Home / ಲೇಖನ / ಇತರೆ / ಪ್ರೀತಿ ಇಲ್ಲದ ಮೇಲೆ

ಪ್ರೀತಿ ಇಲ್ಲದ ಮೇಲೆ

Hrudayaಪ್ರಿಯ ಸಖಿ,
ನಮ್ಮ ಸಮಾಜದಲ್ಲಿದ್ದ ಉನ್ನತ ಮೌಲ್ಯಗಳು ನಿರಂತರವಾಗಿ ಅಧೋಗತಿಗಿಳಿಯುವುದನ್ನು ಕಾಣುತ್ತಿದ್ದೇವೆ. ಇದಕ್ಕೆ ಕಾರಣವೇನು? ಹುಡುಕಹೊರಟರೆ ಸಾವಿರಾರು ಕಾರಣಗಳು ಸಿಕ್ಕಬಹುದು. ಆದರೆ ಕವಿ ಜಿ. ಎಸ್. ಶಿವರುದ್ರಪ್ಪನವರಿಗೆ ಹೊಳೆದಿರುವ ಒಂದೇ ಒಂದು ಮುಖ್ಯ ಕಾರಣ ನೋಡು.

ಪ್ರೀತಿ ಇಲ್ಲದ ಮೇಲೆ
ಹೂವು ಅರಳೀತು ಹೇಗೆ?
ಮೋಡ ಕಟ್ಟೀತು ಹೇಗೆ?
ಹನಿಯೊಡೆದು ಕೆಳಗಿಳಿದು
ನೆಲಕ್ಕೆ ಹಸಿರು ಮೂಡೀತು ಹೇಗೆ?

ಕವಿಯ ಭಾವನೆ ಎಷ್ಟೊಂದು ಅರ್ಥಗರ್ಭಿತವಾಗಿದೆಯಲ್ಲವೇ ಸಖಿ? ನಮ್ಮಗಳ ನಡುವೆ ಪ್ರೀತಿ ಇಲ್ಲದಿರುವುದೇ ಈ ಎಲ್ಲ ಅಧೋಗತಿಗೆ ಕಾರಣವಲ್ಲವೇ ಪ್ರೀತಿಯೊಂದಿದ್ದರೆ ಬೇರೆಲ್ಲವನ್ನು ಮಾಫಿ ಮಾಡಬಹುದು ಎಂತಹ ಕಷ್ಟವಿದ್ದರೂ ಹೊಂದಾಣಿಕೆ ಮಾಡಿಕೊಳ್ಳಬಹುದು. ಹೃದಯ ವಿಶಾಲವಾಗುತ್ತಾ ಹೋಗಿ ಎಲ್ಲೆಡೆಯೂ ಪ್ರೀತಿಯನ್ನೇ ತುಂಬಬಹುದು. ಆದರೆ ……… ಅದೇ ಇಲ್ಲದಿದ್ದರೇ? ಮನುಷ್ಯನಾಗಿದ್ದು ಏನು ಪ್ರಯೋಜನ?

ಕವನದ ಕೊನೆಯಲ್ಲಿ ಕವಿ ಅತ್ಯಂತ ಮಾರ್ಮಿಕವಾಗಿ ನಮ್ಮ ಮುಂದೆ ಪ್ರಶ್ನೆಗಳನ್ನಿಡುತ್ತಾರೆ.
ಪ್ರೀತಿ ಇಲ್ಲದ ಮೇಲೆ
ಸಂಶಯದ ಗಡಿಗಳುದ್ದಕ್ಕೂ,
ಸಿಡಿಗುಂಡುಗಳ ಕದನ ನಿಂತೀತು ಹೇಗೆ ?
ಜಾತಿಮತಭಾಷೆ ಬಣ್ಣಗಳ ಗೋಡೆಯ ನಡುವೆ
ನರಳುವ ಪಾಡು ತಪ್ಪೀತು ಹೇಗೆ ?
ನಮ್ಮ ನಿಮ್ಮ ಮನಸ್ಸು
ಮರುಭೂಮಿಯಾಗದ ಹಾಗೆ
ತಡೆಗಟ್ಟುವುದು ಹೇಗೆ ?
ಹೌದಲ್ಲವೇ ಸಖಿ? ಪ್ರೀತಿ-ಸ್ನೇಹಗಳಿಲ್ಲದೇ ನಮ್ಮ ಹೃದಯ ಬೆಂಗಾಡಾಗುವುದನ್ನು ತಪ್ಪಿಸುವದು ಹೇಗೆ? ಬರೀ ಸ್ವಾರ್ಥ, ಸಂಕುಚಿತ ಮನೋಭಾವ, ದ್ವೇಷ, ಅಸೂಯೆಗಳನ್ನೇ ತುಂಬಿಕೊಂಡು ಬರಡಾಗುತ್ತಿರುವ ನಮ್ಮೆಲ್ಲರ ಹೃದಯಗಳಲ್ಲೂ ಪ್ರೀತಿಯು ಚಿಗುರೊಡೆಯಬೇಕು. ಮರವಾಗಿ ಬೆಳೆಯಬೇಕು. ದಿಗಂತಕ್ಕೇರಿ ನಿಂತು ವಿಶ್ವವ್ಯಾಪಿಯಾಗಬೇಕು. ಆಗ ನಾವೆಲ್ಲರೂ ನಿಜವಾದ ಅರ್ಧದಲ್ಲಿ ಮಾನವರಾಗುತ್ತೇವೆ. ಇಲ್ಲದಿದ್ದರೆ ಭಾವನೆಗಳಿಲ್ಲದ ಬರಿಯ ಯಂತ್ರ ಮಾನವರಾಗುತ್ತೇವೆ! ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...