Home / ಲೇಖನ / ಇತರೆ / ಒಂದು ಒಳ್ಳೆಯ ಪೊರಕೆ !

ಒಂದು ಒಳ್ಳೆಯ ಪೊರಕೆ !

ಪ್ರಿಯ ಸಖಿ,
ಇಂದು
ನಮ್ಮ ದೇಶದ
ಬಹು ಮುಖ್ಯ ಅರಕೆ
ಒಂದು
ಒಳ್ಳೆಯ ಪೊರಕೆ !
ಮೊನ್ನೆ ಏನೋ ಓದುತ್ತಿದ್ದಾಗ ಕಣ್ಣಿಗೆ ಬಿದ್ದ ಬಿ. ಆರ್. ಲಕ್ಷ್ಮಣರಾವ್ ಅವರ ಈ ಹನಿಗವನ ತಟ್ಟನೆ ಗಮನಹಿಡಿದಿರಿಸಿತು. ಈ ಪುಟ್ಟ ಪದ್ಯದಲ್ಲಿ ಎಷ್ಟೊಂದು ಅರ್ಥ ತುಂಬಿದೆಯೆಲ್ಲವೇ ಸಖೀ?

ಇಂದು ದೇಶದ ತುಂಬೆಲ್ಲಾ ಭ್ರಷ್ಟಾಚಾರ, ಲಂಚಗುಳಿತನ, ಜಾತೀಯತೆ, ಸ್ವಾರ್ಥ ರಾಜಕಾರಣ, ಅನಕ್ಷರತೆ, ಮೌಢ್ಯ, ಪರಸ್ಪರ ಕಚ್ಚಾಟ…. ಇತ್ಯಾದಿ ಏನೆಲ್ಲಾ ಕಸಗಳು ತುಂಬಿ ಹೋಗಿವೆ. ಇವಗಳ ಜೊತೆಗಿದ್ದು ನಾವೂ ಇದರಲ್ಲಿ ಒಂದಾಗಿ ಹೋಗಿದ್ದೇವೆ. ದೇಶದ ಪರಿಸ್ಥಿತಿಯ ಬಗೆಗೆ ಆಗೀಗ ಗೊಣಗುಟ್ಟಿಕೊಂಡರೂ ‘ನಮ್ಮೊಬ್ಬರಿಂದ ಏನು ಸಾಧ್ಯ’ ಎಂದು ಸಮಜಾಯಿಷಿ ಮಾಡಿಕೊಂಡು ಬಿಡುತ್ತೇವೆ. ‘ದೇಶದ ಕುರಿತು ನನಗೇನು’ ಎಂದು ಜನ ನಿರ್ಲಕ್ಷ ತೋರಲಾರಂಭಿಸಿದರೆ ಆ ದೇಶಕ್ಕೆ ಭವಿಷ್ಯವೇ ಇಲ್ಲ ಎನ್ನುತ್ತಾನೆ ರೂಸೋ.

ಈ ಕಸವನ್ನು ಗುಡಿಸಲು ಎಲ್ಲಿಂದಲಾದರೂ ಯಾರಾದರೂ ಪ್ರಾರಂಭಿಸಲೇ ಬೇಕಲ್ಲವೇ? ಅದಕ್ಕೆ ಬೇಕಿರುವುದು ಒಂದು ಒಳ್ಳೆಯ ಪೊರಕೆ ಎಂದಿದ್ದಾರೆ ಕವಿ. ಹಾಗಾದರೆ ಆ ಪೊರಕೆ ಯಾವುದು? ನನಗನ್ನಿಸುವುದು ಬಹುಶಃ ‘ಜಾಗೃತಿ’ ಎಂಬ ಪೊರಕೆಯೇ ಇದಕ್ಕೆ ಉತ್ತರ. ಜಾಗೃತಿ ಎಂಬ ಪೊರಕೆಗೆ ಶಿಕ್ಷಣ, ದೇಶಪ್ರೇಮ, ವೈಚಾರಿಕ ಪ್ರಜ್ಞೆ ನಿಸ್ವಾರ್ಥತೆ, ವಿವೇಚನೆ, ನಂಬಿಕೆ, ಶ್ರದ್ಧೆ, ಆತ್ಮಸ್ಥೈರ್ಯ….. ಇತ್ಯಾದಿ ಪೊರಕೆ ಕಡ್ಡಿಗಳೇ ಬಲ! ಇಂತಹ ನೂರಾರು ಕಡ್ಡಿಗಳು ಸೇರಿ ತಾನೆ ‘ಜಾಗೃತಿ’ ಎಂಬ ಒಂದು ಪೊರಕೆಯಾಗುವುದು?

ನಿಜಕ್ಕೂ ನಾವು ಈಗ ಮಾಡಬೇಕಿರುವುದು ಇಂತಹ ಪೊರಕೆ ಕಡ್ಡಿಗಳ ಸೃಷ್ಟಿ. ಇದು ಸುಲಭವೂ ಅಲ್ಲ. ಅಸಾಧ್ಯವೂ ಅಲ್ಲ! ಮಾನವ ಮನಸ್ಸು ಮಾಡಿದರೆ ಯಾವುದು ತಾನೇ ಸಾಧ್ಯವಿಲ್ಲ? ಎಲ್ಲಕ್ಕೂ ಮುಖ್ಯವಾಗಿ ಮನಸ್ಸು ಮಾಡಬೇಕಷ್ಟೇ! ದಿಟ್ಟ ಮನಸ್ಸಿನಿಂದ ಪುಟ್ಟ ಹೆಜ್ಜೆ ಇಡುತ್ತಲೇ ಇಂತಹ ಪೊರಕೆ ಕಡ್ಡಿಗಳನ್ನು ಸೃಷ್ಟಿಸಿದರೆ ಪೊರಕೆ ತಾನಾಗಿ ಎಲ್ಲ ಕಡೆಯಿಂದಲೂ ಏಳುತ್ತದೆ. ತಾನೇ ಕಸಗುಡಿಸುತ್ತದೆ. ಸ್ವಚ್ಚ ಮಾಡುತ್ತದೆ. ಇಂತಹ ಒಂದು ಒಳ್ಳೆಯ ಪೊರಕೆಗಾಗಿ ಒಂದು ಪೊರಕೆ ಕಡ್ಡಿಯನ್ನಾದರೂ ಸೃಷ್ಟಿಸುವುವಕ್ಕೆ ನಾವು ಪ್ರಯತ್ನಿಸಿದರೆ ಅದಕ್ಕಿಂತಾ ಒಳ್ಳೆಯ ಕೆಲಸ ಇನ್ನಾವುದಿದೆ? ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...