Home / ಲೇಖನ / ಇತರೆ / ಹೊಸ ಹಾಡು

ಹೊಸ ಹಾಡು

ಪ್ರಿಯ ಸಖಿ,Sangeeta
ಗಳಿಗೆ ಗಳಿಗೆಗೂ ಹೊಸ ಹೊಸರೀತಿಗೆ
ಈ ಜಗವೋಡುತಿದೆ
ಹಳತ ನೋಡಿ ತಾ ಕಿಲಕಿಲ ನಗುತಲಿ
ಓ ಜಗವೋಡುತಿದೆ
ಕವಿ ಪುತಿನ ಅವರ ‘ಹೊಸಹಾಡು’ ಕವನದ ಈ ಸಾಲುಗಳನ್ನು ಕೇಳಿದ್ದೀಯಲ್ಲವೇ? ಬದುಕು ನಿಂತ ನೀರಲ್ಲ ಅದು ನಿರಂತರ ಹೊಸತರ ಅನ್ವೇಷಕ.  ರೀತಿನೀತಿಗಳಿಗೆ ಜಗತ್ತು ಒಡ್ಡಿಕೊಳ್ಳುತ್ತಾ ಸಾಗುತ್ತಿದೆ. ಜೊತೆಗೇ ಹಳತೆಲ್ಲವನ್ನೂ ಗೇಲಿಮಾಡಿ ನಗುತ್ತಲೂ ಇರುತ್ತದೆ. ಕವಿ ಇಲ್ಲಿ ಹಾಗಿದ್ದರೆ ಹಳತೆಲ್ಲವೂ ವ್ಯರ್ಥವೇ? ಹೊಸತು ಯಾವುದೇ ಆದರೂ ಸರಿಯೇ? ಅದರ ಪೂರ್ವಪರ ವಿವೇಚಿಸದೇ ಅದನ್ನು ಅಪ್ಪಿಕೊಳ್ಳುವುದು ಸರಿಯೇ? ಎಂದು ಚಿಂತಿಸುತ್ತಾರೆ.

ಹೊಸತರಲ್ಲಿ ಗುಣಾವಗುಣಗಳಿರುವಂತೆ ಹಳತರಲ್ಲಿ ಕೂಡ ಗುಣಾವಗುಣಗಳಿವೆ. ಹೊಸತು-ಹಳತು ಎರಡರ ಧನಾತ್ಮಕ ಗುಣಗಳನ್ನೂ ಹೀರಿಕೊಂಡು ನಡೆದಾಗ ಮಾತ್ರ ಜಗತ್ತು ಪ್ರಗತಿಯನ್ನು ಸಾಧಿಸುತ್ತದೆ. ಷೋಪೆನ್ ಹಾರ್ ಎಂಬ ಚಿಂತಕ ‘ಹೊಸದು ಬರುವುದು. ಯಾವಾಗಲೂ ಹಳೆಯದರ ಆಧಾರದ ಮೇಲೆಯೇ’ ಎನ್ನುತ್ತಾರೆ. ವಿವೇಚನೆಯಿಲ್ಲದೇ, ಹೂಸತೆನ್ನುತ್ತಾ ವಿಜ್ಞಾನ, ತಂತ್ರಜ್ಞಾನದ ಹೆಸರಿನಲ್ಲಿ ಪ್ರಗತಿಯನ್ನು ಸಾಧಿಸಿದ್ದೇನೆಂದುಕೊಳ್ಳುತ್ತಾ ತನ್ನ ವಿನಾಶವನ್ನು ತಾನೇ ತೋಡಿಕೊಂಡರೆ ಅದು ಮೂರ್ಖತನವಲ್ಲವೇ? ಕವನದ ಕೊನೆಯಲಿ ಕವಿ
ಗಳಿಗೆ ಗಳಿಗೆಗೂ ಹೊಸ ಹೊಸ ರೀತಿಗೆ
ಈ ಜಗವೋಡುತಿದೆ
ಪ್ರಗತಿಯ ಹಂತಕೊ?
ಪ್ರಣಯ ದುರಂತಕೋ?
ಎಂದು ಪ್ರಶ್ನಿಸುತ್ತಾರೆ. ಹೊಸತೆಲ್ಲವನ್ನೂ ವಿವೇಚನೆಯಿಲ್ಲದೇ ಒಪ್ಪಿಕೊಂಡು ನಡೆದಾಗ ಅದು ನಮ್ಮನ್ನು ಪ್ರಳಯದ ಅಂಚಿಗೂ ತಂದು ನಿಲ್ಲಿಸಬಹುದಲ್ಲವೇ?

ಪ್ರಿಯ ಸಖಿ, ಹೊಸತೇ ಆಗಲಿ, ಹಳತೇ ಆಗಲಿ ಎಲ್ಲವನ್ನೂ ವಿವೇಚನೆಯ ಮೂಸೆಯಲ್ಲಿ ಬೇಯಿಸಿ ಉತ್ತಮವಾದುದನ್ನು ತೆಗೆದುಕೊಂಡು ಕೆಟ್ಟದನ್ನು ಬಿಟ್ಟಾಗ ಮಾತ್ರ ಪ್ರಗತಿ ಸಾಧ್ಯ. ಕಣ್ಣುಮುಚ್ಚಿ ಎಲ್ಲವನ್ನೂ ಸ್ವೀಕರಿಸಿದಲ್ಲಿ ಖಂಡಿತಾ ಪ್ರಳಯವೇ! ನಮ್ಮ ಕವಿವಾಣಿಯೇ ಹೇಳಿಲ್ಲವೆ? ‘ಹಳೇಬೇರು ಹೊಸ ಚಿಗುರು ಕೂಡಿರಲು ಮರ ಸೊಗಸು’ ಎಂದು ಬರಿಯ ಹಳತಿನಿಂದ ಅಥವಾ ಬರಿಯ ಹೊಸತಿನಿಂದ ವಿನಾಶ ಖಿಂಡಿತಾ ಎರಡರ ಸಮನ್ವಯವೇ ನಿಜವಾದ ಪ್ರಗತಿ ನೀನೇನೆನ್ನುತ್ತಿ ಸಖಿ?
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...