Home / ಲೇಖನ / ಇತರೆ / ಉಪದೇಶ

ಉಪದೇಶ

ಪ್ರಿಯ ಸಖಿ,
ಕೆಲವರಿಗೆ ಸದಾ ಉಪದೇಶ ನೀಡುವ ಖಯಾಲಿ. ಯಾರು ಕೇಳಲಿ ಬಿಡಲಿ ಉಪದೇಶ ನೀಡುವ ಸಂದರ್ಭವಿರಲಿ ಬಿಡಲಿ, ಉಪದೇಶ ಕೇಳುವವನು ಅರ್ಹನಿರಲಿ ಬಿಡಲಿ ಉಪದೇಶಿಸುತ್ತಿರುವುದು ಅಂಥವರ ಹವ್ಯಾಸ. ಇಂತಹ ಚಟವನ್ನು ಕಂಡ ಸರ್ವಜ್ಞ ಹೀಗೆ ಹೇಳುತ್ತಾನೆ.
ಕೇಳುವವರಿದ್ದಿಹರೆ ಹೇಳುವುದು ಬುದ್ಧಿಯನು
ಕೋಳದಲಿ ಬಿದ್ದು ನರಳುವಗೆ ಬುದ್ಧಿಯನು
ಹೇಳಿ ಫಲವೇನು? ಸರ್ವಜ್ಞ!
ಹೌದಲ್ಲವೇ ಸಖಿ? ಕೇಳುವವರಿರುವಾಗ ನಾವು ಕೊಟ್ಟ ಉಪದೇಶಕ್ಕೊಂದು ಬೆಲೆ. ತಾನೇ ಕೋಳದಲಿ ಬಿದ್ದು, ಎಂದರೆ ದೌರ್ಬಲ್ಯ, ಕೆಟ್ಟಗುಣ, ಅಹಂಕಾರದ ಬಂಧನದಲ್ಲಿ ಬಿದ್ದು ನರಳುತ್ತಿರುವವನಿಗೆ ಎಷ್ಟು ಬುದ್ಧಿ ಹೇಳಿದರೆ ಏನು ಪ್ರಯೋಜನ? ನೀಚರಿಗೆ, ಮೂರ್ಖರಿಗೆ ಹೇಳಿದ ಉಪದೇಶದಿಂದ ನಮಗೇ ಕೇಡುಂಟಾಗುತ್ತದೆ ಎನ್ನುತ್ತಾರೆ ಹಿರಿಯರು. ಉಪದೇಶದ ಮಹತ್ವವನ್ನು ಅರಿಯದ ಅವರು ಅದು ತಮ್ಮ ಅಭಿಮಾನಕ್ಕೆ ಬಿದ್ದ ಪೆಟ್ಟೆಂದುಕೊಂಡು ಆ ಮಾತುಗಳಿಂದಲೇ ಹಗೆ ಸಾಧಿಸಲು ಪ್ರಾರಂಭಿಸುತ್ತಾರೆ.

ಅದಕ್ಕೆಂದೇ ಕವಿ ಷೇಕ್ಸ್ಪಿಯರ್ ಹೀಗೆ ಹೇಳುತ್ತಾನೆ. Speak when you are spoken to and come when you are called for ನಿನ್ನೊಂದಿಗೆ ಮಾತನಾಡಿದಾಗ ಮಾತನಾಡು ಮತ್ತು ನಿನ್ನನ್ನು ಕರೆದಾಗ ಮಾತ್ರ ಬಾ ಎಂದು. ಉಪದೇಶವನ್ನು ಅಥವಾ ತಿಳುವಳಿಕೆಯನ್ನು ಕೇಳಿದಾಗಷ್ಟೇ ನೀಡಿದಾಗ ಅದಕ್ಕೊಂದು ಘನತೆ ಬರುತ್ತದೆ. ಅದು ಬಿಟ್ಟು ಸಿಕ್ಕವರಿಗೆಲ್ಲಾ ಉಪದೇಶ ನೀಡಿದರೆ ವ್ಯರ್ಥವಾಗುತ್ತದೆ.

ಅದರೆ ಸಖಿ, ನಾವೇ ಉಪದೇಶವನ್ನು ಕೇಳುವವರಾದರೆ ಸದಾ ನಮ್ಮ ಕಿವಿಗಳನ್ನು ತೆರೆದಿಡೋಣ. ಒಳಿತಾದ ಮಾತು ಎಲ್ಲಿಂದಲೇ, ಯಾರಿಂದಲೇ ಬರಲಿ ಕೇಳೋಣ. ಆದರೆ ನಾವೇ ಉಪದೇಶ ಕೊಡುವವರಾದರೆ ಬಹಳಷ್ಟು ಯೋಚಿಸೋಣ. ಷೇಕ್ಸ್ಪಿಯರ್ ಹೇಳುತ್ತಾನೆ, From hearing comes wisdom, from speaking repentance. ಕೇಳುವುದರಿಂದ ಜಾಣತನ ಬರುತ್ತದೆ, ಮಾತನಾಡುವುದರಿಂದ ಪಶ್ಚಾತ್ತಾಪ
ಪಡಬೇಕಾಗುತ್ತದೆ ಎಂದು ಹೇಳಿ ಕೆಟ್ಟವರಾಗುವುದಕ್ಕಿಂತ ಅಥವಾ ಪಶ್ಚಾತ್ತಾಪ ಪಡುವುದಕ್ಕಿಂತಾ ಒಳ್ಳೆಯ ಕೇಳುಗರಾಗುವುದೇ ಮೇಲಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...