Home / ಲೇಖನ / ಇತರೆ / ಆತ್ಮ ಸೌಂದರ್ಯ

ಆತ್ಮ ಸೌಂದರ್ಯ

ಪ್ರಿಯ ಸಖಿ,
ಇಂದು ನಾವು ಬಹಿರಂಗದ ಆಡಂಬರ, ಡಾಂಭಿಕತೆ, ಸೋಗಿನ ಸುಳಿಗೆ ಸಿಲುಕಿ ನಿಜವಾದ ಆತ್ಮಸೌಂದರ್ಯವನ್ನು ಮರೆತುಬಿಟ್ಟದ್ದೇವೆ. ಪಂಡಿತರತ್ನ ಎರ್ತೂರು ಶಾಂತಿರಾಜ ಶಾಸ್ತ್ರಿಯವರು ತಮ್ಮ ಒಂದು ಹಾಡಿನಲ್ಲಿ
ಅರಿಯಲಿಲ್ಲವಲ್ಲ
ಆತ್ಮನ ಮರೆತು ಕೆಟ್ಟರೆಲ್ಲಾ
ಹೊರಗಣ ಸೋಗೆಯ
ತಿಂದೊಳಗಿನ
ರಸದಿರವನರಿಯದಿಹ ಕುರಿಯಂತೆಲ್ಲಾ
ಎಂದಿದ್ದಾರೆ. ಕುರಿ ಸೋಗೆಯನ್ನು ಜಗಿದು ಉಗಿಯುತ್ತದೆ. ಅದಕ್ಕೆ ಆ ಗರಿಯೊಳಗಿನ ರಸದ ಅರಿವು ಇರುವುದೇ ಇಲ್ಲ. ಹಾಗೇ ನಾವು ಆತ್ಮದ ಔನ್ನತ್ಯವನ್ನು ಮರೆತು ಹೊರಗಿನ ಆಡಂಬರಕ್ಕೆ ಮನಸೋತು ಹೋಗಿದ್ದೇವೆ ಎನ್ನುತ್ತಾರೆ.

ನಮ್ಮ ಎಲ್ಲ ಧರ್ಮಗಳೂ ಆತ್ಮೋದ್ಧಾರಕ್ಕೆ ಹೆಚ್ಚಿನ ಮಹತ್ವ ನೀಡಿವೆ. ಬಹಿರಂಗ ಶುದ್ಧಿಗಿಂತಾ ಅಂತರಂಗ ಶುದ್ಧಿಯೇ ಮುಖ್ಯವಾದುದು. ದೇವರಿಗಾಗಿ ಕೋರಿಕೆಗೆ ಗಂಟೆಗಟ್ಟಲೆ ಪೂಜೆ, ಜಪ, ತಪ, ಧ್ಯಾನಗಳನ್ನು ಮಾಡಿಯೂ ಮನಸ್ಸನ್ನು ಕೇಂದ್ರೀಕರಿಸಲಾಗದ ಮೇಲೆ ಅಂತಹಾ ಪೂಜೆ, ಧ್ಯಾನಗಳಿಂದ ಪ್ರಯೋಜನವೇನು? ದೇಹವನ್ನು ನಾನಾ ವಿಧವಾದ ವಸ್ತ್ರ, ಆಭರಣ, ಪ್ರಸಾಧನಗಳಿಂದ ಸಿಂಗರಿಸಿ ಅದನ್ನೇ ನಾವು ಸೌಂದರ್ಯವೆಂದುಕೊಂಡು ಬೀಗುತ್ತೇವೆ. ಆದರೆ ನಿಜವಾದ ಆತ್ಮ ಸೌಂದರ್ಯಕ್ಕೆ ಇಂತಹ ಯಾವುದೇ ಆಡಂಬರವೂ ಬೇಡ.

ಹಾಗಾದರೆ ಸಖೀ ಈ ಆತ್ಮಸೌಂದರ್ಯವೆಂದರೆ ಏನು? ಅದನ್ನು ವೃದ್ಧಿಸಿಕೊಳ್ಳುವುದು ಹೇಗೆ? ನಾವು ಒಳ್ಳೆಯದೆಂದು ನಂಬಿರುವ ತತ್ವಗಳು, ಮೌಲ್ಯಗಳು, ಗುಣಗಳು ಇವುಗಳ ಅಳವಡಿಕೆಯೇ ಆತ್ಮದ ಸಿಂಗಾರದೊಡವೆಗಳು. ಒಳ್ಳೆಯದನ್ನು ಕುರಿತು ಆಲೋಚಿಸುವ, ಒಳ್ಳೆಯದನ್ನು ಮಾಡುವ, ಒಳ್ಳೆಯ ರೀತಿಯಲ್ಲಿ ನಡೆಯುವ ಬದುಕಿಗೆ ಯಾವ ಸೋಗೂ ಬೇಕಿಲ್ಲ. ಇಂದಿನ ಬದುಕಿನ ಅಧೋಗತಿಗೆ ಕಾರಣವೇ ನಾವು. ಆತ್ಮವನ್ನು ನಿರ್ಲಕ್ಷಿಸಿರುವುದು ಬುದ್ಧಿಪ್ರಧಾನವಾದ, ವ್ಯಾವಹಾರಿಕ ಬದುಕೇ ನಮಗಿಂದು ಮಹತ್ವದ್ದಾಗಿರುವುದರಿಂದಲೇ ನಮ್ಮ ಸುತ್ತಲೂ ಅನಾಚಾರ ಹೆಚ್ಚಾಗಿ ಶಾಂತಿ ನೆಮ್ಮದಿಗಳು ಕಾಣೆಯಾಗಿವೆ.

ನಿಜವಾದ ಆತ್ಮಸೌಂದರ್ಯದ ಬಗೆಗೆ ಮನುಜ ತಿಳಿದುಕೊಂಡು ಎಚ್ಚೆತ್ತು ಆಡಂಬರದ ಹಾದಿಯನ್ನು ಬಿಟ್ಟು ಸತ್ಯದ ಹಾದಿಯಲ್ಲಿ ನಡೆಯತೊಡಗಿದಾಗ ನಿಜವಾಗಿ ನಾವು ‘ಆತ್ಮ’ ಹೊಂದಿದವರಾಗುತ್ತೇವೆ. ಇಂತಹ ಶಾಶ್ವತವಾದ ಆತ್ಮ ಸೌಂದರ್ಯವನ್ನು ಪಡೆಯುವೆಡೆಗೆ ಹಂತಹಂತವಾಗಿಯಾದರೂ ಸರಿ ನಾವು ಹೆಜ್ಜೆ ಹಾಕೋಣ. ಅಲ್ಲವೇ ಸಖೀ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...