Home / ಲೇಖನ / ಇತರೆ / ಇದು ಮೊದಲು

ಇದು ಮೊದಲು

ಪ್ರಿಯ ಸಖಿ
ಅನ್ನವನು ಕೊಡು ಮೊದಲು
ಬಟ್ಟೆಯನು ಕೊಂಡು ಉಡಲು
ಕಟ್ಟಿಕೊಡು ಮನೆಗಳನು
ಬಳಿಕ ನೀನು ಕವಿಯಾಗಿ ಬಾ
ನೀತಿವಿದನಾಗಿ ಬಾ
ಶಾಸ್ತ್ರಿಯಾಗಿ ಧಾರ್ಮಿಕನಾಗಿ
ಮನುಜಕತೆಯನು ಕಲಿಸು ಬಾ
ಇವನದನು ಕಲಿಯ ಬಲ್ಲ!
ಇದು ಮೊದಲು ಆಮೇಲೆ ಉಳಿದುದೆಲ್ಲ!
ಗೋಪಾಲಕೃಷ್ಣ ಅಡಿಗರ ‘ಇದು ಮೊದಲು’ ಕವನದ ಈ ಕೊನೆಯ ಸಾಲುಗಳು ಮನವನ್ನು ಹೊಕ್ಕು ಎಷ್ಟೊಂದು ಆಳವಾಗಿ ತಟ್ಟುತ್ತವೆಯಲ್ಲವೇ ಸಖಿ? ಶಾಸ್ತ್ರ,  ನೀತಿ, ತತ್ವ, ಮೌಲ್ಯ, ಕಾನೂನು, ಮಾನವೀಯತೆ ಎಷ್ಟೆಲ್ಲಾ ಬುದ್ದಿ ಹೇಳಲು ತಯಾರಾಗಿದ್ದೇವೆ ನಾವು! ಆದರೆ ಹಸಿದ ಹೊಟ್ಟೆಗೆ ಅನ್ನ ನೀಡದೇ, ಮೈ ಮುಚ್ಚಲು ಬಟ್ಟೆ ಕೊಡದೇ, ಸುರಕ್ಷಿತವಾಗಿರಲು ಮನೆಯ ನೀಡದೇ ಏನು ಹೇಳಿದರೇನು? ಎಲ್ಲ ವ್ಯರ್ಥ ಎನ್ನುತ್ತಾರೆ ಕವಿ.

ಹಸಿದ ಹೊಟ್ಟೆಯ ಮುಂದೆ, ಬದುಕಿಗೆ ಬೇಕೇಬೇಕಾದ ಕೆಲವೊಂದು ಮೂಲಭೂತ ಅವಶ್ಶಕತೆಗಳ ಮುಂದೆ ಯಾವುದೇ ನೀತಿ-ತತ್ವಗಳೂ ಬೆಲೆಯಿಲ್ಲದ್ದಾಗುತ್ತದೆ. ಹೇಗಾದರೂ ಸರಿ ಏನು ಮಾಡಿಯಾದರೂ ಸರಿ ಹೊಟ್ಟೆ ತುಂಬಿಸಿಕೊಳ್ಳುವದು, ತನ್ಮೂಲಕ ಬದುಕುಳಿಯುವುದು ಹಸಿದವನ ಗುರಿಯಾಗಿರುತ್ತದೆ. ಅಲ್ಲಿ ಯಾವುದೇ ನೀತಿ-ನಿಯಮವೂ ಅವನನ್ನು ಎಚ್ಚರಿಸುವುದಿಲ್ಲ.

ಸಖಿ, ಇಂದಿನ ಸಮಾಜದ ಭ್ರಷ್ಟತೆಗೆ ಮೂಲ ಕಾರಣವೂ ಹಸಿವೇ ಆಗಿದೆ ಎಂಬುದು ಸಮಾಜವಾದಿಗಳ ನಿಲುವು. ಹಸಿವು ಹಿಂಗದ ಲಕ್ಷಾಂತರ ಒಡಲುಗಳು ಯಾವ ಕೀಳು ಮಟ್ಟಕ್ಕಾದರೂ ಇಳಿದು ಹಸಿವು ಹಿಂಗಿಸಿಕೊಳ್ಳಲು ಹಾತೊರೆಯುತ್ತವೆ. ಅದಕ್ಕೆಂದೇ ಕವಿ ಶೇಕ್ಸ್‍ಪಿಯರ್ “ಹಸಿವು ಎಲ್ಲವನ್ನೂ ಕಲಿಸುತ್ತದೆ” ಎನ್ನುತ್ತಾನೆ. ಉತ್ತಮ ಸಮಾಜದ ನಿರ್ಮಾಣವಾಗಬೇಕಾದರೆ ಮೊದಲು ಮನುಷ್ಯನ ಮೂಲಭೂತ ಅವಶ್ಶಕತೆಗಳನ್ನು ಪೂರೈಸಬೇಕು. ನಂತರವಷ್ಟೇ ನೀತಿ, ಕಾನೂನು, ಧರ್ಮ, ಕಲೆ, ಮಾನವೀಯತೆ ಇತ್ಯಾದಿ ಅವನಿಗೆ ಅರ್ಥವಾದಾವು. ಈ ಕುರಿತು ನಿನ್ನ ನಿಲುವೇನು ಸಖಿ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...