Home / ಲೇಖನ / ಇತರೆ / ಹೊಸ ಹಾಡು

ಹೊಸ ಹಾಡು

ಪ್ರಿಯ ಸಖಿ,Sangeeta
ಗಳಿಗೆ ಗಳಿಗೆಗೂ ಹೊಸ ಹೊಸರೀತಿಗೆ
ಈ ಜಗವೋಡುತಿದೆ
ಹಳತ ನೋಡಿ ತಾ ಕಿಲಕಿಲ ನಗುತಲಿ
ಓ ಜಗವೋಡುತಿದೆ
ಕವಿ ಪುತಿನ ಅವರ ‘ಹೊಸಹಾಡು’ ಕವನದ ಈ ಸಾಲುಗಳನ್ನು ಕೇಳಿದ್ದೀಯಲ್ಲವೇ? ಬದುಕು ನಿಂತ ನೀರಲ್ಲ ಅದು ನಿರಂತರ ಹೊಸತರ ಅನ್ವೇಷಕ.  ರೀತಿನೀತಿಗಳಿಗೆ ಜಗತ್ತು ಒಡ್ಡಿಕೊಳ್ಳುತ್ತಾ ಸಾಗುತ್ತಿದೆ. ಜೊತೆಗೇ ಹಳತೆಲ್ಲವನ್ನೂ ಗೇಲಿಮಾಡಿ ನಗುತ್ತಲೂ ಇರುತ್ತದೆ. ಕವಿ ಇಲ್ಲಿ ಹಾಗಿದ್ದರೆ ಹಳತೆಲ್ಲವೂ ವ್ಯರ್ಥವೇ? ಹೊಸತು ಯಾವುದೇ ಆದರೂ ಸರಿಯೇ? ಅದರ ಪೂರ್ವಪರ ವಿವೇಚಿಸದೇ ಅದನ್ನು ಅಪ್ಪಿಕೊಳ್ಳುವುದು ಸರಿಯೇ? ಎಂದು ಚಿಂತಿಸುತ್ತಾರೆ.

ಹೊಸತರಲ್ಲಿ ಗುಣಾವಗುಣಗಳಿರುವಂತೆ ಹಳತರಲ್ಲಿ ಕೂಡ ಗುಣಾವಗುಣಗಳಿವೆ. ಹೊಸತು-ಹಳತು ಎರಡರ ಧನಾತ್ಮಕ ಗುಣಗಳನ್ನೂ ಹೀರಿಕೊಂಡು ನಡೆದಾಗ ಮಾತ್ರ ಜಗತ್ತು ಪ್ರಗತಿಯನ್ನು ಸಾಧಿಸುತ್ತದೆ. ಷೋಪೆನ್ ಹಾರ್ ಎಂಬ ಚಿಂತಕ ‘ಹೊಸದು ಬರುವುದು. ಯಾವಾಗಲೂ ಹಳೆಯದರ ಆಧಾರದ ಮೇಲೆಯೇ’ ಎನ್ನುತ್ತಾರೆ. ವಿವೇಚನೆಯಿಲ್ಲದೇ, ಹೂಸತೆನ್ನುತ್ತಾ ವಿಜ್ಞಾನ, ತಂತ್ರಜ್ಞಾನದ ಹೆಸರಿನಲ್ಲಿ ಪ್ರಗತಿಯನ್ನು ಸಾಧಿಸಿದ್ದೇನೆಂದುಕೊಳ್ಳುತ್ತಾ ತನ್ನ ವಿನಾಶವನ್ನು ತಾನೇ ತೋಡಿಕೊಂಡರೆ ಅದು ಮೂರ್ಖತನವಲ್ಲವೇ? ಕವನದ ಕೊನೆಯಲಿ ಕವಿ
ಗಳಿಗೆ ಗಳಿಗೆಗೂ ಹೊಸ ಹೊಸ ರೀತಿಗೆ
ಈ ಜಗವೋಡುತಿದೆ
ಪ್ರಗತಿಯ ಹಂತಕೊ?
ಪ್ರಣಯ ದುರಂತಕೋ?
ಎಂದು ಪ್ರಶ್ನಿಸುತ್ತಾರೆ. ಹೊಸತೆಲ್ಲವನ್ನೂ ವಿವೇಚನೆಯಿಲ್ಲದೇ ಒಪ್ಪಿಕೊಂಡು ನಡೆದಾಗ ಅದು ನಮ್ಮನ್ನು ಪ್ರಳಯದ ಅಂಚಿಗೂ ತಂದು ನಿಲ್ಲಿಸಬಹುದಲ್ಲವೇ?

ಪ್ರಿಯ ಸಖಿ, ಹೊಸತೇ ಆಗಲಿ, ಹಳತೇ ಆಗಲಿ ಎಲ್ಲವನ್ನೂ ವಿವೇಚನೆಯ ಮೂಸೆಯಲ್ಲಿ ಬೇಯಿಸಿ ಉತ್ತಮವಾದುದನ್ನು ತೆಗೆದುಕೊಂಡು ಕೆಟ್ಟದನ್ನು ಬಿಟ್ಟಾಗ ಮಾತ್ರ ಪ್ರಗತಿ ಸಾಧ್ಯ. ಕಣ್ಣುಮುಚ್ಚಿ ಎಲ್ಲವನ್ನೂ ಸ್ವೀಕರಿಸಿದಲ್ಲಿ ಖಂಡಿತಾ ಪ್ರಳಯವೇ! ನಮ್ಮ ಕವಿವಾಣಿಯೇ ಹೇಳಿಲ್ಲವೆ? ‘ಹಳೇಬೇರು ಹೊಸ ಚಿಗುರು ಕೂಡಿರಲು ಮರ ಸೊಗಸು’ ಎಂದು ಬರಿಯ ಹಳತಿನಿಂದ ಅಥವಾ ಬರಿಯ ಹೊಸತಿನಿಂದ ವಿನಾಶ ಖಿಂಡಿತಾ ಎರಡರ ಸಮನ್ವಯವೇ ನಿಜವಾದ ಪ್ರಗತಿ ನೀನೇನೆನ್ನುತ್ತಿ ಸಖಿ?
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...