬಿನಲ್ಲಿ ಕುಳಿತು ಐಸ್ ಕ್ರೀಮನ್ನು ತಿನ್ನುತ್ತಾ, ಆಲೋಚನೆಯಾಯಿತು. ಊರಲ್ಲಿ ಯಾವ ಫೋಟೋಗ್ರಾಫರನು ಅತಿ ಕುಶಲನೆಂಬ ಪ್ರಶ್ನೆ, “ಯೋಶ್ವ” ಎಂದನೊಬ್ಬ; “ಹೈಮನ್ಸ್” ಎಂದನು ಮತ್ತೊಬ್ಬ; “ಫೋನ್ಸ್” ಎಂದನು ಮಗದೊಬ್ಬ; “ಕಪಾಲರಾಯರು” ಎಂದನು ಇನ್ನೊಬ್ಬ. ಚರ್ಚೆ ನಡೆದು ವೋಟು ತೆಗೆಯಲಾಗಿ… ನಿಮಗೆ ಆಶ್ಚರ್ಯವೆನಿಸಬಹುದು-… ಆ ನಾಲ್ವರಲ್ಲಿ ಯಾರನ್ನೂ ಆರಿಸದೆ, ಆಕಸ್ಮಿಕವಾಗಿ ಸಿ. ವಿ ಕೋಮಟಿಯವರ ಕಡೆಗೆ ಬಹುಮತವು ಮಾಲಿತು! ಮಂಗಳೂರಿಗೆ ಬಂದ ಮೊದಲನೇ ಕೆಮರವನ್ನು ಕೊಂಡುಕೊಂಡವರೇ ಇವರಂತೆ! “ಸರ್ವಿಸು” ಹೆಚ್ಚಾದ ಇವರೇ ಒಳ್ಳೆಯ ಫೋಟೋ ಎತ್ತಬಲ್ಲರೆಂದು ಬಹುಮತವು ನಿರ್ಧರಿಸಿತ್ತು.

ಮರುದಿನ ಬೆಳಿಗ್ಯೆ ಏಳು ಘಂಟೆಯೊಳಗೆ ಸದಸ್ಯರೆಲ್ಲ ಸಾಲಂಕೃತರಾಗಿ ಹಾಜರಾದರು. ಮೀಸೆಗಳು ಕಾಣಬಾರದೆಂದು ಬೋಳಿಸಿ ಕೊಂಡವನೊಬ್ಬ; ಕ್ರಾಪ್ ಹೊಳೆಯ ಬೇಕೆಂದು ಅರ್ಧ ಬಾಟಲಿ ವೆಸಲೀನ್ ಹಚ್ಚಿದವನೊಬ್ಬ; ಗಡ್ಡವೇನೂ ತೋರಬಾರದೆಂದು, ಮುಂಜಾನೆ ೪ ರಿಂದ ೬ ರ ತನಕ ಪ್ರಯತ್ನ ಪೂರ್ವದ ಕ್ಷೌರ ತೆಗೆಸಿದವನೊಬ್ಬ; ಅಳುಮೊಗವು ತೋರಬಾರದೆಂದು, ಕಳೆದ ರಾತ್ರೆಯ ಹೆಂಡತಿಯ ತೀಕ್ಷ್ಣ ನುಡಿಗಳನ್ನು ಮರೆಯಲೆತ್ನಿಸಿ, ನಗಲು ಸಾಹಸ ಗೊಂಡವನೊಬ್ಬ.

