Home / ಲೇಖನ / ಇತರೆ / ಪ್ರೀತಿ ಇಲ್ಲದ ಮೇಲೆ

ಪ್ರೀತಿ ಇಲ್ಲದ ಮೇಲೆ

Hrudayaಪ್ರಿಯ ಸಖಿ,
ನಮ್ಮ ಸಮಾಜದಲ್ಲಿದ್ದ ಉನ್ನತ ಮೌಲ್ಯಗಳು ನಿರಂತರವಾಗಿ ಅಧೋಗತಿಗಿಳಿಯುವುದನ್ನು ಕಾಣುತ್ತಿದ್ದೇವೆ. ಇದಕ್ಕೆ ಕಾರಣವೇನು? ಹುಡುಕಹೊರಟರೆ ಸಾವಿರಾರು ಕಾರಣಗಳು ಸಿಕ್ಕಬಹುದು. ಆದರೆ ಕವಿ ಜಿ. ಎಸ್. ಶಿವರುದ್ರಪ್ಪನವರಿಗೆ ಹೊಳೆದಿರುವ ಒಂದೇ ಒಂದು ಮುಖ್ಯ ಕಾರಣ ನೋಡು.

ಪ್ರೀತಿ ಇಲ್ಲದ ಮೇಲೆ
ಹೂವು ಅರಳೀತು ಹೇಗೆ?
ಮೋಡ ಕಟ್ಟೀತು ಹೇಗೆ?
ಹನಿಯೊಡೆದು ಕೆಳಗಿಳಿದು
ನೆಲಕ್ಕೆ ಹಸಿರು ಮೂಡೀತು ಹೇಗೆ?

ಕವಿಯ ಭಾವನೆ ಎಷ್ಟೊಂದು ಅರ್ಥಗರ್ಭಿತವಾಗಿದೆಯಲ್ಲವೇ ಸಖಿ? ನಮ್ಮಗಳ ನಡುವೆ ಪ್ರೀತಿ ಇಲ್ಲದಿರುವುದೇ ಈ ಎಲ್ಲ ಅಧೋಗತಿಗೆ ಕಾರಣವಲ್ಲವೇ ಪ್ರೀತಿಯೊಂದಿದ್ದರೆ ಬೇರೆಲ್ಲವನ್ನು ಮಾಫಿ ಮಾಡಬಹುದು ಎಂತಹ ಕಷ್ಟವಿದ್ದರೂ ಹೊಂದಾಣಿಕೆ ಮಾಡಿಕೊಳ್ಳಬಹುದು. ಹೃದಯ ವಿಶಾಲವಾಗುತ್ತಾ ಹೋಗಿ ಎಲ್ಲೆಡೆಯೂ ಪ್ರೀತಿಯನ್ನೇ ತುಂಬಬಹುದು. ಆದರೆ ……… ಅದೇ ಇಲ್ಲದಿದ್ದರೇ? ಮನುಷ್ಯನಾಗಿದ್ದು ಏನು ಪ್ರಯೋಜನ?

ಕವನದ ಕೊನೆಯಲ್ಲಿ ಕವಿ ಅತ್ಯಂತ ಮಾರ್ಮಿಕವಾಗಿ ನಮ್ಮ ಮುಂದೆ ಪ್ರಶ್ನೆಗಳನ್ನಿಡುತ್ತಾರೆ.
ಪ್ರೀತಿ ಇಲ್ಲದ ಮೇಲೆ
ಸಂಶಯದ ಗಡಿಗಳುದ್ದಕ್ಕೂ,
ಸಿಡಿಗುಂಡುಗಳ ಕದನ ನಿಂತೀತು ಹೇಗೆ ?
ಜಾತಿಮತಭಾಷೆ ಬಣ್ಣಗಳ ಗೋಡೆಯ ನಡುವೆ
ನರಳುವ ಪಾಡು ತಪ್ಪೀತು ಹೇಗೆ ?
ನಮ್ಮ ನಿಮ್ಮ ಮನಸ್ಸು
ಮರುಭೂಮಿಯಾಗದ ಹಾಗೆ
ತಡೆಗಟ್ಟುವುದು ಹೇಗೆ ?
ಹೌದಲ್ಲವೇ ಸಖಿ? ಪ್ರೀತಿ-ಸ್ನೇಹಗಳಿಲ್ಲದೇ ನಮ್ಮ ಹೃದಯ ಬೆಂಗಾಡಾಗುವುದನ್ನು ತಪ್ಪಿಸುವದು ಹೇಗೆ? ಬರೀ ಸ್ವಾರ್ಥ, ಸಂಕುಚಿತ ಮನೋಭಾವ, ದ್ವೇಷ, ಅಸೂಯೆಗಳನ್ನೇ ತುಂಬಿಕೊಂಡು ಬರಡಾಗುತ್ತಿರುವ ನಮ್ಮೆಲ್ಲರ ಹೃದಯಗಳಲ್ಲೂ ಪ್ರೀತಿಯು ಚಿಗುರೊಡೆಯಬೇಕು. ಮರವಾಗಿ ಬೆಳೆಯಬೇಕು. ದಿಗಂತಕ್ಕೇರಿ ನಿಂತು ವಿಶ್ವವ್ಯಾಪಿಯಾಗಬೇಕು. ಆಗ ನಾವೆಲ್ಲರೂ ನಿಜವಾದ ಅರ್ಧದಲ್ಲಿ ಮಾನವರಾಗುತ್ತೇವೆ. ಇಲ್ಲದಿದ್ದರೆ ಭಾವನೆಗಳಿಲ್ಲದ ಬರಿಯ ಯಂತ್ರ ಮಾನವರಾಗುತ್ತೇವೆ! ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...