Home / ಲೇಖನ / ಇತರೆ / ಬಾಳಿಕೆ

ಬಾಳಿಕೆ

ಪ್ರಿಯ ಸಖಿ,
ಸಾವು ನಿಶ್ಚಿತವೆಂದು ತಿಳಿದೂ ಮಾನವ ತನ್ನ ಬದುಕಿನ ಕೊನೆಯ ಕ್ಷಣದವರೆಗೂ ತಾನು ಶಾಶ್ವತ. ತನ್ನಿಂದಲೇ ಪ್ರಪಂಚವೆಲ್ಲಾ ಎಂದುಕೊಂಡು ಇರುತ್ತಾನೆ. ಆದರೆ ಅವನು ಸತ್ತು ಹೆಣವಾದ ನಂತರ ಏತಕ್ಕೆ ಉಪಯೋಗಕ್ಕೆ ಬರುತ್ತಾನೆ? ಕವಿ ಜರಗನಹಳ್ಳಿ ಶಿವಶಂಕರ್ ಅವರು ತಮ್ಮ ಬಾಳಿಕೆ ಎಂಬ ಹನಿಗವನದಲ್ಲಿ.
ಹತ್ತಾರು ವರುಷ
ನೆರಳಾಗಿ ನಿಂತ ಮರ
ತೊಲೆಯಾಗಿ ಉಳಿಯಿತು
ನೂರಾರು ವರುಷ.
ನೂರು ವರುಷ
ಆಳಿದ ಅರಸ
ಉಳಿಯಲಿಲ್ಲ ಹೆಣವಾಗಿ
ಮೂರು ದಿವಸ
ಎನ್ನುತ್ತಾರೆ. ಎಷ್ಟು ನಿಜವಾದ ಮಾತಲ್ಲವೇ ಸಖಿ? ಮರ ಇದ್ದರೂ ಉಪಯೋಗಕ್ಕೆ ಬರುತ್ತದೆ. ಸತ್ತರೂ ಉಪಯೋಗಕ್ಕೆ ಬರುತ್ತದೆ. ಮಾನವ ಸತ್ತ ನಂತರವಂತೂ ಯಾವುದಕ್ಕೂ ಉಪಯೋಗಕ್ಕೆ ಬರುವುದಿಲ್ಲ. ಆದರೆ ಬದುಕಿದ್ದಾಗಲಾದರೂ ಇತರರಿಗೆ, ಸಮಾಜಕ್ಕೆ ಉಪಯೋಗವಾಗುವಂತೆ ಬದುಕಿದರೆ ಅದಕ್ಕಿಂತಾ ಧನ್ಯತೆ ಬೇರೆಲ್ಲಿದೆ.

ಈ ಮನುಜ ಜನ್ಮದಲ್ಲಿ ಹುಟ್ಟಿ ಬಂದ ಮೇಲೆ ಅದನ್ನು ಸಾರ್ಥಕಗೊಳಿಸುವಂತೆ ಬದುಕುವುದು ಮನುಜನ ಕರ್ತವ್ಯ. ವ್ಯಕ್ತಿಗಳು ಅಳಿದರೂ ಅವರು ಮಾಡಿದ ಕೆಲಸ ಇತಿಹಾಸದ ಪುಟಗಳಲ್ಲಿ ದಾಖಲಾಗುವುದಂತೂ ಖಂಡಿತಾ. ಹಾಗಾದರೆ ಈ ಸಾವಿನ ಕಬಂಧ ಬಾಹುಗಳಲ್ಲಿ ಸಿಲುಕದೆ ಅವಿನಾಶಿಯಾಗಿ ಉಳಿಯುವುದು ಯಾವುದು? ಕಥೆಗಾರ, ಚಿಂತಕ, ಚದುರಂಗರು ‘ಮಾನವನ ಬದುಕಿನಲ್ಲಿ ಮರಣವೇ ಅತ್ಯಂತ ಪ್ರಮುಖವಾದ ಸತ್ಯವಾದ ಸಂಗತಿ, ಉಳಿದೆಲ್ಲಾ ವಿಷಯಗಳೂ ಗೌಣ. ಈ ಸಾವಿನ ಮರುಳುಗಾಡಿನಲ್ಲಿ ಅವಿನಾಶಿಯಾಗಿ ಉಳಿಯಬಲ್ಲ ಒಂದೇ ಒಂದು ವಸ್ತುವೆಂದರೆ-ಕಲೆ’ ಎನ್ನುತ್ತಾರೆ.

ಹೌದಲ್ಲವೇ ಸಖಿ ಯಾವ ಕಲೆಗೂ ಸಾವೆಂಬುದಿಲ್ಲ. ಅವಿನಾಶಿ ಕಲೆಯ ಹೆಸರಿನೊಂದಿಗೆ, ಕಲೆಗಾರ ಸತ್ತರೂ ಜೀವಂತವಾಗುಳಿಯುತ್ತಾನೆ! ನಿಜವಾದ ಬದುಕಿನ
ಸಾರ್ಥಕತೆ ಇರುವುದೇ ಇಲ್ಲಲ್ಲವೇ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...