ಫೋಟೋಗ್ರಾಫರ ಕೋಮಟಿಯವರು, ಕೈಝರನ ಗಾಂಭೀರ್‍ಯವನ್ನು ಜತೆಯಲ್ಲಿ ಕರಕೊಂಡು ಬಂದು, ಕೆಮರವಿಟ್ಟರು, ಕ್ಲಬ್ ಮೆಂಬರರೆಲ್ಲ ಒಂದು ಮಾವಿನ ಮರದ ಕೆಳಗೆ ಕುಳಿತುಕೊಂಡರು. ಕೋಮಟಿಯವರು ಶಾಲಾ ಆಧ್ಯಾಪಕನಂತೆ, ಅವರೆಲ್ಲರನ್ನೂ ಕ್ರಮವಾಗಿ ಕುಳ್ಳಿರಿಸಿದರು. ಎಂಟರ ತನಕ ಹೀಗೆ ಅವರನ್ನು ದಣಿಸಿ, ಕೊನೆಗೆ “ನಗುತ್ತಿರ್ರಿ!” ಎಂದರು. ಮೆಂಬರರೆಲ್ಲ ಏಕಕಾಲದಲ್ಲಿ, ತಂತಮ್ಮ ಸಂಸಾರ ತಾಪತ್ರಯಗಳನ್ನೆಲ್ಲ ಆ ಒಂದು ಕ್ಷಣಕ್ಕೆ ಮರೆತು, ಕಿಸಕ್ಕೆಂದು ನಕ್ಕರು. ಕೋಮಟಿಯವರು “ಇನ್ನು ನೀವು ಏಳಬಹುದು” ಎಂದು ಅನುಜ್ಞೆಯಿತ್ತು, ಫೋಟೋ ಪ್ರತಿಯೊಂದೊಂದನ್ನು ಒದಗಿಸುವ ಬಗ್ಗೆ ಮೂವತ್ತು ಸದಸ್ಯರಿಂದ ಮೂವತ್ತು ರೂಪಾಯಿಗಳನ್ನು ಪಡಕೊಂಡು, ಗಾಡಿಯಲ್ಲಿ ಕುಳಿತು, ತಮ್ಮ ಮನೆಗೆ ತೆರಳಿದರು.

ವಸಂತ‌ಋತುವಿನ ಮೇಲೆ ಎರಡು ಋತುಗಳು ಕಳೆದುವು; ಛಳಿಗಾಲ ಬಂತು. ಕೋಮಟಿಗಳು ಫೋಟೋ ಪ್ರತಿಗಳನ್ನು ಇನ್ನೂ ತಯಾರಿಸುತ್ತಲೇ ಇದ್ದರು. ಬೇಸರ ಹುಟ್ಟಿ ನಾನು….

ಹಣ ಕೊಟ್ಟವರಲ್ಲಿ ನಾನೂ ಒಬ್ಬನು!

….ನಾನು ಅವರ ಮನೆ ತನಕವೂ ಪ್ರಯಾಣ ಬೆಳೆಸಿ ಕೇಳಿದೆ:- “ಕೋಮಟಿಯವರೇ, ಹೇಗೆ ಬಂದಿದೆ ಫೋಟೋ? ಪ್ರತಿಗಳು ಸಿದ್ಧವಾಗಿವೆಯೇ?”

ಕೋಮಟಿಯವರು ತಮ್ಮ ದೀರ್ಘಕಾಲದ ಸರ್ವಿಸಿನ ಮುಖವನ್ನು ಅವರೇ ಕಾಳಿನಷ್ಟು ಸಣ್ಣದು ಮಾಡಿ ಒಂದು ಪಂಕ್ತಿಯನ್ನು ಪ್ರಯತ್ನಪೂರ್ವಕವಾಗಿ ಉಸಿರಿದರು:- “ಸ್ವಾಮಿ, ಕ್ಷಮಿಸಿರಿ; ಆ ದಿನ ನಾನು ಕೆಮರದೊಳಗೆ ಪ್ಲೇಟನ್ನಿಡಲು ಮರೆತಿದ್ದೆನು, ಇನ್ನೊಮ್ಮೆ ಅತ್ತ ಬರಲು ನಾಚಿಕೆಯಾಯಿತು! ನಿಮ್ಮ ಫೋಟೋವನ್ನು ತೆಗೆಯಲೇ ಇಲ್ಲ!!”
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...