Home / ಕವನ / ಕವಿತೆ / ಮಹಾನಗರ ರಸ್ತೆ – ಮರುಚೇತನ

ಮಹಾನಗರ ರಸ್ತೆ – ಮರುಚೇತನ

ಮಹಾನಗರದ ಮುಖ್ಯ ರಸ್ತೆಯಾಗಿದ್ದು
ನನ್ನ ಅಸ್ತಿತ್ವಕ್ಕೆ ನಾನೇ ಶಪಿಸುತ್ತಾ
ತಲೆ ಎತ್ತುವ ಧನ್ಯತೆ ಕಳೆದಿತ್ತು.

ಬಾಯಾರಿದ ಭೂ ಒಡಲು ಹಸಿರಾಗಿಸಲು
ಧಾರಾಕಾರ ವರುಣನ ವಿಜಯೋತ್ಸವ
ತಗ್ಗು-ಗುಂಡಿಗಳಲಿ ನನ್ನ ದೇಹದ ವಸ್ತ್ರಾಪಹರಣ

ಮಾನ ಬಿಟ್ಟವರು ನನ್ನ ಮಾನ ಮುಚ್ಚಲು
ಬರಿ ಉಸುಕು-ಮಣ್ಣು ಚೆಲ್ಲುತ ಗುಳಂವಾಗಿಸುವರು
ಆಡಳಿತ-ಅಧಿಕಾರಿಗಳು ನೂರು ಸಾವಿರ ಲಕ್ಷ ಲಕ್ಷ

ಸ್ವಾಭಿಮಾನ ಮರೆತ ನಗರವಾಸಿಗಳು
ನನ್ನ ಮೈಮೇಲೆ ನಡೆದಾಡುವಾಗೊಮ್ಮೆ
ಏಳುತ್ತ-ಬೀಳುತ ಹಾಕುವರು ಶಾಪ-ತಾಪ

ತಮಗಾದ ಅನ್ಯಾಯ ಪ್ರತಿಭಟಿಸದಿರುವ
ನಗರವಾಸಿ ನಾಗರಿಕ ವರ್ಗದ
ಭವಿಷ್ಯ ಮೆಲುಕಾಡಿಸುತ್ತಾ ಮೈಚಾಚಿ ಮಲಗಿರುವೆ

ಸ್ವಾತಂತ್ರ್‍ಯ ಸಿಕ್ಕು ಅರ್ಧಶತಕವಾದರೂ
ನಡೆದಿರುವವು ನನ್ನಿಹ ಮೈಮೇಲೆ
ಅತ್ಯಾಚಾರ ಭಾಷೆ-ಕೋಮು ದ್ವೇಷದ ಇರಿತಗಳು

ಕಾರ್ಮಿಕರ ಮೌನ ಹೋರಾಟ – ಮುಷ್ಕರ
ಅಬಲೆಯರ ಆರ್ತನಾದ ಅಪಘಾತ ಗಲಭೆಗಳ
ರಕ್ತದ ಮಡುವಿನಲ್ಲಿ ನರಳಾಟ ಕೇಳುತ ಮೌನವಾಗಿರುವೆ.

ಹುಸಿ ಭರವಸೆ ನೊಂದವರ ನಿಟ್ಟುಸಿರು
ಕೇಳುತ ನೋಡುತ ಬೇಸತ್ತು ಮಲಗಿದ್ದೆ
ಪುಳಕಿತಗೊಂಡೆ ಈ ದಿನ ವೀರಯೋಧರ ಶವಯಾತ್ರೆ ತಿಳಿದು

ದಶ ದಶಕಗಳಿಂದ ಬರಿ ಡಂಬಾಚಾರದ
ನಯ – ವಂಚಕರಿಂದ ತುಳಿಸಿಕೊಂಡು ಸಾಕಾಗಿದ್ದ
ಮೈಮನ ಕಾತರಿಸುತ್ತಿದೆ ವೀರಯೋಧನ ಸ್ಪರ್ಶಕ್ಕಾಗಿ

ಮಾತೃ-ಭೂಮಿಯ ಗಡಿ-ಶಿಖರಗಳಲಿ
ಮಡಿದ-ಮಕ್ಕಳು ಮನೆ ಎನ್ನದೆ
ರಾಷ್ಟ್ರಪ್ರೇಮದ ದೃಢತೆಯಲಿ ಶತ್ರುಗಳ ಸದ್ದಡಗಿಸಿ
ಜೀವ ನೀಡಿದ ವೀರ ಆ ಧೀರ ಸೈನಿಕರು

ನಗರ-ನಾಗರಿಕ ಸನ್ಮಾನ-ಹೆಮ್ಮೆಯ ದುಃಖದಿ ಕಣ್ಣೀರು
ಶವಪೆಟ್ಟಿಗೆಯಡಿ ವೀರ ಜವಾನರು
ಕೊನೆ ಮೆರವಣಿಗೆ ಮೈಮೇಲೆ ಸಾಗುವ ಕ್ಷಣ
ರೋಮಾಂಚನದಿ ದೇಹದ ಕಣ ಕಣವೂ ಧನ್ಯ ಧನ್ಯ

ಹೊತ್ತವರು-ಹೆತ್ತವರೆಲ್ಲಾ ಅತ್ತರು ಹೆಮ್ಮೆಯಲಿ
ಸಾಗಿತ್ತು ರಸ್ತೆಯುದ್ದಕ್ಕೂ ಅಂತಿಮ ಶವ ಯಾತ್ರೆ-ಜಾತ್ರೆ
`ಜವಾನ-ಅಮರ ರಹೇ’ ಮುಗಿಲು ಮುಟ್ಟಿದ ಘೋಷಣೆ

ತಾಯಿನಾಡಿಗಾಗಿ ಮಡಿದ ವೀರ ಜವಾನರ ಸ್ಪರ್ಶ
ನನ್ನ ಅಸ್ತಿತ್ವದ ಸಾರ್ಥಕತೆಗೆ ಜೀವ ತುಂಬಿತು
ಮರು ಚೇತನದಿ ಈ ತನುವು ಧನ್ಯತೆ ಪಡೆದಿತ್ತು.

*****

 

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...