Home / ಲೇಖನ / ಇತರೆ / ಬಾಳಿಕೆ

ಬಾಳಿಕೆ

ಪ್ರಿಯ ಸಖಿ,
ಸಾವು ನಿಶ್ಚಿತವೆಂದು ತಿಳಿದೂ ಮಾನವ ತನ್ನ ಬದುಕಿನ ಕೊನೆಯ ಕ್ಷಣದವರೆಗೂ ತಾನು ಶಾಶ್ವತ. ತನ್ನಿಂದಲೇ ಪ್ರಪಂಚವೆಲ್ಲಾ ಎಂದುಕೊಂಡು ಇರುತ್ತಾನೆ. ಆದರೆ ಅವನು ಸತ್ತು ಹೆಣವಾದ ನಂತರ ಏತಕ್ಕೆ ಉಪಯೋಗಕ್ಕೆ ಬರುತ್ತಾನೆ? ಕವಿ ಜರಗನಹಳ್ಳಿ ಶಿವಶಂಕರ್ ಅವರು ತಮ್ಮ ಬಾಳಿಕೆ ಎಂಬ ಹನಿಗವನದಲ್ಲಿ.
ಹತ್ತಾರು ವರುಷ
ನೆರಳಾಗಿ ನಿಂತ ಮರ
ತೊಲೆಯಾಗಿ ಉಳಿಯಿತು
ನೂರಾರು ವರುಷ.
ನೂರು ವರುಷ
ಆಳಿದ ಅರಸ
ಉಳಿಯಲಿಲ್ಲ ಹೆಣವಾಗಿ
ಮೂರು ದಿವಸ
ಎನ್ನುತ್ತಾರೆ. ಎಷ್ಟು ನಿಜವಾದ ಮಾತಲ್ಲವೇ ಸಖಿ? ಮರ ಇದ್ದರೂ ಉಪಯೋಗಕ್ಕೆ ಬರುತ್ತದೆ. ಸತ್ತರೂ ಉಪಯೋಗಕ್ಕೆ ಬರುತ್ತದೆ. ಮಾನವ ಸತ್ತ ನಂತರವಂತೂ ಯಾವುದಕ್ಕೂ ಉಪಯೋಗಕ್ಕೆ ಬರುವುದಿಲ್ಲ. ಆದರೆ ಬದುಕಿದ್ದಾಗಲಾದರೂ ಇತರರಿಗೆ, ಸಮಾಜಕ್ಕೆ ಉಪಯೋಗವಾಗುವಂತೆ ಬದುಕಿದರೆ ಅದಕ್ಕಿಂತಾ ಧನ್ಯತೆ ಬೇರೆಲ್ಲಿದೆ.

ಈ ಮನುಜ ಜನ್ಮದಲ್ಲಿ ಹುಟ್ಟಿ ಬಂದ ಮೇಲೆ ಅದನ್ನು ಸಾರ್ಥಕಗೊಳಿಸುವಂತೆ ಬದುಕುವುದು ಮನುಜನ ಕರ್ತವ್ಯ. ವ್ಯಕ್ತಿಗಳು ಅಳಿದರೂ ಅವರು ಮಾಡಿದ ಕೆಲಸ ಇತಿಹಾಸದ ಪುಟಗಳಲ್ಲಿ ದಾಖಲಾಗುವುದಂತೂ ಖಂಡಿತಾ. ಹಾಗಾದರೆ ಈ ಸಾವಿನ ಕಬಂಧ ಬಾಹುಗಳಲ್ಲಿ ಸಿಲುಕದೆ ಅವಿನಾಶಿಯಾಗಿ ಉಳಿಯುವುದು ಯಾವುದು? ಕಥೆಗಾರ, ಚಿಂತಕ, ಚದುರಂಗರು ‘ಮಾನವನ ಬದುಕಿನಲ್ಲಿ ಮರಣವೇ ಅತ್ಯಂತ ಪ್ರಮುಖವಾದ ಸತ್ಯವಾದ ಸಂಗತಿ, ಉಳಿದೆಲ್ಲಾ ವಿಷಯಗಳೂ ಗೌಣ. ಈ ಸಾವಿನ ಮರುಳುಗಾಡಿನಲ್ಲಿ ಅವಿನಾಶಿಯಾಗಿ ಉಳಿಯಬಲ್ಲ ಒಂದೇ ಒಂದು ವಸ್ತುವೆಂದರೆ-ಕಲೆ’ ಎನ್ನುತ್ತಾರೆ.

ಹೌದಲ್ಲವೇ ಸಖಿ ಯಾವ ಕಲೆಗೂ ಸಾವೆಂಬುದಿಲ್ಲ. ಅವಿನಾಶಿ ಕಲೆಯ ಹೆಸರಿನೊಂದಿಗೆ, ಕಲೆಗಾರ ಸತ್ತರೂ ಜೀವಂತವಾಗುಳಿಯುತ್ತಾನೆ! ನಿಜವಾದ ಬದುಕಿನ
ಸಾರ್ಥಕತೆ ಇರುವುದೇ ಇಲ್ಲಲ್ಲವೇ?
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...