Home / ಲೇಖನ / ಇತರೆ / ನಿಂತ ನೀರ ಕಲಕಬೇಡಿ

ನಿಂತ ನೀರ ಕಲಕಬೇಡಿ

ಪ್ರಿಯ ಸಖಿ,
ಕೆಲವರಿಗೆ ಅನ್ಯರ ಖಾಸಗಿ ಬದುಕಿನ ಒಳ-ಹೊರಗನ್ನು ಕೆದಕುವುದೆಂದರೆ ಬಹುಪ್ರಿಯ. ತಮ್ಮ ಬದುಕಿನ ಬಟ್ಟೆ ಚಿಂದಿಚಿಂದಿಯಾಗಿದ್ದರೂ ಅನ್ಯರ ಬದುಕಿನ ಬಟ್ಟೆಯ ಸಣ್ಣ ತೂತಿನಲ್ಲಿ ಕೈಯಾಡಿಸುವುದು. ಅದನ್ನು ಮತ್ತಷ್ಟು ಹರಿಯುವುದು ಇಂತಹಾ ಕೀಳು ಅಭಿರುಚಿ. ಇದನ್ನು ಕಂಡ ಕವಿ ಎನ್. ಎಸ್. ಲಕ್ಷ್ಮೀನಾರಾಯಣಭಟ್ಟರು ತಮ್ಮ ‘ನಿಂತ ನೀರ ಕಲಕಬೇಡಿ” ಎಂಬ ಕವನದಲ್ಲಿ
ನಿಂತ ನೀರ ಕಲಕಬೇಡಿ ಕಲ್ಲುಗಳೇ
ಹೂದಳಗಳ ಇರಿಯಬೇಡಿ ಮುಳ್ಳುಗಳೇ
ಏನಿದೆಯೋ ನೋವು ಅದಕೆ ತಮ್ಮದೇ
ಬಾಳಲು ಬಿಡಿ ತಮ್ಮಷ್ಟಕೆ ಸುಮ್ಮನೇ
ಎನ್ನುತ್ತಾರೆ. ಎಷ್ಟೊಂದು ಮಾರ್ಮಿಕವಾದ ಮಾತಲ್ಲವೇ ಸಖಿ? ಪ್ರತಿಯೊಬ್ಬ ವ್ಯಕ್ತಿಗೂ ಅವನದೇ ಆದ ಖಾಸಗಿ ಬದುಕೊಂದು ಇದ್ದೇ ಇರುತ್ತದೆ. ಅಲ್ಲಿ ನೋವು,
ದುಃಖ, ದುಮ್ಮಾನ, ಹೇಳಲಾಗದ ಅನೇಕ ಭಾವಗಳು ಮಡುಗಟ್ಟಿ ನಿಂತಿರುತ್ತವೆ. ಅದನ್ನು ಕಲಕಲು, ಕೆದಕಲು, ಯಾರಿಗೂ ಅಧಿಕಾರ ಇರುವುದಿಲ್ಲ. ಆದರೆ ಕೆಲವು ಅಧಿಕಪ್ರಸಂಗಿಗಳು ಅನ್ಯರ ಖಾಸಗಿ ಬದುಕಿನಲ್ಲಿ ಮೂಗು ತೂರಿಸಿ ಅವರಿಗೆ ಹಿಂಸೆ ನೀಡಿ ತಾವು ವಿಚಿತ್ರ ಸುಖವನ್ನು ಅನುಭವಿಸುತ್ತಾರೆ. ಕವನದ ಕೊನೆಯಲ್ಲಿ ಇಂತಹವರಿಗೆ ಕವಿ
ಯಾವ ಜೀವ ಯಾವ ನೋವಿಗೀಡೋ
ಯಾವ ಭಾವ ನೆಮ್ಮಿ ಅದರ ಪಾಡೋ
ಮಾಡಲು ಬಿಡಿ ತನ್ನ ಯಾತ್ರೆ ತಾನು
ನೀಡಲು ಬಿಡಿ ತನ್ನೊಳಗಿನ ಜೇನು
ಎಂದು ಹೇಳುತ್ತಾರೆ. ಯಾವ ಜೀವಿಗೆ ಅವನ ಅಂತರಾಳದಲ್ಲಿ ಯಾವ ನೋವಿದೆಯೋ? ಯಾವ ಭಾರ್ವೊತ್ಕರ್ಷದಲ್ಲಿ ಅವನು ಬೇಯುತ್ತಿದ್ದಾನೋ ಅವನ ನೋವನ್ನು ಅವನೇ ಅನುಭವಿಸಬೇಕು. ಅದನ್ನು ಕೆದಕಿ ಮತ್ತಷ್ಟು ನೋವು ಕೊಡುವುದರ ಬದಲು ಅವನು ಏಕಾಂತದಲ್ಲಿ ತಾನೇ ನೋವನನುಭವಿಸಿ ಅದರಲ್ಲೇ ಮಾಗಿ ಪರಿಪಕ್ವವಾಗಿ
ನೋವೆಲ್ಲವ ನುಂಗಿ ಸಿಹಿಯಾದ ಜೇನನ್ನು ಕೊಡುವವರೆಗೂ ಕಾಯೋಣ ಎನ್ನುತ್ತಾರೆ ಕವಿ. ನಿಜಕ್ಕೂ ಇದೇ ಸರಿಯಾದ ಮಾರ್ಗವೂ ಅಲ್ಲವೇ ಸಖಿ?
*****

Tagged:

One Comment

  • ರಾಮಚಂದ್ರ ಕುಲಕರ್ಣಿ.
    Reply

    ಭಾವಗೀತೆಯ ಭಾವ ಅರ್ಥ ತುಂಬಾ ಸೊಗಸಾಗಿದೆ. ಪ್ರತಿಯೊಂದು ಶಬ್ದ ಕೂಡ ಅರ್ಥ ಕೊಡುತ್ತ ಸಾಗುತ್ತೆ. ಹಾಡತ ಇರೋಣ ಅನಿಸುತ್ತೆ. ಲಕ್ಷ್ಮೀನಾರಾಯಣ ಭಟ್ಟರಿಗೆ ಅನಂತ ಧನ್ಯವಾದಗಳು.🙏🙏🙏

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...