Home / ಲೇಖನ / ಇತರೆ / ಪ್ರೀತಿ ಇಲ್ಲದ ಮೇಲೆ

ಪ್ರೀತಿ ಇಲ್ಲದ ಮೇಲೆ

Hrudayaಪ್ರಿಯ ಸಖಿ,
ನಮ್ಮ ಸಮಾಜದಲ್ಲಿದ್ದ ಉನ್ನತ ಮೌಲ್ಯಗಳು ನಿರಂತರವಾಗಿ ಅಧೋಗತಿಗಿಳಿಯುವುದನ್ನು ಕಾಣುತ್ತಿದ್ದೇವೆ. ಇದಕ್ಕೆ ಕಾರಣವೇನು? ಹುಡುಕಹೊರಟರೆ ಸಾವಿರಾರು ಕಾರಣಗಳು ಸಿಕ್ಕಬಹುದು. ಆದರೆ ಕವಿ ಜಿ. ಎಸ್. ಶಿವರುದ್ರಪ್ಪನವರಿಗೆ ಹೊಳೆದಿರುವ ಒಂದೇ ಒಂದು ಮುಖ್ಯ ಕಾರಣ ನೋಡು.

ಪ್ರೀತಿ ಇಲ್ಲದ ಮೇಲೆ
ಹೂವು ಅರಳೀತು ಹೇಗೆ?
ಮೋಡ ಕಟ್ಟೀತು ಹೇಗೆ?
ಹನಿಯೊಡೆದು ಕೆಳಗಿಳಿದು
ನೆಲಕ್ಕೆ ಹಸಿರು ಮೂಡೀತು ಹೇಗೆ?

ಕವಿಯ ಭಾವನೆ ಎಷ್ಟೊಂದು ಅರ್ಥಗರ್ಭಿತವಾಗಿದೆಯಲ್ಲವೇ ಸಖಿ? ನಮ್ಮಗಳ ನಡುವೆ ಪ್ರೀತಿ ಇಲ್ಲದಿರುವುದೇ ಈ ಎಲ್ಲ ಅಧೋಗತಿಗೆ ಕಾರಣವಲ್ಲವೇ ಪ್ರೀತಿಯೊಂದಿದ್ದರೆ ಬೇರೆಲ್ಲವನ್ನು ಮಾಫಿ ಮಾಡಬಹುದು ಎಂತಹ ಕಷ್ಟವಿದ್ದರೂ ಹೊಂದಾಣಿಕೆ ಮಾಡಿಕೊಳ್ಳಬಹುದು. ಹೃದಯ ವಿಶಾಲವಾಗುತ್ತಾ ಹೋಗಿ ಎಲ್ಲೆಡೆಯೂ ಪ್ರೀತಿಯನ್ನೇ ತುಂಬಬಹುದು. ಆದರೆ ……… ಅದೇ ಇಲ್ಲದಿದ್ದರೇ? ಮನುಷ್ಯನಾಗಿದ್ದು ಏನು ಪ್ರಯೋಜನ?

ಕವನದ ಕೊನೆಯಲ್ಲಿ ಕವಿ ಅತ್ಯಂತ ಮಾರ್ಮಿಕವಾಗಿ ನಮ್ಮ ಮುಂದೆ ಪ್ರಶ್ನೆಗಳನ್ನಿಡುತ್ತಾರೆ.
ಪ್ರೀತಿ ಇಲ್ಲದ ಮೇಲೆ
ಸಂಶಯದ ಗಡಿಗಳುದ್ದಕ್ಕೂ,
ಸಿಡಿಗುಂಡುಗಳ ಕದನ ನಿಂತೀತು ಹೇಗೆ ?
ಜಾತಿಮತಭಾಷೆ ಬಣ್ಣಗಳ ಗೋಡೆಯ ನಡುವೆ
ನರಳುವ ಪಾಡು ತಪ್ಪೀತು ಹೇಗೆ ?
ನಮ್ಮ ನಿಮ್ಮ ಮನಸ್ಸು
ಮರುಭೂಮಿಯಾಗದ ಹಾಗೆ
ತಡೆಗಟ್ಟುವುದು ಹೇಗೆ ?
ಹೌದಲ್ಲವೇ ಸಖಿ? ಪ್ರೀತಿ-ಸ್ನೇಹಗಳಿಲ್ಲದೇ ನಮ್ಮ ಹೃದಯ ಬೆಂಗಾಡಾಗುವುದನ್ನು ತಪ್ಪಿಸುವದು ಹೇಗೆ? ಬರೀ ಸ್ವಾರ್ಥ, ಸಂಕುಚಿತ ಮನೋಭಾವ, ದ್ವೇಷ, ಅಸೂಯೆಗಳನ್ನೇ ತುಂಬಿಕೊಂಡು ಬರಡಾಗುತ್ತಿರುವ ನಮ್ಮೆಲ್ಲರ ಹೃದಯಗಳಲ್ಲೂ ಪ್ರೀತಿಯು ಚಿಗುರೊಡೆಯಬೇಕು. ಮರವಾಗಿ ಬೆಳೆಯಬೇಕು. ದಿಗಂತಕ್ಕೇರಿ ನಿಂತು ವಿಶ್ವವ್ಯಾಪಿಯಾಗಬೇಕು. ಆಗ ನಾವೆಲ್ಲರೂ ನಿಜವಾದ ಅರ್ಧದಲ್ಲಿ ಮಾನವರಾಗುತ್ತೇವೆ. ಇಲ್ಲದಿದ್ದರೆ ಭಾವನೆಗಳಿಲ್ಲದ ಬರಿಯ ಯಂತ್ರ ಮಾನವರಾಗುತ್ತೇವೆ! ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ಭಾಗ ೧ ಒಂದು ಯುನಿವರ್ಸಿಟೀನಲ್ಲಿ ಆಧ್ಯಾಪಕನಾಗಿರುವ ನಾನು ಕ್ಯಾಂಪಸ್ ಆವರಣದೊಳಗೇ ಇರುವ ಫ್ಲಾಟೊಂದರಲ್ಲಿ ಹೆಂಡತಿ ಮಕ್ಕಳ ಜತೆ ಮನೆ ಮಾಡಿಕೊಂಡಿದ್ದೇನೆ. ಮನೆ ಮತ್ತು ಆಫೀಸಿಗೆ ಹೆಚ್ಚೇನೂ ದೂರವಿಲ್ಲದ ಕಾರಣ ವಾಹನಗಳಿಗೆ ವೃಥಾ ಕಾಸು ಖರ್ಚು ಮಾಡಬೇಕಾದುದಿಲ್ಲ. ಮಧ್ಯಾಹ್ನ ಲಂಚಿಗೆ ಕೂಡ ಮನ...

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...