Home / ಲೇಖನ / ಹಾಸ್ಯ / ಕಾಣದ ಕೈ

ಕಾಣದ ಕೈ

ಕತೆಗಾರರು ಯಶಸ್ವಿ ಪತ್ರಿಕಾ ಲೇಖಕರಾಗರೆಂದು ಯಾರೋ ನುಡಿದ ನೆನಪಿದೆ. ಅದರಲ್ಲಿ ಸತ್ಯವಿದ್ದಿರಬೇಕು.

ನಾನು ಕತೆಗಾರನಂತೆ. ಹಾಗೆಂದು ಜನರು ಹೇಳುವರು. ಜನರು ಒಗ್ಗಟ್ಟಾಗಿ ಇಟ್ಟ ಹೆಸರು, ತೊಟ್ಟಿಲಿನಲ್ಲಿ ತಂದೆ-ತಾಯ್ಗಳು ಇರಿಸಿದ ಹೆಸರಿಗಿಂತ ಬಲವುಳ್ಳುದು. “ಜನಾಭಿಪ್ರಾಯ” ವೆನ್ನುತ್ತಲೇ- ನೀವದನ್ನು ವಿರೋಧಿಸಲಾರಿರಿ.

ಕತೆಗಾರನಾಗಿಯೂ ನಾನು “ಜ್ಞಾನಸಿಂಧು” ಪತ್ರಿಕಾಲಯದಲ್ಲಿ ಪರಿಚಯವುಳ್ಳವನು. “ಸುಬಾವ್, ಐ. ಸಿ. ಎಸ್. ಇವರ ವಿವಾಹದ ಕುರಿತು ನಿಮಗೆ ತಿಳಿದುದೆಲ್ಲವನ್ನೂ ವಿವರಿಸಿ, ನಮ್ಮ ಪತ್ರಿಕೆಗೊಂದು ಬಾತ್ಮಿ ಬರೆದು ಬಿಡಿ!” ಎಂದು ಸಂಪಾದಕರು ವಿನಂತಿಸಿದರು.

ಲೇಖನಿಯನ್ನೆ, ‘ಕರಿಮಣಿ’ ಎಂಬ ನೂತನ ಶಾಯಿ ಕುಪ್ಪಿಯಲ್ಲಿ ಮುಳುಗಿಸಿ, ಬರೆಯಲಾರಂಭಿಸಿದೆ.

” ಎಸ್ , ಇವರ ಮುಖವು ದುಷ್ಯಂತನ ತೇಜವನ್ನು ಪಡೆದು, ಆ ಅಭಿನವ ಶಾಕುಂತಲೆಯ ಪೂರ್ಣಿಮಾಚಂದ್ರ ಸದೃಶವಾದ..”

“ಕ್ಷಮಿಸಿರಿ; ನೀವೂ ಕೇಳುವ ಆ ಅಭಿನವ ಶಕುಂತಲೆ (ವಧು) ಯು ಮುಖಕ್ಕೆ ನೀಲಗಿರಿ ಅಥವಾ ಬಾಬಾಬುಡನ್ ಗಿರಿ-ಅಥವಾ ಇನ್ಯಾವದಾದರೂ ಗಿರಿಯ ಸ್ನೋವನ್ನು ತಿಕ್ಕಿರಬಹುದು. ಆಕೆಯ ಮುಖದ ಮೇಲೆ ಕಲೆಗಳಿರಲಿಲ್ಲ!” ಎಂದರು ಸಂಪಾದಕರು.

‘ಪೂರ್ಣಿಮಾಚಂದ್ರ’ನೆಂಬುದನ್ನು ಅಳಿಸಿದೆ. ಆ ಮೇಲೆ ಕೆನೆಹಾಲಿನಂತೆ ಶುಭ್ರವಾದ ಮೊಗಕ್ಕೆದುರಾಗಿ ಆ ಮಂಟಪದಲ್ಲಿ ಶೋಭಿಸುತ್ತಿತ್ತು. ಶೋಕಭಾರದಿಂದ, ಕಂದಿದ ತಾವರೆಯಂತ, ವಧುವಿನ ಮಾತೃವು, ಕಣ್ವನಂತೆ ತೇಜಪುಂಜವಾದ ಶರೀರಕಾಂತಿಯುಳ್ಳ…” ಈ ರೀತಿಯಾಗಿ ಬರೆದೆ. ಮುಕ್ಕಾಲು ತಾಂವು ಬರೆದೆ. ಬರೆದು ಮುಗಿಸಬೇಕಾದರೆ ಏಳು ಕಾಗದಗಳಲ್ಲಿ ತಿದ್ದಿದೆ. ಎಂಟನೆ ಪ್ರತಿಯನ್ನು ಶುದ್ಧವಾಗಿ ಬರೆದು, ಸಂಪಾದಕರ ಕೈಗೆ ಒಪ್ಪಿಸಿದೆ. ಪತ್ರಿಕಾ ವ್ಯವಸಾಯವು ನಿಜವಾಗಿಯೂ ನಾವೆಣಿಸಿದಷ್ಟು ಸುಲಭವಲ್ಲ.

