Home / ಲೇಖನ / ಇತರೆ / ನಂಬಿಕೆ

ನಂಬಿಕೆ

ಪ್ರಿಯ ಸಖಿ,
ಬದುಕಿನಲ್ಲಿ ನಂಬಿಕೆಗೆ ಅತಿಮುಖ್ಯವಾದ ಸ್ಥಾನವಿದೆ. ನಂಬಿಕೆಯಿಲ್ಲದವನ ಬಾಳು ನರಕ. ಬದುಕನ್ನು ನಡೆಸುತ್ತಿರುವ ಶಕ್ತಿಯ ಮೇಲೆ ಬದುಕಿನಲ್ಲಿ ಜತೆಯಾಗಿರುವ ಸಹಜೀವಿಗಳ ಮೇಲೆ, ಕೊನೆಗೆ ತನ್ನ ಮೇಲೆ ನಂಬಿಕೆ ಇರಲೇಬೇಕು. ಕವಿ ಚೆನ್ನವೀರ ಕಣವಿಯವರ ‘ನಂಬಿಕೆ’ ಎಂಬ ಕವನದ ಈ ಸಾಲುಗಳನ್ನು ನೋಡು,
ನನ್ನ ನಂಬಿಕೆಯೊಂದು ಆಕಾಶ
ನಿಜ ಅದಕೆ ತಳಬುಡವಿಲ್ಲ
ನಾನೆಷ್ಟು ಬೆಳೆದರೂ ನನಗೆ ನಿಲುಕುವುದಿಲ್ಲ
ದೂರದಿಂದಲ್ಲದೆ ನಾನದನು
ಮುಟ್ಟಿ ಅನುಭವಿಸಿಲ್ಲ
ಮೇಲೆ ನೋಡದೆ ಸಟೆದುಕೊಂಡೇ
ನಡೆದರೂ ಅದು ಸದಾ ನನ್ನ ತಲೆಯ ಮೇಲೆ
ಇಲ್ಲಿ ಕವಿ ವ್ಯಕ್ತಿನಿಷ್ಟಕವಾದ ಹಾಗೂ ಬದುಕನ್ನು ಆವರಿಸಿಕೊಂಡಿರುವ ನಂಬಿಕೆಯ ಕುರಿತು ಚಿಂತಿಸುತ್ತಾರೆ. ನಂಬಿಕೆಯೆಂಬುದು ಆಕಾಶದಂತೆ ವಿಶಾಲವಾದುದು ಅಗಮ್ಯವಾದುದು. ಕವಿಯು ಪ್ರಶ್ನಿಸಿದರೂ ಅವರ ಮಿತಿಯನ್ನು ಮೀರಿರುವಂತಹುದು ನಂಬಿಕೆ. ಅದು ಮುಟ್ಟಿ ನೋಡಲು ಬರುವಂತದ್ದಲ್ಲ. ಅನುಭವಕ್ಕೆ ಮಾತ್ರ ಬರುವಂತದ್ದು, ಆ ನಂಬಿಕೆಯನ್ನು ಬುದ್ಧಿಪೂರ್ವಕವಾಗಿ ತಿರಸ್ಕರಿಸಲು ಹೋದರೂ ಮನಃಪೂರ್ವಕವಾಗಿ ಒಪ್ಪಿಕೊಂಡಿದ್ದಾದ್ದರಿಂದ ಕೊನೆಗೂ ನಂಬಿಕೆಯೇ ಗೆಲ್ಲುತ್ತದೆ ಎನ್ನುತ್ತಾರೆ ಕವಿ.

ಸಖಿ, ಆದರೆ ವ್ಯಕ್ತಿ ವ್ಯಕ್ತಿಗಳಲ್ಲಿ, ವಿಚಾರಗಳಲ್ಲಿ, ಧರ್ಮದಲ್ಲಿ, ಒಳಿತಿನಲ್ಲಿ, ಮೌಲ್ಯಗಳಲ್ಲಿ, ನೀತಿಯಲ್ಲಿ ನಂಬಿಕೆ ಕಳೆದುಕೊಳ್ಳುತ್ತಿರುವ ಇಂದಿನ ಮನುಷ್ಯ ಎಂತಹಾ ಅಧೋಗತಿಗಿಳಿಯುತ್ತಿದ್ದಾನಲ್ಲವೇ? ಅದಕ್ಕೆ ಕಾರಣವನ್ನು ಹುಡುಕುತ್ತಾ ಆಸ್ಕರ್ ವೈಲ್ಡ್ “`We did not dare breath a prayer or give our anguish scope! Something was dead in each of us and what was dead was hope’  ಒಂದು ಪ್ರಾರ್ಥನೆಯನ್ನು ಉಚ್ಚರಿಸುವ, ನಮ್ಮ ವೇದನೆಗೂ ಒಂದು ಅವಕಾಶ ಕೊಡುವ ಧೈರ್ಯ ನಮ್ಮಲ್ಲಿಲ್ಲ. ನಮ್ಮೆಲ್ಲರಲ್ಲೂ ಏನೋ ಒಂದು ಸತ್ತುಹೋಗಿದೆ! ಅದು ನಂಬಿಕೆ! ಎನ್ನುತ್ತಾರೆ.

ಹಾಗೆಂದು ಎಲ್ಲವನ್ನು ಅಂಧವಾಗಿ ನಂಬಬೇಕೆಂದೂ ಅರ್ಥವಲ್ಲ. ಮೊದಲು ನಂಬಿಕೆ, ನಂತರ ಪರೀಕ್ಷೆ, ಪರೀಕ್ಷೆ ಫಲ ಕೊಟ್ಟಾಗ ಅಚಲ ಶ್ರದ್ಧೆ ಮೂಡುತ್ತದೆ. ಆಂಗ್ಲಭಾಷೆಯ ಒಂದು ನಾಣ್ಣುಡಿ ಹೀಗೆ ಹೇಳುತ್ತದೆ. ‘Hope for the best and prepare for the worst’  ಒಳಿತಿಗಾಗಿ ನಂಬಿಕೆ ಇರಲಿ, ಕೆಟ್ಟದ್ದನ್ನೆದುರಿಸಲು ತಯಾರಾಗಿರೋಣ ಎಂದು ಈಗ ನಾವು ಮಾಡಬೇಕಾದದ್ದೂ ಇದೇ ಅಲ್ಲವೇ ಸಖೀ?
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...