Home / ಕವನ / ಕವಿತೆ / ಮರಕುಟಿಗ

ಮರಕುಟಿಗ

ಕತ್ತಲಿಗೆ ಕತ್ತರಿ ಬಿದ್ದು ಇಷ್ಟಿಷ್ಟೇ ಹರಿದು
ಚಿಗುರೊಡೆದ ಮರದಲ್ಲಿ ಚಿಲಿಪಿಲಿ; ಒಂದಕ್ಕೊಂದು ಸೇರಿ
ಅಸ್ಪಷ್ಟ ಗದ್ದಲ: ಕಣ್ಣ ತೆರೆಯುವ ತುರಿಕೆ;
ಮನೆಯ ಒಳಹೊರಗೆಲ್ಲ ಬಳೆ ಸದ್ದು ಪೊರಕೆ.
ಮನದ ಮೂಲದಲ್ಲಿ ಬೇರಿಳಿದ ಮರ
ಗೀರಿದರೆ ಚಿಲ್ಲೆನ್ನುವ ರಸ; ಬೆಳವ ರಭಸ.
ಬೆಚ್ಚನೆಯ ಬಿಸಿಲಿಗೆ ಮಡುಗಟ್ಟಿದ್ದ ಮಂಜು
ಹತ್ತು ಕಡೆ ಹರಿಯುವುತ್ಸಾಹ.
ಗಿಡಗೆಂಟೆ ಮುಳ್ಳುಪೊದೆ ಉಬ್ಬುತಗ್ಗುಗಳ
ಸಮತಟ್ಟುಗೊಳಿಸಬೇಕೆಂಬ ಬುಲ್ಡೋಜರ್ ಬುದ್ದಿ.
ಹೀಗೆ ಬೆಳೆಯುತ್ತ ಬಂದದ್ದೇ ಒಂದು ಸುದ್ದಿ-
ಯಾಗಿ ಮರದ ಮೇಲೆಲ್ಲ ಟಕಟಕ ಸದ್ದು
ನೀಲಿ ಹಾಳೆಯ ಮೇಲೆ ಅಚ್ಚೊತ್ತಿದ ಹದ್ದು
ಮರಕುಟಿಗಗಳ ಸದ್ದು ನಿಲ್ಲಲಿಲ್ಲ;
ಚುಚ್ಚುವೆಚ್ಚರ ಹಕ್ಕಿ ಹಾರಲಿಲ್ಲ.

ಮೈನೆರೆದ ಮರದಲ್ಲಿ ಮೋಹಕುಟಿಗ
ಕಿತ್ತು ತಿನ್ನುವ ಕತ್ತುಬಳಸುವ ಹತ್ತಾರು ಸಲಗ
ಹಂಟರನು ಹಿಡಿದಾಗ ಹಲಗೆ ಬಡಿತ
ಕಾಲಕುಣಿಸುವ ಕುದುರೆ ಕೆನೆತ
ಹಂಟರಿನ ಮೈಯಲ್ಲಿ ಸಂಗೀತ ಸ್ವಿಚ್ಚೊತ್ತಿ
ಮೆಲ್ಲಗೆ ಮತ್ತೇರಿದ ಹೆಡೆಯ ನಾಗ.
ಅಚ್ಚೊತ್ತಿದ್ದ ಹದ್ದು ಎಚ್ಚೆತ್ತು ಬಡಿದಾಗ
ಸುತ್ತಮುತ್ತಲ ಮೋಡ ಕಿರುಚಿ ಕಣ್ಣೀರು.
ಅತ್ತಲಿಂದಿತ್ತ ಇತ್ತಲಿಂದಿತ್ತ ರಪರಪನೆ ಬಡಿವ
ಪುಕ್ಕಗಳಿಗೆ ಸಿಕ್ಕಿ ಮರದ ಮೈಯಲ್ಲಿ ದಿಗಿಲು!
ಹದ್ದಿನಾರ್ಭಟದಲ್ಲಿ ಅತ್ತು ಕರೆಯುವ ಮಹಲು
ಬೇರಿಗೆ ಭೈರಿಗೆ ಹಿಡಿವ ಭೋರ್ಗರೆವ ಹೊನಲು.
ದಿಕ್ಕು ಕಾಣದ ಹಕ್ಕಿಗಳು ಮರದಲ್ಲೆ ಮುಲುಗುಟ್ಟಿ
ಮತ್ತದೇ ಕೆಲಸ ಟಕ ಟಕ ಸದ್ದು
ಮೋಹದಲ್ಲೆ ಮೈದಳೆದ ಎಚ್ಚರದ ಗುದ್ದು.
ಮಣ್ಣ ಮೈಥುನದಲ್ಲಿ ಫಲ ಕಾಣುವ ಛಲ ಮರಕ್ಕೆ
ತಲೆಯಲ್ಲಿ ಒಂದೇ ಸಮ ಕುಕ್ಕುವ ಬಯಕೆ.
ಹಾಳು ಬಾವಿಯ ಹೂಣು ಆಳುದ್ದ ತುಂಬಿ
ಸಲಿಕೆ ಗುದ್ದಲಿಗೆ ಎಡೆಬಿಡದ ಕೆಲಸ
ಹೊಸ ಮಂಕರಿಗಳಲ್ಲಿ ಮಣ್ಣು ತುಂಬುವ ರಭಸ.
ಬೆವರು ಬಸಿದು ಹೊಸ ವರಸೆಯಲ್ಲಿ ಹತ್ತುವಾಗ
ದಡದಲ್ಲಿ ಬಾವಿಯೊಡೆಯರ ಪಹರೆ; ಕತ್ತಿಝಳಪು.
ನೆಚ್ಚಿ ನಡೆದವನು ಬೆಚ್ಚಿ ತಲೆತುಂಬ ಕುಟಿಗ-
ಎಚ್ಚರದ ಸಲಗ; ದಾರಿ ಹೊಳಪು.
ಜಗ್ಗದೆ ಕುಗ್ಗದೆ ನುಗ್ಗುತ್ತ ನಡೆದಾಗ
ಬಾವಿಯೊಡಯರಲೆಷ್ಟೋ ಬಂಧು ಬಳಗ!
ನಿಂತು ನೋಡನೋಡುತ್ತ ಸಾವರಿಸಿಕೊಂಡು
ಧ್ಯೇಯ ಧುಮ್ಮಿಕ್ಕಿ ಕರೆಂಟು ದೃಷ್ಟಿ
ಕತ್ತಿಗಳಿಗೆ ಕತ್ತು ಕೊಡದ ಮಲೆತ ಮುಷ್ಟಿ
ಮರದಲ್ಲಿ ಚೈತನ್ಯ ಸೂರ್‍ಯ ಚುರುಕು-
ಹಕ್ಕಿಯಚ್ಚರ ಚಬುಕು.

ಅದುರಿದೊಡೆಯರಿಂದ ದಡಕಡಿವ ಕಾರ್ಯ
ಮೇಲೆ ಮುಸುಕು ಮುಚ್ಚಿದ ಸೂರ್ಯ
ಬಿದ್ದರೂ ಬಿಡದೆ ಬೆನ್ನು ತಿರುಗಿಸದೆ ದಡದೆಡೆಗೆ ಬಂದಾಗ ಬೆದರುಗೊಂಬೆಗಳಿಗೆಲ್ಲ ಬೆರಗು.

ಹಾಳುಬಾವಿಯ ಆಳ ನೋಡಿ ನಕ್ಕಾಗ
ನಾಚಿಕೆಯೆ ನೀರಾಗಿ ತಳ ತೋಯುತಿತ್ತು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...