Home / ಲೇಖನ / ಇತರೆ / ಹೊಸತು

ಹೊಸತು

ಪ್ರಿಯ ಸಖಿ,

ಸದಾ ಕಾಲ ಹೊಸ ಹೊಸದಕ್ಕಾಗಿ ತುಡಿಯುವುದು ಮನುಷ್ಯನ ಸಹಜ ಗುಣ. ‘ಬದಲಾವಣೆ ಬಾಳಿನೊಗ್ಗರಣೆ’ ಎನ್ನುತ್ತದೆ ನಮ್ಮ ನಾಣ್ಣುಡಿ. ಕವಿಗಳೂ ಇದಕ್ಕೆ ಹೊರತಲ್ಲ. ಹಿಂದಿನ ಕವಿಗಳು ಹೇಳಿಬಿಟ್ಟಿದ್ದನ್ನೇ ಮತ್ತೆ ಮತ್ತೆ ಹೇಳುತ್ತಿದ್ದೇನೆ ಎನ್ನಿಸಿದಾಗ ಹೊಸತನಕ್ಕಾಗಿ ಹುಡುಕಾಡುತ್ತಾ ತಳಮಳಿಸುವ ಕವಿಯ ಸ್ಥಿತಿ ಹೇಗಿರುತ್ತದೆ? ಕವಿ ಗೋಪಾಲಕೃಷ್ಣ ಅಡಿಗರು ತಮ್ಮ ‘ನನ್ನ ನುಡಿ’ ಎಂಬ ಕವನದಲ್ಲಿ ಹೀಗೆ ಹೇಳುತ್ತಾರೆ.
ಚಂದ್ರಸೂರ್ಯರ ನೆರವಿನಿಂದೇ ಬೆಳಗುವಳೀ
ವಸುಂಧರೆಗದೆಂದು ಬಹುದೋ ಸ್ವಯಂದೀಪಕತೆ!
ಅವರಿವರ ನುಡಿಗಳನು ಕದ್ದು ಮರುನುಡಿಗೊಡುವ
ದೆಸೆಗಳೇ ನಿಮಗೆಂದು ಬಹುದು ಮೀಸಲು ನಿನದ?
ಭೂಮಿಯ ಅಸ್ತಿತ್ವವಿರುವುದೇ ಚಂದ್ರಸೂರ್ಯರಿಂದ. ಅವರಿಲ್ಲದೇ ಬೆಳಗಬಲ್ಲ ಸ್ವಯಂದೀಪಕತೆ ಭೂಮಿಗೆ ಬರುವುದು ಯಾವಾಗ? ಅವರಿವರು ಉಪಯೋಗಿಸಿ ಬಿಟ್ಟ ಪದಗಳು, ವಸ್ತು, ಶೈಲಿ, ತಂತ್ರಗಳನ್ನೇ ಕದ್ದು ಮತ್ತೆ ತಾನೂ ಅದನ್ನೇ ಹೇಳುವಂತಹಾ ಅವಸ್ಥೆಯಿಂದ ಬಿಡುಗಡೆ ಹೊಂದಿ ತನ್ನದೇ ‘ಸ್ವಂತ’ ಸ್ವರವನ್ನು ಹೊರಡಿಸುವ ಗಳಿಗೆ ಬರುವುದೆಂದು? ಎಂದುಕೊಳ್ಳುತ್ತಾರೆ. ಈ ಸ್ಥಿತಿಯಲ್ಲಿದ್ದು ನೊಂದ ಕವಿ ತಮ್ಮ ಕವನದ ಕೊನೆಯಲ್ಲಿ.
ಅನ್ಯರೊರೆದುದನೆ ಬರೆದುದನೆ ನಾಬರೆಬರೆದು
ಬಿನ್ನಗಾಗಿದೆ ಮನವು; ಬಗೆಯೊಳಗನೇ ತೆರೆದು
ನನ್ನ ನುಡಿಯೊಳೆ ಬಣ್ಣಬಣ್ಣದಲಿ ಬಣ್ಣಿಸುವ
ಪನ್ನತಿಕೆ ಬರುವತನಕ ನನ್ನ ಬಾಳಿದು ನರಕ!
ಎನ್ನುತ್ತಾರೆ. ಬೇರೆಯವರು ಹೇಳಿದ್ದು, ಬರೆದದ್ದೇ ನಾನೂ ಬರೆಬರೆದು ನನ್ನ ಮನಸ್ಸು ಕ್ಷುದ್ರವಾಗಿದೆ. ನನ್ನ ಮನಸ್ಸಿನಾಳಗಳನ್ನು ತೆರೆದು ‘ನನ್ನದೇ ನುಡಿಯಲ್ಲಿ ವಿಭಿನ್ನ ಬಗೆಗಳಲ್ಲಿ ಬಣ್ಣಿಸುವಂತಾ ಎತ್ತರ ದೊರಕುವವರೆಗೆ ನನ್ನ ಬಾಳಿದು ನರಕ! ಎಂದಿದ್ದಾರೆ ಕವಿ.

ಸಖಿ, ಹೊಸತನ್ನು ಹುಡುಕುವುದು, ಹೊಸತನ್ನೇ ಬರೆಯುವುದು ಅದರಲ್ಲಿಯೇ ಸಾಧಿಸುವುಮ, ಹೊಸತನ್ನು ಸಮೂಹ ಒಪ್ಪಿಕೊಳ್ಳುವಂತೆ ಮಾಡುವುಮ ಎಲ್ಲವೂ ಕಷ್ಟವೇ, ಆದರೆ ಹೊಸತಿಗಾಗಿ ಸದಾ ತುಡಿಯುವ ಕವಿಗೆ ಅದಕ್ಕಿಂತಾ ಕಷ್ಟ ಕೊಡುವುದು ಎಂದರೆ ಅವರಿವರು ಹೇಳಿದ್ದನ್ನೇ ಮತ್ತೆ ಮತ್ತೆ ಹೇಳುವುದು! ಬರೆಯುವುದು! ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...