Home / ಲೇಖನ / ಇತರೆ / ಆತ್ಮ ಸೌಂದರ್ಯ

ಆತ್ಮ ಸೌಂದರ್ಯ

ಪ್ರಿಯ ಸಖಿ,
ಇಂದು ನಾವು ಬಹಿರಂಗದ ಆಡಂಬರ, ಡಾಂಭಿಕತೆ, ಸೋಗಿನ ಸುಳಿಗೆ ಸಿಲುಕಿ ನಿಜವಾದ ಆತ್ಮಸೌಂದರ್ಯವನ್ನು ಮರೆತುಬಿಟ್ಟದ್ದೇವೆ. ಪಂಡಿತರತ್ನ ಎರ್ತೂರು ಶಾಂತಿರಾಜ ಶಾಸ್ತ್ರಿಯವರು ತಮ್ಮ ಒಂದು ಹಾಡಿನಲ್ಲಿ
ಅರಿಯಲಿಲ್ಲವಲ್ಲ
ಆತ್ಮನ ಮರೆತು ಕೆಟ್ಟರೆಲ್ಲಾ
ಹೊರಗಣ ಸೋಗೆಯ
ತಿಂದೊಳಗಿನ
ರಸದಿರವನರಿಯದಿಹ ಕುರಿಯಂತೆಲ್ಲಾ
ಎಂದಿದ್ದಾರೆ. ಕುರಿ ಸೋಗೆಯನ್ನು ಜಗಿದು ಉಗಿಯುತ್ತದೆ. ಅದಕ್ಕೆ ಆ ಗರಿಯೊಳಗಿನ ರಸದ ಅರಿವು ಇರುವುದೇ ಇಲ್ಲ. ಹಾಗೇ ನಾವು ಆತ್ಮದ ಔನ್ನತ್ಯವನ್ನು ಮರೆತು ಹೊರಗಿನ ಆಡಂಬರಕ್ಕೆ ಮನಸೋತು ಹೋಗಿದ್ದೇವೆ ಎನ್ನುತ್ತಾರೆ.

ನಮ್ಮ ಎಲ್ಲ ಧರ್ಮಗಳೂ ಆತ್ಮೋದ್ಧಾರಕ್ಕೆ ಹೆಚ್ಚಿನ ಮಹತ್ವ ನೀಡಿವೆ. ಬಹಿರಂಗ ಶುದ್ಧಿಗಿಂತಾ ಅಂತರಂಗ ಶುದ್ಧಿಯೇ ಮುಖ್ಯವಾದುದು. ದೇವರಿಗಾಗಿ ಕೋರಿಕೆಗೆ ಗಂಟೆಗಟ್ಟಲೆ ಪೂಜೆ, ಜಪ, ತಪ, ಧ್ಯಾನಗಳನ್ನು ಮಾಡಿಯೂ ಮನಸ್ಸನ್ನು ಕೇಂದ್ರೀಕರಿಸಲಾಗದ ಮೇಲೆ ಅಂತಹಾ ಪೂಜೆ, ಧ್ಯಾನಗಳಿಂದ ಪ್ರಯೋಜನವೇನು? ದೇಹವನ್ನು ನಾನಾ ವಿಧವಾದ ವಸ್ತ್ರ, ಆಭರಣ, ಪ್ರಸಾಧನಗಳಿಂದ ಸಿಂಗರಿಸಿ ಅದನ್ನೇ ನಾವು ಸೌಂದರ್ಯವೆಂದುಕೊಂಡು ಬೀಗುತ್ತೇವೆ. ಆದರೆ ನಿಜವಾದ ಆತ್ಮ ಸೌಂದರ್ಯಕ್ಕೆ ಇಂತಹ ಯಾವುದೇ ಆಡಂಬರವೂ ಬೇಡ.

ಹಾಗಾದರೆ ಸಖೀ ಈ ಆತ್ಮಸೌಂದರ್ಯವೆಂದರೆ ಏನು? ಅದನ್ನು ವೃದ್ಧಿಸಿಕೊಳ್ಳುವುದು ಹೇಗೆ? ನಾವು ಒಳ್ಳೆಯದೆಂದು ನಂಬಿರುವ ತತ್ವಗಳು, ಮೌಲ್ಯಗಳು, ಗುಣಗಳು ಇವುಗಳ ಅಳವಡಿಕೆಯೇ ಆತ್ಮದ ಸಿಂಗಾರದೊಡವೆಗಳು. ಒಳ್ಳೆಯದನ್ನು ಕುರಿತು ಆಲೋಚಿಸುವ, ಒಳ್ಳೆಯದನ್ನು ಮಾಡುವ, ಒಳ್ಳೆಯ ರೀತಿಯಲ್ಲಿ ನಡೆಯುವ ಬದುಕಿಗೆ ಯಾವ ಸೋಗೂ ಬೇಕಿಲ್ಲ. ಇಂದಿನ ಬದುಕಿನ ಅಧೋಗತಿಗೆ ಕಾರಣವೇ ನಾವು. ಆತ್ಮವನ್ನು ನಿರ್ಲಕ್ಷಿಸಿರುವುದು ಬುದ್ಧಿಪ್ರಧಾನವಾದ, ವ್ಯಾವಹಾರಿಕ ಬದುಕೇ ನಮಗಿಂದು ಮಹತ್ವದ್ದಾಗಿರುವುದರಿಂದಲೇ ನಮ್ಮ ಸುತ್ತಲೂ ಅನಾಚಾರ ಹೆಚ್ಚಾಗಿ ಶಾಂತಿ ನೆಮ್ಮದಿಗಳು ಕಾಣೆಯಾಗಿವೆ.

ನಿಜವಾದ ಆತ್ಮಸೌಂದರ್ಯದ ಬಗೆಗೆ ಮನುಜ ತಿಳಿದುಕೊಂಡು ಎಚ್ಚೆತ್ತು ಆಡಂಬರದ ಹಾದಿಯನ್ನು ಬಿಟ್ಟು ಸತ್ಯದ ಹಾದಿಯಲ್ಲಿ ನಡೆಯತೊಡಗಿದಾಗ ನಿಜವಾಗಿ ನಾವು ‘ಆತ್ಮ’ ಹೊಂದಿದವರಾಗುತ್ತೇವೆ. ಇಂತಹ ಶಾಶ್ವತವಾದ ಆತ್ಮ ಸೌಂದರ್ಯವನ್ನು ಪಡೆಯುವೆಡೆಗೆ ಹಂತಹಂತವಾಗಿಯಾದರೂ ಸರಿ ನಾವು ಹೆಜ್ಜೆ ಹಾಕೋಣ. ಅಲ್ಲವೇ ಸಖೀ?
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...