Home / ಲೇಖನ / ಇತರೆ / ಉಪದೇಶ

ಉಪದೇಶ

ಪ್ರಿಯ ಸಖಿ,
ಕೆಲವರಿಗೆ ಸದಾ ಉಪದೇಶ ನೀಡುವ ಖಯಾಲಿ. ಯಾರು ಕೇಳಲಿ ಬಿಡಲಿ ಉಪದೇಶ ನೀಡುವ ಸಂದರ್ಭವಿರಲಿ ಬಿಡಲಿ, ಉಪದೇಶ ಕೇಳುವವನು ಅರ್ಹನಿರಲಿ ಬಿಡಲಿ ಉಪದೇಶಿಸುತ್ತಿರುವುದು ಅಂಥವರ ಹವ್ಯಾಸ. ಇಂತಹ ಚಟವನ್ನು ಕಂಡ ಸರ್ವಜ್ಞ ಹೀಗೆ ಹೇಳುತ್ತಾನೆ.
ಕೇಳುವವರಿದ್ದಿಹರೆ ಹೇಳುವುದು ಬುದ್ಧಿಯನು
ಕೋಳದಲಿ ಬಿದ್ದು ನರಳುವಗೆ ಬುದ್ಧಿಯನು
ಹೇಳಿ ಫಲವೇನು? ಸರ್ವಜ್ಞ!
ಹೌದಲ್ಲವೇ ಸಖಿ? ಕೇಳುವವರಿರುವಾಗ ನಾವು ಕೊಟ್ಟ ಉಪದೇಶಕ್ಕೊಂದು ಬೆಲೆ. ತಾನೇ ಕೋಳದಲಿ ಬಿದ್ದು, ಎಂದರೆ ದೌರ್ಬಲ್ಯ, ಕೆಟ್ಟಗುಣ, ಅಹಂಕಾರದ ಬಂಧನದಲ್ಲಿ ಬಿದ್ದು ನರಳುತ್ತಿರುವವನಿಗೆ ಎಷ್ಟು ಬುದ್ಧಿ ಹೇಳಿದರೆ ಏನು ಪ್ರಯೋಜನ? ನೀಚರಿಗೆ, ಮೂರ್ಖರಿಗೆ ಹೇಳಿದ ಉಪದೇಶದಿಂದ ನಮಗೇ ಕೇಡುಂಟಾಗುತ್ತದೆ ಎನ್ನುತ್ತಾರೆ ಹಿರಿಯರು. ಉಪದೇಶದ ಮಹತ್ವವನ್ನು ಅರಿಯದ ಅವರು ಅದು ತಮ್ಮ ಅಭಿಮಾನಕ್ಕೆ ಬಿದ್ದ ಪೆಟ್ಟೆಂದುಕೊಂಡು ಆ ಮಾತುಗಳಿಂದಲೇ ಹಗೆ ಸಾಧಿಸಲು ಪ್ರಾರಂಭಿಸುತ್ತಾರೆ.

ಅದಕ್ಕೆಂದೇ ಕವಿ ಷೇಕ್ಸ್ಪಿಯರ್ ಹೀಗೆ ಹೇಳುತ್ತಾನೆ. Speak when you are spoken to and come when you are called for ನಿನ್ನೊಂದಿಗೆ ಮಾತನಾಡಿದಾಗ ಮಾತನಾಡು ಮತ್ತು ನಿನ್ನನ್ನು ಕರೆದಾಗ ಮಾತ್ರ ಬಾ ಎಂದು. ಉಪದೇಶವನ್ನು ಅಥವಾ ತಿಳುವಳಿಕೆಯನ್ನು ಕೇಳಿದಾಗಷ್ಟೇ ನೀಡಿದಾಗ ಅದಕ್ಕೊಂದು ಘನತೆ ಬರುತ್ತದೆ. ಅದು ಬಿಟ್ಟು ಸಿಕ್ಕವರಿಗೆಲ್ಲಾ ಉಪದೇಶ ನೀಡಿದರೆ ವ್ಯರ್ಥವಾಗುತ್ತದೆ.

ಅದರೆ ಸಖಿ, ನಾವೇ ಉಪದೇಶವನ್ನು ಕೇಳುವವರಾದರೆ ಸದಾ ನಮ್ಮ ಕಿವಿಗಳನ್ನು ತೆರೆದಿಡೋಣ. ಒಳಿತಾದ ಮಾತು ಎಲ್ಲಿಂದಲೇ, ಯಾರಿಂದಲೇ ಬರಲಿ ಕೇಳೋಣ. ಆದರೆ ನಾವೇ ಉಪದೇಶ ಕೊಡುವವರಾದರೆ ಬಹಳಷ್ಟು ಯೋಚಿಸೋಣ. ಷೇಕ್ಸ್ಪಿಯರ್ ಹೇಳುತ್ತಾನೆ, From hearing comes wisdom, from speaking repentance. ಕೇಳುವುದರಿಂದ ಜಾಣತನ ಬರುತ್ತದೆ, ಮಾತನಾಡುವುದರಿಂದ ಪಶ್ಚಾತ್ತಾಪ
ಪಡಬೇಕಾಗುತ್ತದೆ ಎಂದು ಹೇಳಿ ಕೆಟ್ಟವರಾಗುವುದಕ್ಕಿಂತ ಅಥವಾ ಪಶ್ಚಾತ್ತಾಪ ಪಡುವುದಕ್ಕಿಂತಾ ಒಳ್ಳೆಯ ಕೇಳುಗರಾಗುವುದೇ ಮೇಲಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...