Home / ಲೇಖನ / ಇತರೆ / ಹೊಸತು

ಹೊಸತು

ಪ್ರಿಯ ಸಖಿ,

ಸದಾ ಕಾಲ ಹೊಸ ಹೊಸದಕ್ಕಾಗಿ ತುಡಿಯುವುದು ಮನುಷ್ಯನ ಸಹಜ ಗುಣ. ‘ಬದಲಾವಣೆ ಬಾಳಿನೊಗ್ಗರಣೆ’ ಎನ್ನುತ್ತದೆ ನಮ್ಮ ನಾಣ್ಣುಡಿ. ಕವಿಗಳೂ ಇದಕ್ಕೆ ಹೊರತಲ್ಲ. ಹಿಂದಿನ ಕವಿಗಳು ಹೇಳಿಬಿಟ್ಟಿದ್ದನ್ನೇ ಮತ್ತೆ ಮತ್ತೆ ಹೇಳುತ್ತಿದ್ದೇನೆ ಎನ್ನಿಸಿದಾಗ ಹೊಸತನಕ್ಕಾಗಿ ಹುಡುಕಾಡುತ್ತಾ ತಳಮಳಿಸುವ ಕವಿಯ ಸ್ಥಿತಿ ಹೇಗಿರುತ್ತದೆ? ಕವಿ ಗೋಪಾಲಕೃಷ್ಣ ಅಡಿಗರು ತಮ್ಮ ‘ನನ್ನ ನುಡಿ’ ಎಂಬ ಕವನದಲ್ಲಿ ಹೀಗೆ ಹೇಳುತ್ತಾರೆ.
ಚಂದ್ರಸೂರ್ಯರ ನೆರವಿನಿಂದೇ ಬೆಳಗುವಳೀ
ವಸುಂಧರೆಗದೆಂದು ಬಹುದೋ ಸ್ವಯಂದೀಪಕತೆ!
ಅವರಿವರ ನುಡಿಗಳನು ಕದ್ದು ಮರುನುಡಿಗೊಡುವ
ದೆಸೆಗಳೇ ನಿಮಗೆಂದು ಬಹುದು ಮೀಸಲು ನಿನದ?
ಭೂಮಿಯ ಅಸ್ತಿತ್ವವಿರುವುದೇ ಚಂದ್ರಸೂರ್ಯರಿಂದ. ಅವರಿಲ್ಲದೇ ಬೆಳಗಬಲ್ಲ ಸ್ವಯಂದೀಪಕತೆ ಭೂಮಿಗೆ ಬರುವುದು ಯಾವಾಗ? ಅವರಿವರು ಉಪಯೋಗಿಸಿ ಬಿಟ್ಟ ಪದಗಳು, ವಸ್ತು, ಶೈಲಿ, ತಂತ್ರಗಳನ್ನೇ ಕದ್ದು ಮತ್ತೆ ತಾನೂ ಅದನ್ನೇ ಹೇಳುವಂತಹಾ ಅವಸ್ಥೆಯಿಂದ ಬಿಡುಗಡೆ ಹೊಂದಿ ತನ್ನದೇ ‘ಸ್ವಂತ’ ಸ್ವರವನ್ನು ಹೊರಡಿಸುವ ಗಳಿಗೆ ಬರುವುದೆಂದು? ಎಂದುಕೊಳ್ಳುತ್ತಾರೆ. ಈ ಸ್ಥಿತಿಯಲ್ಲಿದ್ದು ನೊಂದ ಕವಿ ತಮ್ಮ ಕವನದ ಕೊನೆಯಲ್ಲಿ.
ಅನ್ಯರೊರೆದುದನೆ ಬರೆದುದನೆ ನಾಬರೆಬರೆದು
ಬಿನ್ನಗಾಗಿದೆ ಮನವು; ಬಗೆಯೊಳಗನೇ ತೆರೆದು
ನನ್ನ ನುಡಿಯೊಳೆ ಬಣ್ಣಬಣ್ಣದಲಿ ಬಣ್ಣಿಸುವ
ಪನ್ನತಿಕೆ ಬರುವತನಕ ನನ್ನ ಬಾಳಿದು ನರಕ!
ಎನ್ನುತ್ತಾರೆ. ಬೇರೆಯವರು ಹೇಳಿದ್ದು, ಬರೆದದ್ದೇ ನಾನೂ ಬರೆಬರೆದು ನನ್ನ ಮನಸ್ಸು ಕ್ಷುದ್ರವಾಗಿದೆ. ನನ್ನ ಮನಸ್ಸಿನಾಳಗಳನ್ನು ತೆರೆದು ‘ನನ್ನದೇ ನುಡಿಯಲ್ಲಿ ವಿಭಿನ್ನ ಬಗೆಗಳಲ್ಲಿ ಬಣ್ಣಿಸುವಂತಾ ಎತ್ತರ ದೊರಕುವವರೆಗೆ ನನ್ನ ಬಾಳಿದು ನರಕ! ಎಂದಿದ್ದಾರೆ ಕವಿ.

ಸಖಿ, ಹೊಸತನ್ನು ಹುಡುಕುವುದು, ಹೊಸತನ್ನೇ ಬರೆಯುವುದು ಅದರಲ್ಲಿಯೇ ಸಾಧಿಸುವುಮ, ಹೊಸತನ್ನು ಸಮೂಹ ಒಪ್ಪಿಕೊಳ್ಳುವಂತೆ ಮಾಡುವುಮ ಎಲ್ಲವೂ ಕಷ್ಟವೇ, ಆದರೆ ಹೊಸತಿಗಾಗಿ ಸದಾ ತುಡಿಯುವ ಕವಿಗೆ ಅದಕ್ಕಿಂತಾ ಕಷ್ಟ ಕೊಡುವುದು ಎಂದರೆ ಅವರಿವರು ಹೇಳಿದ್ದನ್ನೇ ಮತ್ತೆ ಮತ್ತೆ ಹೇಳುವುದು! ಬರೆಯುವುದು! ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...