ಸಂಪಾದಕರು ಅದನ್ನು ಕೈಗೆ ತೆಗೆದುಕೊಂಡು, ತಮ್ಮ ದೃಷ್ಟಿ ಹೊರಳಿಸಿ, ನಗುತ್ತ ನನಗೆ ವಿದಾಯವಿತ್ತರು. ಬರೆಹಗಾರರನ್ನು ಪರೀಕ್ಷಿಸುವುದೇ ಈ ಸಂಪಾದಕರುಗಳ ದುರ್ಬುದ್ಧಿ -ನಾನು ಮಾತ್ರ ಜಯಶೀಲನಾದೆನಲ್ಲವೇ- ಎಂಬ ಸಂತೋಷದಿಂದ ತೆರಳಿದೆ.

ತಾ. ೧೭-೩-೧೯೩೪ರ ‘ಜ್ಞಾನಸಿಂಧು’ವನ್ನು ತೆರೆದು ನೋಡಿದಾಗ, ನಾನು ಬರೆದುಕೊಟ್ಟ ಮುಕ್ಕಾಲು ತಾಂವು ಬರಹವು ಐದು ಪಂಕ್ತಿಗಳಲ್ಲಿ ಈ ಕೆಳಗಿನಂತೆ ರೂಪಾಂತರ ಹೊಂದಿ ಪ್ರಕಟವಾಗಿತ್ತು:-

“ಐ. ಸಿ. ಎಸ್. ದುಷ್ಯಂತತೇಜ, ಇವರು ಅಭಿನವ ಶಾಕುಂತಲೆ ಎಂಬ ಕನೆಹಾಲಿನವಳನ್ನು ಶೇಕದಾರ್ ಕಂದಿತಾವರ್ ಮತ್ತು ಕಣ್ವನಾಥ ಎಂಬವರ ಸಮಕ್ಷಮ, ಇದೇ ಕಳೆದ ತಾ. ೧೪ರಲ್ಲಿ ವಿವಾಹವಾದರು. ನಮ್ಮ ಜಿಲ್ಲೆಯಲ್ಲಿ ನಡೆದ ಈ ಏಳನೆಯ ಅಂತರ್ಜಾತೀಯ ವಿವಾಹವು ಇತರರೆಲ್ಲರಿಗೆ ಆದರ್ಶವಗಿದೆ!”

ಇದು ಯಾರ ಕೈಯಾಗಿರಬಹುದು?-ಯಾರು ಒಲ್ಲ! ಕಾಣದ ಕೈ!

“ಕತೆಗಾರರು ಪತ್ರಿಕಾವ್ಯವಸಾಯವನ್ನು ತಿಳಿಯದುದಷ್ಟೆ – ಪತ್ರಿಕಾ ವ್ಯವಸಾಯಿಗಳು ಕಥಾಲೇಖನವನ್ನು ಅರಿಯರು. ದಯಮಾಡಿ ನೀವು ಕಳೆದ ಸಂಚಿಕೆಯಲ್ಲಿ ಪ್ರಕಟಸಿದ ಆ ಭಯಂಕರ ವಾರ್ತೆಯನ್ನು ತಿದ್ದು ಬಿಡಿರಿ” ಎಂದು ಸಂಪಾದಕರಿಗೆ ಪತ್ರ ಬರೆದರೆ, ಉತ್ತರವೂ ಇಲ್ಲ, ತಿದ್ದುಪಡಿ ಪ್ರಕಟವಾದುದೂ ಇಲ್ಲ.

ಬಹುಶಃ “ಸಂಪಾದಕರ ತೀರ್ಮಾನವೇ ಕೊನೆಯದು.”

ಆಶ್ಚರ್ಯವೆಂದರೆ-ದುಷ್ಯಂತ ತೇಜ ಐ. ಸಿ. ಎಸ್. ಎಂಬವನೊಬ್ಬನು ಅಭಿನವ ಶಕುಂತಲೆ ನಾಮಾಂಕಿತ ಕೆನೆ ಹಾಲಿ ಎಂಬ ಗ್ರಾಮಸ್ಥಳನ್ನು ಶೇಕದಾರ್ ಕಂದಿತಾವರ್ ಮತ್ತು ಕಣ್ವನಾಥ ಎಂಬ ಹೆಸರಿನ ಮಹನೀಯರ ಸಮಕ್ಷಮ ವಿವಾಹವಾದುದು ನಿಜವೆಂದು,- ನಮೂರಿನ ಜನರೆಲ್ಲರೂ ಇಂದಿಗೂ ನಂಬಿರುವರು!
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...